AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯಲ್ಲಿ ಮೂರು ಪಟ್ಟು ಏರಿಕೆ

ಸಿಲಿಕಾನ್‌ ಸಿಟಿ ಮಂದಿಗೆ ಪೆಟ್ರೋಲ್ ಡಿಸೇಲ್​​‌ಗಿಂತ ಇದೀಗ ಎಲೆಕ್ಟ್ರಿಕ್ ವಾಹನಗಳೇ ಫೆವರೇಟ್ ಆದಂತೆ ಕಾಣ್ತಿದೆ. ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ‌ ಸಂಖ್ಯೆಯಲ್ಲಿ 2-3 ಪಟ್ಟು ಏರಿಕೆಯಾಗಿರುವುದೇ ಇದಕ್ಕೆ ಉದಾಹರಣೆ.

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯಲ್ಲಿ ಮೂರು ಪಟ್ಟು ಏರಿಕೆ
ಸಾಂದರ್ಭಿಕ ಚಿತ್ರ
Kiran Surya
| Edited By: |

Updated on: Dec 21, 2023 | 7:22 AM

Share

ಬೆಂಗಳೂರು, ಡಿಸೆಂಬರ್ 21: ವಾಹನಗಳ ವಿಚಾರದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿಗರು (Bengaluru) ಇದೀಗ ಹೊಸ ನಿರ್ಧಾರ ತಗೊಂಡಂತೆ ಕಾಣಿಸುತ್ತಿದೆ. ಇಷ್ಟು ದಿನ ಪೆಟ್ರೋಲ್, ಡಿಸೇಲ್ ಹಾಕಿಸಿಕೊಂಡು ರಸ್ತೆಯಿಡಿ ಹೊಗೆ ಉಗುಳುತ್ತಿದ್ದವರು ಇದೀಗ ಎಲೆಕ್ಟ್ರಿಕ್ ವಾಹನದತ್ತ (electric vehicles) ಮುಖ ಮಾಡಿದ್ದಾರೆ‌. ಏರುತ್ತಿರುವ ಪೆಟ್ರೋಲ್, ಡಿಸೇಲ್ ರೇಟ್ ಜನರ ಜೇಬಿಗೆ ಕತ್ತರಿ ಹಾಕಿದೆ. ವಾಹನಗಳು ಉಗುಳುವ ಹೊಗೆ ಮಾಲಿನ್ಯವಾಗಿ ಜನರ ಜೀವ ಹಿಂಡುತ್ತಿದೆ. ಇದಕ್ಕೆ ಮುಕ್ತಿ ನೀಡಲು ಬೆಂಗಳೂರು ನಗರವಾಸಿಗಳು ಮುಂದಾಗಿದ್ದಾರೆ.

ಸಿಲಿಕಾನ್‌ ಸಿಟಿ ಮಂದಿಗೆ ಪೆಟ್ರೋಲ್ ಡಿಸೇಲ್​​‌ಗಿಂತ ಇದೀಗ ಎಲೆಕ್ಟ್ರಿಕ್ ವಾಹನಗಳೇ ಫೆವರೇಟ್ ಆದಂತೆ ಕಾಣ್ತಿದೆ. ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ‌ ಸಂಖ್ಯೆಯಲ್ಲಿ 2-3 ಪಟ್ಟು ಏರಿಕೆಯಾಗಿರುವುದೇ ಇದಕ್ಕೆ ಉದಾಹರಣೆ. ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗಿರೋದು, ನಿಜಕ್ಕೂ ಉತ್ತಮ ಬೆಳವಣಿಗೆ ಅನ್ನೋದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರ ಮಾತು.

2017-2018ರ ಹಣಕಾಸಿನ ವರ್ಷದಲ್ಲಿ ದ್ವಿಚಕ್ರ, ತ್ರಿ ಚಕ್ರ, ನಾಲ್ಕು ಚಕ್ರದ ವಾಹನ ಸೇರಿ ಒಟ್ಟು 1992 ವಾಹನಗಳು ನೋಂದಣಿಯಾಗಿದ್ದವು. 2018-19 ರಲ್ಲಿ 5542, 2019-20ರಲ್ಲಿ 6674, 2020-21 ರಲ್ಲಿ 11,593 ಎಲೆಕ್ಟ್ರಿಕಲ್ ವಾಹನಗಳು ರಿಜಿಸ್ಟ್ರೇಷನ್ ಆಗಿವೆ. 2021ರ ಬಳಿಕ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯಲ್ಲಿ ಮೂರು ಪಟ್ಟು ಹೆಚ್ಚಳವಾಗಿದ್ದು, 2021-22ರಲ್ಲಿ 44,217, 2022-23ರಲ್ಲಿ 1,10,492 ವಾಹನಗಳು ನೋಂದಣಿಯಾಗಿದ್ರೆ, 2023-24 ರಲ್ಲಿ ಬರೋಬ್ಬರಿ 1,03,009 ಎಲೆಕ್ಟ್ರಿಕಲ್ ವಾಹನಗಳು ರಿಜಿಸ್ಟ್ರೇಷನ್ ಆಗಿವೆ.

ಇದನ್ನೂ ಓದಿ: ಹೊಸ ಬಗೆಯ ಆಹಾರದೊಂದಿಗೆ ಗ್ರಾಹಕರ ಸೇವೆಗೆ ಸಿದ್ದಗೊಂಡ ಇಂದಿರಾ ಕ್ಯಾಂಟೀನ್: ಹೊಸ ಮೆನು ಬಿಡುಗಡೆ ಮಾಡಿದ ಸಿಎಂ

ಒಟ್ಟಿನಲ್ಲಿ ಪೆಟ್ರೋಲ್ -ಡಿಸೇಲ್ ವಾಹನಗಳಿಗಿಂತ ಜನರು ಎಲೆಕ್ಟ್ರಿಕಲ್ ವಾಹನಗಳನ್ನ ಹೆಚ್ಚು ಬಳಕೆ ಮಾಡ್ತಿರೋದು, ಮಾಲಿನ್ಯದ ಹಿತತೃಷ್ಟಿಯಿಂದ ನಿಜಕ್ಕೂ ಒಳ್ಳೆಯ ಬೆಳವಣಿಗೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್