AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳಿಗೆ ನಾನು ಬಂಟ್ವಾಳ ಶಾಸಕ ಎಂದೇ ಗೊತ್ತಿಲ್ಲ, ರಮಾನಾಥ್ ರೈರನ್ನೇ ಸಚಿವ ಎಂದೇ ಭಾವಿಸಿದ್ದಾರೆ: ರಾಜೇಶ್ ನಾಯಕ್ ಆಕ್ರೋಶ

ವಿಧಾನಸಭೆಯಲ್ಲಿ ಶಿಷ್ಟಾಚಾರ ಉಲ್ಲಂಘನೆಯ ವಿಷಯ ಭಾರಿ ಚರ್ಚೆಗೆ ಕಾರಣವಾಯಿತು. ಚುನಾಯಿತ ಶಾಸಕರನ್ನು ಕಡೆಗಣಿಸಿ ಅಧಿಕಾರಿಗಳು ಪರಾಜಿತ ಅಭ್ಯರ್ಥಿಗಳಿಗೆ ಪ್ರಾಮುಖ್ಯತೆ ನೀಡುತ್ತಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಆಕ್ರೋಶ ವ್ಯಕ್ತಪಡಿಸಿದರು. ಕಾಮಗಾರಿಗಳ ಹಣ ಬಿಡುಗಡೆಗೆ ಮಾಜಿ ಶಾಸಕರ ಹೆಸರು ಬಳಸಲಾಗುತ್ತಿದ್ದು, ಇದು ಶಾಸಕರ ಹಕ್ಕುಚ್ಯುತಿ ಎಂದು ಸದನದಲ್ಲಿ ತೀವ್ರ ವಾಗ್ವಾದ ನಡೆಯಿತು. ಈ ಸಮಸ್ಯೆ ವ್ಯಾಪಕವಾಗಿದ್ದು, ಸರ್ಕಾರ ಮಧ್ಯಪ್ರವೇಶಿಸುವಂತೆ ಒತ್ತಾಯಿಸಲಾಯಿತು.

ಅಧಿಕಾರಿಗಳಿಗೆ ನಾನು ಬಂಟ್ವಾಳ ಶಾಸಕ ಎಂದೇ ಗೊತ್ತಿಲ್ಲ, ರಮಾನಾಥ್ ರೈರನ್ನೇ ಸಚಿವ ಎಂದೇ ಭಾವಿಸಿದ್ದಾರೆ: ರಾಜೇಶ್ ನಾಯಕ್ ಆಕ್ರೋಶ
ರಾಜೇಶ್​​ ನಾಯ್ಕ್​​​ ಹಾಗೂ ರಾಮನಾಥ್​​ ರೈ Image Credit source: Tv9 kannada
ಪ್ರಸನ್ನ ಗಾಂವ್ಕರ್​
| Edited By: |

Updated on: Mar 24, 2026 | 9:28 PM

Share

ಬೆಂಗಳೂರು, ಮಾ.24: ವಿಧಾನಸಭೆಯ ಅಧಿವೇಶನದಲ್ಲಿ ಇಂದು ಶಿಷ್ಟಾಚಾರ ಉಲ್ಲಂಘನೆಯ ವಿಷಯ ಭಾರಿ ಚರ್ಚೆಗೆ ಕಾರಣವಾಯಿತು. ಚುನಾಯಿತ ಶಾಸಕರನ್ನು ಕಡೆಗಣಿಸಿ, ಪರಾಜಿತ ಅಭ್ಯರ್ಥಿಗಳಿಗೆ ಅಧಿಕಾರಿಗಳು ಮಣೆ ಹಾಕುತ್ತಿದ್ದಾರೆ ಎಂಬ ಆರೋಪ ಸದನದಲ್ಲಿ ಪ್ರತಿಧ್ವನಿಸಿತು. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ್ದಾರೆ. “ನಾನು ಬಂಟ್ವಾಳದ ಶಾಸಕ ಎಂಬುದು ಅಧಿಕಾರಿಗಳಿಗೆ ಗೊತ್ತೇ ಇಲ್ಲದಂತಿದೆ. ಮಾಜಿ ಸಚಿವ ರಮಾನಾಥ್ ರೈ ಅವರನ್ನು ಅಧಿಕಾರಿಗಳು ಇನ್ನೂ ಸಚಿವ ಎಂದೇ ಭಾವಿಸಿದ್ದಾರೆ. ಕಾಮಗಾರಿಗಳ ಹಣ ಬಿಡುಗಡೆ ಮಾಡಲು ಮಾಜಿ ಶಾಸಕರ ಹೆಸರನ್ನು ಬಳಸಲಾಗುತ್ತಿದೆ. ಅಷ್ಟೇ ಅಲ್ಲದೆ, ಕಾಮಗಾರಿ ಏಜೆನ್ಸಿಗಳನ್ನು ಗುರುತಿಸುವಂತೆ ಮಾಜಿ ಶಾಸಕರಿಗೇ ಅಧಿಕಾರಿಗಳು ಪತ್ರ ಬರೆಯುತ್ತಿದ್ದಾರೆ,” ಎಂದು ರಾಜೇಶ್ ನಾಯಕ್ ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರಿ ಆದೇಶದ ಮಂಜೂರಾತಿ ನೀಡುವಾಗ ಶಿಷ್ಟಾಚಾರದ ಉಲ್ಲಂಘನೆ ಆಗುತ್ತಿಲ್ಲವೇ? ಪರಾಜಿತ ಅಭ್ಯರ್ಥಿಗಳ ಹೆಸರಿನಲ್ಲಿ ಅಧಿಕಾರಿಗಳು ಹಣ ಮಂಜೂರು ಮಾಡುತ್ತಿದ್ದಾರೆ ಎಂದರೆ ಇದರ ಅರ್ಥವೇನು? ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಪರಾಜಿತ ಅಭ್ಯರ್ಥಿಗಳ ಶಿಫಾರಸಿನ ಮೇಲೆ ಪತ್ರ ಬರೆಯುತ್ತಿವೆ. ಹೀಗಾದರೆ ಚುನಾಯಿತ ಶಾಸಕರಿಗೆ ಬೆಲೆ ಎಲ್ಲಿದೆ? ಇದು ಶಾಸಕರ ಹಕ್ಕುಚ್ಯುತಿಯಲ್ಲವೇ?” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ: ಅಜಿತ್ ಪವಾರ್ ವಿಮಾನ ಅಪಘಾತ ಆಕಸ್ಮಿಕವಲ್ಲ, ವ್ಯವಸ್ಥಿತ ಕೊಲೆ? ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

“ನನ್ನ ಕ್ಷೇತ್ರದಲ್ಲೂ ಇದೇ ಪರಿಸ್ಥಿತಿ ಇದೆ. ಪರಾಜಿತ ಅಭ್ಯರ್ಥಿಯ ಪತ್ರದ ಆಧಾರದ ಮೇಲೆ ಹಣ ಬಿಡುಗಡೆಯಾಗುತ್ತಿದೆ. ಶಾಸಕರು ಕೇವಲ ಹೆಸರಿಗಷ್ಟೇ ಇರಬೇಕೇ?” ಎಂದು ಪ್ರಶ್ನಿಸಿದರು.ಈ ವಿಷಯದ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ನಡುವೆ ತೀವ್ರ ವಾಗ್ವಾದ ನಡೆಯಿತು. ಎಲ್ಲ ಕ್ಷೇತ್ರಗಳಲ್ಲೂ ಪರಾಜಿತ ಅಭ್ಯರ್ಥಿಗಳ ಹಸ್ತಕ್ಷೇಪ ಹೆಚ್ಚಾಗುತ್ತಿದೆ ಎಂಬುದು ವಿರೋಧ ಪಕ್ಷದ ಶಾಸಕರ ಒಮ್ಮತದ ಆರೋಪವಾಗಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಜಬ್ಬಾರ್, ನಸೀರ್ ರಾಜೀನಾಮೆಗೆ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್!
ಜಬ್ಬಾರ್, ನಸೀರ್ ರಾಜೀನಾಮೆಗೆ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್!