AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ಬೆಂಗಳೂರಿನಲ್ಲಿ 65% ಮತದಾನದ ಟಾರ್ಗೆಟ್ ನೀಡಿದ ಚುನಾವಣಾ ಆಯೋಗ

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ ಶೇ 65 ರಷ್ಟು ಮತದಾನವಾಗಬೇಕೆಂದು ಕೇಂದ್ರ ಚುನಾವಣಾ ಆಯೋಗ ಬೆಂಗಳೂರು ನಗರ ಜಿಲ್ಲಾಡಳಿತಕ್ಕೆ ಗುರಿ ನೀಡಿದೆ.

Karnataka Assembly Election 2023: ಬೆಂಗಳೂರಿನಲ್ಲಿ 65% ಮತದಾನದ ಟಾರ್ಗೆಟ್ ನೀಡಿದ ಚುನಾವಣಾ ಆಯೋಗ
ಸಾಂಧರ್ಬಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Mar 06, 2023 | 7:35 AM

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Karnataka Assembly Election) ಹತ್ತಿರವಾಗುತ್ತಿದೆ. ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವಾದ ಮತದಾನಕ್ಕೆ ದಿನಗಣನೆ ಶುರುವಾಗಿದೆ. ಮತದಾನ ರಾಜಕೀಯ ನಾಯಕರ, ಪಕ್ಷದ ಮತ್ತು ದೇಶದ ಚಿತ್ರಣವನ್ನೇ ಬದಲಾಯಿಸುತ್ತದೆ. ಮತದಾನ ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಹಿನ್ನೆಲೆ ಪ್ರತಿ ಚುನಾವಣೆಯಲ್ಲೂ, ಕೇಂದ್ರ ಚುನಾವಣಾ ಆಯೋಗ (Indian Election Commission) ಗರಿಷ್ಠ ಮತದಾನ ಆಗಬೇಕು ಎಂಬ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತದೆ. ಹೀಗೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ (Bengaluru) ಶೇ 65 ರಷ್ಟು ಮತದಾನವಾಗಬೇಕೆಂದು (65% Voting) ಕೇಂದ್ರ ಚುನಾವಣಾ ಆಯೋಗ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲು ಬೆಂಗಳೂರು ನಗರ ಜಿಲ್ಲಾ ಮತ್ತು ಬೃಹತ್​ ಬೆಂಗಳೂರು ಮಹಾನಗರ ಪಾಲಿಕ (BBMP)ಗೆ ಸೂಚನೆ ನೀಡಿದೆ.

ಈ ಗುರಿಯು ಬೆಂಗಳೂರು ನಗರ ಜಿಲ್ಲೆ ಮತ್ತು ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಎಲ್ಲ ನಗರಗಳಿಗೆ ಅನ್ವಯವಾಗುತ್ತದೆ. 28 ವಿಧಾನಸಭಾ ಕ್ಷೇತ್ರಗಳಲ್ಲಿ ಆನೆಕಲ್​, ಬೆಂಗಳೂರು ದಕ್ಷಿಣ, ಯಶವಂತಪುರ, ದಾಸರಹಳ್ಳಿ, ಬ್ಯಾಟರಾಯನಪುರ, ಮಹದೇವಪುರ ಮತ್ತು ಯಲಹಂಕ ಜಿಲ್ಲಾಡಳಿತಕ್ಕೆ ಒಳಪಡುತ್ತವೆ. ಇನ್ನುಳಿದ ವಿಧಾನಸಭಾ ಕ್ಷೇತ್ರಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ತಿಳಿಸಿದ್ದಾರೆ.

ಕಳೆದ ಚುನಾವಣೆಗಳಲ್ಲಿ ಬೆಂಗಳೂರಲ್ಲಿ ಶೇ 50 ರಿಂದ 55 ರಷ್ಟು ಮತದಾನವಾಗಿತ್ತು. ಎಂದಿಗೂ ಶೇ 60 ಕ್ಕಿಂತ ಹೆಚ್ಚಿನ ಮತದಾನವಾಗಿಲ್ಲ. ಬೆಂಗಳೂರಲ್ಲಿನ 90 ಲಕ್ಷ ಮತದಾರರಲ್ಲಿ 32 ಲಕ್ಷ ಮತದಾರರು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುತ್ತಾರೆ. ಕಳೆದ ಬಾರಿ 2018ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿ ಶೇ 54.1 ರಷ್ಟು ಮತದಾನವಾಗಿತ್ತು. ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ಶೇ 57.8 ರಷ್ಟು ಮತದಾನವಾಗಿತ್ತು. ಇನ್ನು ದಾಸರಹಳ್ಳಿಯಲ್ಲಿ ಶೇ 48 ರಷ್ಟು ಮಾತ್ರ ಮತದಾನವಾಗಿತ್ತು ಎಂದು ಹೇಳಿದ್ದಾರೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಭಾರತದಲ್ಲೆ ಅತಿ ದೊಡ್ಡದಾದ ವಿಧಾನಸಭಾ ಕ್ಷೇತ್ರವಾಗಿದೆ. ಸಾಮಾನ್ಯವಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 2-3 ಲಕ್ಷ ಮತದಾರರಿರುತ್ತಾರೆ. ಆದರ ಬೆಂಗಳೂರು ದಕ್ಷಿಣ ಒಂದರಲ್ಲೆ 6.5 ಲಕ್ಷ ಮತದಾರರಿದ್ದಾರೆ. ಅಲ್ಲದೆ ಬೇರೆ ವಿಧಾನಸಭಾ ಕ್ಷೇತ್ರದಲ್ಲು 3-4 ಲಕ್ಷ ಮತದಾರರಿದ್ದಾರೆ ಎಂದು ತಿಳಿಸಿದರು.

ಇನ್ನು ಕಡಿಮೆ ಮತದಾನಕ್ಕೆ ಕಾರಣ ನೋಡುವುದಾದರೇ, ಕಡಿಮೆ ಮತದಾನವಾಗಿರುವ ವಿಧಾನಸಭಾ ಕ್ಷೇತ್ರಗಳನ್ನು ವಿಶ್ಲೇಷಿಸಿದಾಗ ವಾರಾಂತ್ಯದ ರಜೆಯ ನಂತರ ಮತದಾರರು ತಮ್ಮ ಊರುಗಳಿಗೆ ಹೋಗುವುದು. ಒಂದು ಮತದಿಂದ ಯಾವುದೇ ಬದಲಾವಣೆಯಾಗುವುದಿಲ್ಲ ಎಂಬ ನಕಾರಾತ್ಮಕ ಮನಸ್ಥಿತಿ ಮತ್ತು ಮತದಾನ ಪಟ್ಟಿಯಲ್ಲಿನ ದೋಷಗಳು ಕಡಿಮೆ ಮತದಾನಕ್ಕೆ ಕಾರಣವಾಗಿದೆ. ಈ ಎಲ್ಲ ಸಮಸ್ಯೆಗಳಿಂದ ಮತದಾನ ಪ್ರಕ್ರಿಯೆಯಿಂದ ಮತದಾರರು ಹಿಂದುಳಿಯುತ್ತಿದ್ದಾರೆ. ಆದರೆ ಈಗ ನಾವು ಈ ಸಮಸ್ಯೆಗಳನ್ನು ಪರಿಹರಿಸಿದ್ದೇವೆ ಎಂದು ತಿಳಿಸಿದ್ದಾರೆ.

ರೌಡಿ ಶೀಟರ್‌ಗಳಿಗೆ ಖಡಕ್​ ಎಚ್ಚರಿಕೆ

ಸಮಾಜ ವಿರೋಧಿ ಚಟುವಟಿಕೆಗಳು ಅಥವಾ ಅಪರಾಧ ಹಿನ್ನೆಲೆಯುಳ್ಳವರ ಚಟುವಟಿಕೆಗಳ ಮೇಲೆ ಜಿಲ್ಲಾಡಳಿತ ಕಣ್ಣಿಟ್ಟಿದೆ. ಪೊಲೀಸ್ ವರದಿಯ ಆಧಾರದ ಮೇಲೆ ನಾವು ಈಗಾಗಲೇ ಮೂವರು ರೌಡಿ ಶೀಟರ್‌ಗಳನ್ನು ಜೈಲಿಗೆ ಕಳುಹಿಸಿದ್ದೇವೆ. 10 ರೌಡಿ ಶೀಟರ್‌ಗಳಿಗೆ ನೋಟಿಸ್ ನೀಡಿದ್ದೇವೆ. ಪೊಲೀಸರ ಶಿಫಾರಸಿನ ಆಧಾರದ ಮೇಲೆ ರೌಡಿಶೀಟರ್​ಗಳಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುತ್ತೇವೆ. ವಿಚಾರಣೆಯಲ್ಲಿ, ಚುನಾವಣಾ ಪ್ರಕ್ರಿಯೆಗೆ ಅಡ್ಡಿಪಡಿಸಲು ಯೋಜಿಸುತ್ತಿದ್ದಾರೆ ಎಂದು ಸಾಬೀತಾದರೆ ಅವರನ್ನು ಬಂಧಿಸಿ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್