AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಗಾರಿಕೆಗಳಿಗೂ ಕರೆಂಟ್ ಶಾಕ್: ಕೈಗಾರಿಕೆ ಬೀಗ ಹಾಕಿ ಕೀ ನಿಮಗೆ ಕೊಡ್ತೀವಿ, ನೀವೇ ನಡೆಸಿ; ಸರ್ಕಾರಕ್ಕೆ ಪೀಣ್ಯ ಕೈಗಾರಿಕೆ ಸಂಘ ಎಚ್ಚರಿಕೆ

ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ಕೊಡಿ. ಅದು ಬಿಟ್ಟು ಈ ರೀತಿ ಕರೆಂಟ್‌ ಶಾಕ್‌ ಕೊಡಬೇಡಿ. ಕೈಗಾರಿಕೆ ಬೀಗ ಹಾಕಿ ಅದರ ಕೀ ನಿಮಗೆ ಕೊಡ್ತೀವಿ, ನೀವೇ ನಡೆಸಿ ಎಂದು ಪೀಣ್ಯ ಕೈಗಾರಿಕೆ ಸಂಘದ ಅಧ್ಯಕ್ಷ ಮಂಜುನಾಥ್ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕೈಗಾರಿಕೆಗಳಿಗೂ ಕರೆಂಟ್ ಶಾಕ್: ಕೈಗಾರಿಕೆ ಬೀಗ ಹಾಕಿ ಕೀ ನಿಮಗೆ ಕೊಡ್ತೀವಿ, ನೀವೇ ನಡೆಸಿ; ಸರ್ಕಾರಕ್ಕೆ ಪೀಣ್ಯ ಕೈಗಾರಿಕೆ ಸಂಘ ಎಚ್ಚರಿಕೆ
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Jun 14, 2023 | 1:00 PM

Share

ಬೆಂಗಳೂರು: ಕಾಂಗ್ರೆಸ್(Congress) ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಒಂದು ಕಡೆ ಉಚಿತ ವಿದ್ಯುತ್(Gruha Jyothi Yojana) ಎಂದು ಘೋಷಿಸಿ ಅದಕ್ಕೆ ಷರತ್ತುಗಳನ್ನು ವಿಧಿಸಿದೆ. ಮತ್ತೊಂದೆಡೆ ಉಚಿತ ವಿದ್ಯುತ್ ಪಡೆಯುವ ಮೊದಲೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್ ತಗುಲಿದೆ. 200 ರೂಪಾಯಿ ವಿದ್ಯುತ್ ಬಿಲ್ ಬರುತ್ತಿದ್ದದ್ದು ಜೂನ್‌ನಲ್ಲಿ 600 ರೂಪಾಯಿ ಬಂದಿದ್ದರೆ, 500 ರೂಪಾಯಿ ಕಟ್ಟುತ್ತಿರುವವರು, ಜೂನ್‌ನಲ್ಲಿ 1500-1800 ರೂಪಾಯಿವರೆಗೆ ವಿದ್ಯುತ್ ಬಿಲ್ ಕಂಡು ಶಾಕ್ ಆಗಿದ್ದಾರೆ. ಇನ್ನು ಜನಸಾಮಾನ್ಯರದೊಂದು ಸಮಸ್ಯೆಯಾದ್ರೆ ಕೈಗಾರಿಕೆಗಳು ಕೂಡ ವಿದ್ಯುತ್ ದರ ಏರಿಕೆಗೆ ಕಂಗಾಲಾಗಿವೆ. ವಿದ್ಯುತ್ ಬಿಲ್​ಗೆ ಬೆದರಿ ಸಣ್ಣ ಕೈಗಾರಿಕೆಗಳು ಬಳಲಿ ಬೆಂಡಾಗಿವೆ.

ಕೈಗಾರಿಕೆಗೆ ಬೀಗ ಹಾಕಿ ಸರ್ಕಾರಕ್ಕೆ ನಡೆಸುವಂತೆ ಕೀ ಕೊಡಲು ಪೀಣ್ಯ ಸಣ್ಣ ಕೈಗಾರಿಕೆಗಳು ಮುಂದಾಗಿವೆ. ಏಷ್ಯಾದಲ್ಲಿ ಸುಪ್ರಸಿದ್ದ, ಖ್ಯಾತಿ ಪಡೆದಿರುವ ಬೆಂಗಳೂರಿನ ಪೀಣ್ಯ ಕೈಗಾರಿಕೆಯು ಮೆಕಾನಿಕಲ್, ಗಾರ್ಮೆಂಟ್ ಸಣ್ಣ ಕೈಗಾರಿಕೆಗೆ ಹೆಸರುವಾಸಿ. ಆದ್ರೆ ಈಗ ಕರೆಂಟ್ ಯೂನಿಟ್ ಬೆಲೆ ಹಾಗೂ ನಿಗಧಿತ ಶುಲ್ಕ ಹೆಚ್ಚಳದಿಂದ ಕೈಗಾರಿಕೆ ನಡೆಸಲು ಭಾರೀ ಸಮಸ್ಯೆ ಎದುರಾಗಿದೆ. ಪೀಣ್ಯ ಕೈಗಾರಿಕೆ ವಲಯದಲ್ಲಿ 12 ಸಾವಿರ ಸಣ್ಣ ಕೈಗಾರಿಕೆಗಳಿವೆ. ಇದರಲ್ಲಿ ಬಿಡಿಭಾಗ ತಯಾರಿಸುವ 5 ಸಾವಿರ ಮೆಕಾನಿಕಲ್ ಸಣ್ಣ ಕೈಗಾರಿಕೆ ಇವೆ. ಇವೆಲ್ಲ ಕರೆಂಟ್ ಮೇಲೆ ಅವಲಂಬಿತವಾಗಿವೆ. ಕಮರ್ಷಿಯಲ್‌ ಕರೆಂಟ್ ಬಿಲ್ ಶೇ.30ರಷ್ಟು ಹೆಚ್ಚಳವಾಗಿದೆ. ಈ ಮೊದಲು ಪ್ರತಿ ಯೂನಿಟ್ ಗೆ 6.75 ರೂ ಇತ್ತು. ಇದೀಗ ಪ್ರತಿ ಯೂನಿಟ್ ಬೆಲೆ 8.50 ರೂ. ಹೆಚ್ಚಳ ಮಾಡಿದ್ದಾರೆ. ನಿಗಧಿತ ಶುಲ್ಕವೂ ಶೇ. 40-60ರಷ್ಟು ಹೆಚ್ಚಳವಾಗಿದೆ.

ಇದನ್ನೂ ಓದಿ: ವಿದ್ಯುತ್ ದರ ಬಗ್ಗೆ ನಮ್ಮ ಬಳಿ ದಾಖಲೆಗಳಿವೆ: ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ಕೊಡಿ. ಅದು ಬಿಟ್ಟು ಈ ರೀತಿ ಕರೆಂಟ್‌ ಶಾಕ್‌ ಕೊಡಬೇಡಿ. 4 ಸಾವಿರಕ್ಕೂ ಹೆಚ್ಚು ಮೆಕಾನಿಕಲ್ ಸಣ್ಣ ಕೈಗಾರಿಕೆಗಳಿಗೆ ಸಂಕಷ್ಟ ಎದುರಾಗಿದೆ. ಹೀಗೆ ಮುಂದುವರೆದ್ರೆ ಕೈಗಾರಿಕೆ ಬೀಗ ಹಾಕಿ ಅದರ ಕೀ ನಿಮಗೆ ಕೊಡ್ತೀವಿ, ನೀವೇ ನಡೆಸಿ ಎಂದು ಪೀಣ್ಯ ಕೈಗಾರಿಕೆ ಸಂಘದ ಅಧ್ಯಕ್ಷ ಮಂಜುನಾಥ್ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ