AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯಲ್ಲಿ ಮೂರು ಪಟ್ಟು ಏರಿಕೆ

ಸಿಲಿಕಾನ್‌ ಸಿಟಿ ಮಂದಿಗೆ ಪೆಟ್ರೋಲ್ ಡಿಸೇಲ್​​‌ಗಿಂತ ಇದೀಗ ಎಲೆಕ್ಟ್ರಿಕ್ ವಾಹನಗಳೇ ಫೆವರೇಟ್ ಆದಂತೆ ಕಾಣ್ತಿದೆ. ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ‌ ಸಂಖ್ಯೆಯಲ್ಲಿ 2-3 ಪಟ್ಟು ಏರಿಕೆಯಾಗಿರುವುದೇ ಇದಕ್ಕೆ ಉದಾಹರಣೆ.

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯಲ್ಲಿ ಮೂರು ಪಟ್ಟು ಏರಿಕೆ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Dec 21, 2023 | 7:22 AM

Share

ಬೆಂಗಳೂರು, ಡಿಸೆಂಬರ್ 21: ವಾಹನಗಳ ವಿಚಾರದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿಗರು (Bengaluru) ಇದೀಗ ಹೊಸ ನಿರ್ಧಾರ ತಗೊಂಡಂತೆ ಕಾಣಿಸುತ್ತಿದೆ. ಇಷ್ಟು ದಿನ ಪೆಟ್ರೋಲ್, ಡಿಸೇಲ್ ಹಾಕಿಸಿಕೊಂಡು ರಸ್ತೆಯಿಡಿ ಹೊಗೆ ಉಗುಳುತ್ತಿದ್ದವರು ಇದೀಗ ಎಲೆಕ್ಟ್ರಿಕ್ ವಾಹನದತ್ತ (electric vehicles) ಮುಖ ಮಾಡಿದ್ದಾರೆ‌. ಏರುತ್ತಿರುವ ಪೆಟ್ರೋಲ್, ಡಿಸೇಲ್ ರೇಟ್ ಜನರ ಜೇಬಿಗೆ ಕತ್ತರಿ ಹಾಕಿದೆ. ವಾಹನಗಳು ಉಗುಳುವ ಹೊಗೆ ಮಾಲಿನ್ಯವಾಗಿ ಜನರ ಜೀವ ಹಿಂಡುತ್ತಿದೆ. ಇದಕ್ಕೆ ಮುಕ್ತಿ ನೀಡಲು ಬೆಂಗಳೂರು ನಗರವಾಸಿಗಳು ಮುಂದಾಗಿದ್ದಾರೆ.

ಸಿಲಿಕಾನ್‌ ಸಿಟಿ ಮಂದಿಗೆ ಪೆಟ್ರೋಲ್ ಡಿಸೇಲ್​​‌ಗಿಂತ ಇದೀಗ ಎಲೆಕ್ಟ್ರಿಕ್ ವಾಹನಗಳೇ ಫೆವರೇಟ್ ಆದಂತೆ ಕಾಣ್ತಿದೆ. ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ‌ ಸಂಖ್ಯೆಯಲ್ಲಿ 2-3 ಪಟ್ಟು ಏರಿಕೆಯಾಗಿರುವುದೇ ಇದಕ್ಕೆ ಉದಾಹರಣೆ. ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗಿರೋದು, ನಿಜಕ್ಕೂ ಉತ್ತಮ ಬೆಳವಣಿಗೆ ಅನ್ನೋದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರ ಮಾತು.

2017-2018ರ ಹಣಕಾಸಿನ ವರ್ಷದಲ್ಲಿ ದ್ವಿಚಕ್ರ, ತ್ರಿ ಚಕ್ರ, ನಾಲ್ಕು ಚಕ್ರದ ವಾಹನ ಸೇರಿ ಒಟ್ಟು 1992 ವಾಹನಗಳು ನೋಂದಣಿಯಾಗಿದ್ದವು. 2018-19 ರಲ್ಲಿ 5542, 2019-20ರಲ್ಲಿ 6674, 2020-21 ರಲ್ಲಿ 11,593 ಎಲೆಕ್ಟ್ರಿಕಲ್ ವಾಹನಗಳು ರಿಜಿಸ್ಟ್ರೇಷನ್ ಆಗಿವೆ. 2021ರ ಬಳಿಕ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯಲ್ಲಿ ಮೂರು ಪಟ್ಟು ಹೆಚ್ಚಳವಾಗಿದ್ದು, 2021-22ರಲ್ಲಿ 44,217, 2022-23ರಲ್ಲಿ 1,10,492 ವಾಹನಗಳು ನೋಂದಣಿಯಾಗಿದ್ರೆ, 2023-24 ರಲ್ಲಿ ಬರೋಬ್ಬರಿ 1,03,009 ಎಲೆಕ್ಟ್ರಿಕಲ್ ವಾಹನಗಳು ರಿಜಿಸ್ಟ್ರೇಷನ್ ಆಗಿವೆ.

ಇದನ್ನೂ ಓದಿ: ಹೊಸ ಬಗೆಯ ಆಹಾರದೊಂದಿಗೆ ಗ್ರಾಹಕರ ಸೇವೆಗೆ ಸಿದ್ದಗೊಂಡ ಇಂದಿರಾ ಕ್ಯಾಂಟೀನ್: ಹೊಸ ಮೆನು ಬಿಡುಗಡೆ ಮಾಡಿದ ಸಿಎಂ

ಒಟ್ಟಿನಲ್ಲಿ ಪೆಟ್ರೋಲ್ -ಡಿಸೇಲ್ ವಾಹನಗಳಿಗಿಂತ ಜನರು ಎಲೆಕ್ಟ್ರಿಕಲ್ ವಾಹನಗಳನ್ನ ಹೆಚ್ಚು ಬಳಕೆ ಮಾಡ್ತಿರೋದು, ಮಾಲಿನ್ಯದ ಹಿತತೃಷ್ಟಿಯಿಂದ ನಿಜಕ್ಕೂ ಒಳ್ಳೆಯ ಬೆಳವಣಿಗೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ