AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka News: ರಾಜ್ಯದಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ, ತೆರವಾಗಿರುವ ಸ್ಥಾನಗಳಿಗೂ ಚುನಾವಣೆ

ಡಿಸೆಂಬರ್ 27ರಂದು ಚಿಕ್ಕಮಗಳೂರು, ಶಿರಾ, ಗದಗ-ಬೆಟಗೇರಿ, ಹೊಸಪೇಟೆ-ಹೆಬ್ಬಗೋಡಿ ನಗರಸಭೆಗಳಿಗೆ ಮತದಾನ ನಡೆಯಲಿದೆ. 5 ನಗರಸಭೆ, 3 ಪುರಸಭೆ, 1 ಪಟ್ಟಣ ಪಂಚಾಯಿತಿಯಲ್ಲಿ ತೆರವಾಗಿರುವ ಸ್ಥಾನಗಳಿಗೂ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ.

Karnataka News: ರಾಜ್ಯದಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ, ತೆರವಾಗಿರುವ ಸ್ಥಾನಗಳಿಗೂ ಚುನಾವಣೆ
ಸಾಂದರ್ಭಿಕ ಚಿತ್ರ
TV9 Web
| Updated By: ಸಾಧು ಶ್ರೀನಾಥ್​|

Updated on:Nov 29, 2021 | 1:49 PM

Share

ಬೆಂಗಳೂರು: ಅವಧಿ ಮುಕ್ತಾಯಗೊಂಡ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ (karnataka local body elections) ಘೋಷಣೆ ಮಾಡಿದೆ. 4 ನಗರಸಭೆ, 19 ಪುರಸಭೆ, 35 ಪ.ಪಂ.ಗೆ ಡಿ. 27ರಂದು ಮತದಾನ ನಡೆಯಲಿದೆ. ಡಿಸೆಂಬರ್ 30ರಂದು ಫಲಿತಾಂಶ ಹೊರಬೀಳಲಿದೆ. ಡಿಸೆಂಬರ್ 27ರಂದು ಚಿಕ್ಕಮಗಳೂರು, ಶಿರಾ, ಗದಗ-ಬೆಟಗೇರಿ, ಹೊಸಪೇಟೆ-ಹೆಬ್ಬಗೋಡಿ ನಗರಸಭೆಗಳಿಗೆ ಮತದಾನ ನಡೆಯಲಿದೆ. 5 ನಗರಸಭೆ, 3 ಪುರಸಭೆ, 1 ಪಟ್ಟಣ ಪಂಚಾಯಿತಿಯಲ್ಲಿ ತೆರವಾಗಿರುವ ಸ್ಥಾನಗಳಿಗೂ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ. ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ತೆರವಾಗಿರುವ 386 ಸ್ಥಾನಗಳಿಗೂ ಉಪಚುನಾವಣೆ ನಡೆಯಲಿದೆ

ಡಿಸೆಂಬರ್ 27ರಂದು ಅಥಣಿ, ಅಣ್ಣಿಗೇರಿ, ಬಂಕಾಪುರ, ಜಿಗಣಿ, ಚಂದಾಪುರ, ಬಿಡದಿ, ಮಲೆಬೆನ್ನೂರು, ಕಾಪು, ಹಾರೋಗೇರಿ, ಮುಗಳಖೋಡ, ಮುನವಳ್ಳಿ, ಉಗಾರಖುರ್ದ, ಕಾರಟಗಿ, ಕುರೆಕುಪ್ಪ, ಕುರುಗೋಡು, ಹಗರಿಬೊಮ್ಮನಹಳ್ಳಿ, ಮಸ್ಕಿ, ಕೆಂಭಾವಿ, ಕಕ್ಕೇರಾ ಪುರಸಭೆಗಳಿಗೆ ಮತದಾನ ನಡೆಯಲಿದೆ. ಡಿ. 27ರಂದು 35 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಅವು ನಾಯಕನಹಟ್ಟಿ, ವಿಟ್ಲ, ಕೋಟೆಕಾರು, ಎಂ.ಕೆ.ಹುಬ್ಬಳ್ಳಿ, ಕಂಕನವಾಡಿ, ನಾಗನೂರ, ಯಕ್ಸಾಂಬಾ, ಕಿತ್ತೂರು, ಅರಭಾವಿ, ಐನಾಪುರ, ಶೇಡಬಾಳ, ಚಿಂಚಿಲಿ, ಬೋರಗಾಂವ್, ಕಲ್ಲೋಳಿ, ನಲತವಾಡ, ನಿಡಗುಂದಿ, ದೇವರಹಿಪ್ಪರಗಿ, ಅಲಮೇಲ, ಮನಗೂಳಿ, ಕೊಲ್ಹಾರ, ಕಮತಗಿ, ಬೆಳಗಲಿ, ಅಮೀನಗಡ, ಗುತ್ತಲ, ಜಾಲಿ, ತಾವರಗೇರಾ, ಕುಕನೂರ, ಭಾಗ್ಯನಗರ, ಕನಕಗಿರಿ, ಮರಿಯಮ್ಮನಹಳ್ಳಿ, ಕವಿತಾಳ, ತುರವಿಹಾಳ, ಬಳಗಾನೂರು, ಸಿರವಾರ ಪಟ್ಟಣ ಪಂಚಾಯಿತಿಗೆ ಮತದಾನ ನಡೆಯಲಿದೆ.

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತ್​ಗಳಿಗೆ ಚುನಾವಣೆ ಘೋಷಣೆ

ಡಿಸೆಂಬರ್ 13 ಚುನಾವಣಾ ಅಧಿಸೂಚನೆ ಡಿಸೆಂಬರ್ 17 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಡಿಸೆಂಬರ್ 27 ಮತದಾನ ಡಿಸೆಂಬರ್ 30 ಫಲಿತಾಂಶ ಡಿಸೆಂಬರ್ 13 ರಿಂದ ನೀತಿಸಂಹಿತೆ ಜಾರಿ

Published On - 1:46 pm, Mon, 29 November 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ