AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸೆಂಬ್ಲಿ ಚುನಾವಣೆ ನಂತರವೇ ಬಿಬಿಎಂಪಿಗೆ ಚುನಾವಣೆ! ವಾರ್ಡ್ ಮರುವಿಂಗಡಣೆ, ಮೀಸಲಾತಿ ಪರಿಷ್ಕರಣೆಗೆ ಸುಪ್ರೀಂ ಕೋರ್ಟ್ ಡೆಡ್ ಲೈನ್

ವಿಧಾನಸಭೆ ಚುನಾವಣೆ ನಂತರವೇ ಬಿಬಿಎಂಪಿಗೆ ಚುನಾವಣೆ ನಡೆಸಬೇಕು. ವಾರ್ಡ್​ ಮರುವಿಂಗಡಣೆ, ಮೀಸಲಾತಿ ಪರಿಷ್ಕರಣೆಗೆ 2023ರ ಮಾರ್ಚ್ 31ರ ವರೆಗೆ ಸುಪ್ರೀಂ ಕೋರ್ಟ್​ ಗಡುವು ನೀಡಿದೆ.​

ಅಸೆಂಬ್ಲಿ ಚುನಾವಣೆ ನಂತರವೇ ಬಿಬಿಎಂಪಿಗೆ ಚುನಾವಣೆ! ವಾರ್ಡ್ ಮರುವಿಂಗಡಣೆ, ಮೀಸಲಾತಿ ಪರಿಷ್ಕರಣೆಗೆ ಸುಪ್ರೀಂ ಕೋರ್ಟ್ ಡೆಡ್ ಲೈನ್
ಸುಪ್ರೀಂಕೋರ್ಟ್
TV9 Web
| Edited By: |

Updated on:Dec 15, 2022 | 2:05 PM

Share

ಬೆಂಗಳೂರು: ಬಿಬಿಎಂಪಿ ಚುನಾವಣೆ(BBMP Election) ಮುಂದೂಡಲು ಬಯಸಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್(Supreme Court) ಬಿಗ್ ರಿಲೀಫ್ ನೀಡಿದೆ. ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ ಒದಗಿಸಲು ಮಾರ್ಚ್ 31 ರೊಳಗೆ ಕಾಲಾವಕಾಶ ನೀಡಿದೆ. ಇದರಿಂದ ಬಿಬಿಎಂಪಿ ಚುನಾವಣೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ನಿರಾಸೆಯಾಗಿದೆ. 2023 ರ ವಿಧಾನಸಭೆ ಚುನಾವಣೆ(Karnataka Assembly Elections 2023) ಬಳಿಕವೇ ಬಿಬಿಎಂಪಿ ಚುನಾವಣೆ ನಡೆಯುವುದು ಖಚಿತವಾಗಿದೆ. ಏಕೆಂದರೆ ಬಿಬಿಎಂಪಿಗೆ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ ನೀಡಿ ಚುನಾವಣೆ ನಡೆಸಲು ಕಾಲಾವಕಾಶ ಬೇಕಿರುವುದರಿಂದ ವಿಧಾನಸಭೆ ಚುನಾವಣೆ ಬಳಿಕವೇ ಬಿಬಿಎಂಪಿಗೆ ಚುನಾವಣೆ ನಡೆಯುವುದು ಖಚಿತವಾದಂತಾಗಿದೆ.

ಬಿಬಿಎಂಪಿ ಅವಧಿ ಮುಗಿದು 2 ವರ್ಷ ಕಳೆದರೂ ಚುನಾವಣೆ ನಡೆಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಸುಪ್ರೀಂಕೋರ್ಟ್ ಈ ಹಿಂದೆ ಚುನಾವಣೆ ನಡೆಸುವಂತೆ ಆದೇಶ ನೀಡಿದ್ದರೂ, ಬಿಬಿಎಂಪಿ ಮೀಸಲಾತಿಯಲ್ಲಿನ ಲೋಪದೋಷಗಳಿಂದಾಗಿ ಚುನಾವಣೆ ನಡೆಸಲು ಸಾಧ್ಯವಾಗಿರಲಿಲ್ಲ. ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ನವೆಂಬರ್ 30 ರೊಳಗೆ ಮೀಸಲಾತಿ ಪಟ್ಟಿ ಪ್ರಕಟಿಸಿ ಡಿಸೆಂಬರ್ 31 ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು. ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ ನೀಡುವಂತೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಆಧರಿಸಿ ಸರ್ಕಾರ ಮೀಸಲಾತಿ ನಿಗದಿಪಡಿಸಲು ಆಯೋಗ ರಚಿಸಿತ್ತು.

ಇದನ್ನೂ ಓದಿ: ಕೊಪ್ಪಳ: ರಾಜ್ಯ ಬಿಜೆಪಿ ನಾಯಕರೊಂದಿಗೆ ಬಿಎಸ್ ಯಡಿಯೂರಪ್ಪ ಮುನಿಸಿಕೊಂಡಿರುವುದು ಸಾರ್ವಜನಿಕವಾಗುತ್ತಿದೆ!

ನ್ಯಾಯಮೂರ್ತಿ ಭಕ್ತವತ್ಸಲ ಆಯೋಗ ಬಿಬಿಎಂಪಿಗೆ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ ವರದಿ ನೀಡಲು ಕಾಲಾವಕಾಶ ಕೋರಿತ್ತು. ಇದರಿಂದ ಬಿಬಿಎಂಪಿ ಚುನಾವಣೆ ವಿಳಂಬವಾಗುವುದನ್ನು ಅರಿತಿದ್ದ ರಾಜ್ಯ ಚುನಾವಣಾ ಆಯೋಗ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿ, ತಕ್ಷಣ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಮನವಿ ಮಾಡಿತ್ತು. ಆದರೆ ಹಿಂದುಳಿತ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡದೇ ಚುನಾವಣೆ ನಡೆಸುವುದು ಸರಿಯಲ್ಲವೆಂದು ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಹಾಗೂ ನ್ಯಾಯಮೂರ್ತಿ ಹಿಮಾ ಕೊಹ್ಲಿಯವರಿದ್ದ ಪೀಠ ಮಾರ್ಚ್ 31 ರೊಳಗೆ ಮೀಸಲಾತಿ ವರದಿ ಸಲ್ಲಿಸುವಂತೆ ಸರ್ಕಾರ ಹಾಗೂ ಆಯೋಗಕ್ಕೆ ಸೂಚಿಸಿದೆ. ಆದರೆ ಅಷ್ಟರಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆ ಇದೆ. ಹೀಗಾಗಿ ಮಾರ್ಚ್ 31 ರೊಳಗೆ ಆಯೋಗ ವರದಿ ನೀಡಿದರೂ ಅದನ್ನು ಆಧರಿಸಿ ಮೀಸಲಾತಿ ನಿಗದಿ ಪಡಿಸಿ ಚುನಾವಣೆ ನಡೆಸುವುದು ಅಸಾಧ್ಯವಾಗಲಿದೆ. ಹೀಗಾಗಿ ವಿಧಾನಸಭೆ ಚುನಾವಣೆ ನಂತರ ಬಿಬಿಎಂಪಿ ಚುನಾವಣೆ ನಡೆಯುವುದು ಬಹುತೇಕ ಖಚಿತವಾದಂತಾಗಿದೆ. ಹೀಗಾಗಿ ಬಿಬಿಎಂಪಿ ಕಾರ್ಪೊರೇಟರ್ ಆಗುವ ಕನಸು ಹೊತ್ತಿದ್ದವರಿಗೆ ನಿರಾಸೆಯಾದರೆ, ಬಿಬಿಎಂಪಿ ಚುನಾವಣೆ ಮುಂದೂಡಿಕೆ ಬಯಸಿದ್ದ ಆಡಳಿತ ಪಕ್ಷ ಹಾಗೂ ವಿರೋಧಪಕ್ಷಗಳಿಗೆ ಸುಪ್ರೀಂಕೋರ್ಟ್ ಆದೇಶ ನೆಮ್ಮದಿ ತಂದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:45 pm, Thu, 15 December 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?