AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯಲ್ಲಿ ಮೂರು ಪಟ್ಟು ಏರಿಕೆ

ಸಿಲಿಕಾನ್‌ ಸಿಟಿ ಮಂದಿಗೆ ಪೆಟ್ರೋಲ್ ಡಿಸೇಲ್​​‌ಗಿಂತ ಇದೀಗ ಎಲೆಕ್ಟ್ರಿಕ್ ವಾಹನಗಳೇ ಫೆವರೇಟ್ ಆದಂತೆ ಕಾಣ್ತಿದೆ. ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ‌ ಸಂಖ್ಯೆಯಲ್ಲಿ 2-3 ಪಟ್ಟು ಏರಿಕೆಯಾಗಿರುವುದೇ ಇದಕ್ಕೆ ಉದಾಹರಣೆ.

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯಲ್ಲಿ ಮೂರು ಪಟ್ಟು ಏರಿಕೆ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Dec 21, 2023 | 7:22 AM

Share

ಬೆಂಗಳೂರು, ಡಿಸೆಂಬರ್ 21: ವಾಹನಗಳ ವಿಚಾರದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿಗರು (Bengaluru) ಇದೀಗ ಹೊಸ ನಿರ್ಧಾರ ತಗೊಂಡಂತೆ ಕಾಣಿಸುತ್ತಿದೆ. ಇಷ್ಟು ದಿನ ಪೆಟ್ರೋಲ್, ಡಿಸೇಲ್ ಹಾಕಿಸಿಕೊಂಡು ರಸ್ತೆಯಿಡಿ ಹೊಗೆ ಉಗುಳುತ್ತಿದ್ದವರು ಇದೀಗ ಎಲೆಕ್ಟ್ರಿಕ್ ವಾಹನದತ್ತ (electric vehicles) ಮುಖ ಮಾಡಿದ್ದಾರೆ‌. ಏರುತ್ತಿರುವ ಪೆಟ್ರೋಲ್, ಡಿಸೇಲ್ ರೇಟ್ ಜನರ ಜೇಬಿಗೆ ಕತ್ತರಿ ಹಾಕಿದೆ. ವಾಹನಗಳು ಉಗುಳುವ ಹೊಗೆ ಮಾಲಿನ್ಯವಾಗಿ ಜನರ ಜೀವ ಹಿಂಡುತ್ತಿದೆ. ಇದಕ್ಕೆ ಮುಕ್ತಿ ನೀಡಲು ಬೆಂಗಳೂರು ನಗರವಾಸಿಗಳು ಮುಂದಾಗಿದ್ದಾರೆ.

ಸಿಲಿಕಾನ್‌ ಸಿಟಿ ಮಂದಿಗೆ ಪೆಟ್ರೋಲ್ ಡಿಸೇಲ್​​‌ಗಿಂತ ಇದೀಗ ಎಲೆಕ್ಟ್ರಿಕ್ ವಾಹನಗಳೇ ಫೆವರೇಟ್ ಆದಂತೆ ಕಾಣ್ತಿದೆ. ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ‌ ಸಂಖ್ಯೆಯಲ್ಲಿ 2-3 ಪಟ್ಟು ಏರಿಕೆಯಾಗಿರುವುದೇ ಇದಕ್ಕೆ ಉದಾಹರಣೆ. ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗಿರೋದು, ನಿಜಕ್ಕೂ ಉತ್ತಮ ಬೆಳವಣಿಗೆ ಅನ್ನೋದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರ ಮಾತು.

2017-2018ರ ಹಣಕಾಸಿನ ವರ್ಷದಲ್ಲಿ ದ್ವಿಚಕ್ರ, ತ್ರಿ ಚಕ್ರ, ನಾಲ್ಕು ಚಕ್ರದ ವಾಹನ ಸೇರಿ ಒಟ್ಟು 1992 ವಾಹನಗಳು ನೋಂದಣಿಯಾಗಿದ್ದವು. 2018-19 ರಲ್ಲಿ 5542, 2019-20ರಲ್ಲಿ 6674, 2020-21 ರಲ್ಲಿ 11,593 ಎಲೆಕ್ಟ್ರಿಕಲ್ ವಾಹನಗಳು ರಿಜಿಸ್ಟ್ರೇಷನ್ ಆಗಿವೆ. 2021ರ ಬಳಿಕ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯಲ್ಲಿ ಮೂರು ಪಟ್ಟು ಹೆಚ್ಚಳವಾಗಿದ್ದು, 2021-22ರಲ್ಲಿ 44,217, 2022-23ರಲ್ಲಿ 1,10,492 ವಾಹನಗಳು ನೋಂದಣಿಯಾಗಿದ್ರೆ, 2023-24 ರಲ್ಲಿ ಬರೋಬ್ಬರಿ 1,03,009 ಎಲೆಕ್ಟ್ರಿಕಲ್ ವಾಹನಗಳು ರಿಜಿಸ್ಟ್ರೇಷನ್ ಆಗಿವೆ.

ಇದನ್ನೂ ಓದಿ: ಹೊಸ ಬಗೆಯ ಆಹಾರದೊಂದಿಗೆ ಗ್ರಾಹಕರ ಸೇವೆಗೆ ಸಿದ್ದಗೊಂಡ ಇಂದಿರಾ ಕ್ಯಾಂಟೀನ್: ಹೊಸ ಮೆನು ಬಿಡುಗಡೆ ಮಾಡಿದ ಸಿಎಂ

ಒಟ್ಟಿನಲ್ಲಿ ಪೆಟ್ರೋಲ್ -ಡಿಸೇಲ್ ವಾಹನಗಳಿಗಿಂತ ಜನರು ಎಲೆಕ್ಟ್ರಿಕಲ್ ವಾಹನಗಳನ್ನ ಹೆಚ್ಚು ಬಳಕೆ ಮಾಡ್ತಿರೋದು, ಮಾಲಿನ್ಯದ ಹಿತತೃಷ್ಟಿಯಿಂದ ನಿಜಕ್ಕೂ ಒಳ್ಳೆಯ ಬೆಳವಣಿಗೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು