Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಗೂ ಮುನ್ನವೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ, ಯುನಿಟ್‌ ದರದಲ್ಲಿ ಭಾರೀ ಹೆಚ್ಚಳಕ್ಕೆ ಪ್ರಸ್ತಾವನೆ

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಹಕರ ಕೈ ಸುಡ್ತಿದೆ. ಈ ಬೆನ್ನಲ್ಲೇ ಇದೀಗ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಲಿದೆ. ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಮೆಕ್ಕಾಂ, ಚೆಕ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರತಿ ಬಾರಿಯಂತೆ ಈ ವರ್ಷವೂ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿವೆ.

ಬೇಸಿಗೆಗೂ ಮುನ್ನವೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ, ಯುನಿಟ್‌ ದರದಲ್ಲಿ ಭಾರೀ ಹೆಚ್ಚಳಕ್ಕೆ ಪ್ರಸ್ತಾವನೆ
ಸಾಂಕೇತಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Dec 10, 2021 | 8:03 AM

ಬೆಂಗಳೂರು: ಬೇಸಿಗೆಗೂ ಮುನ್ನವೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ ತಟ್ಟಲಿದೆ. ಯುನಿಟ್‌ಗೆ 1 ರೂ. 50 ಪೈಸೆ ಹೆಚ್ಚಳಕ್ಕೆ ಕೆಇಆರ್‌ಸಿಗೆ(Karnataka Electricity regulatory commission) ಬೆಸ್ಕಾಂ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. ಹೀಗಾಗಿ ಶೀಘ್ರದಲ್ಲೇ ವಿದ್ಯುತ್ ದರ ಹೆಚ್ಚಳವಾಗಲಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಹಕರ ಕೈ ಸುಡ್ತಿದೆ. ಈ ಬೆನ್ನಲ್ಲೇ ಇದೀಗ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಲಿದೆ. ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಮೆಕ್ಕಾಂ, ಚೆಕ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರತಿ ಬಾರಿಯಂತೆ ಈ ವರ್ಷವೂ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ನಷ್ಟದ ನೆಪವೊಡ್ಡಿ ಬೆಸ್ಕಾಂ ವ್ಯಾಪ್ತಿಯಲ್ಲಿ 1 ರೂ 50 ಪೈಸೆ ಹೆಚ್ಚಳ ಮಾಡುವಂತೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ಬಾರಿ 1 ರೂ 39 ಪೈಸೆ ಪ್ರಸ್ತಾವನೆ ಇಟ್ಟಿತ್ತು. ಇದೀಗ ಮತ್ತೆ ಈ ಬಾರಿ 1 ರೂ 50 ಪೈಸೆ ಹೆಚ್ಚಳಕ್ಕೆ ಪ್ರಸ್ತಾಪ ಸಲ್ಲಿಸಿದೆ. ಸದ್ಯ ಈಗ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(KERC) ದರ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ನೀಡುತ್ತಾ? ಎಂಬ ಪ್ರಶ್ನೆ ಎದ್ದಿದೆ. KERC ಸಾಧಕ ಬಾಧಕಗಳನ್ನ ಪರಿಶೀಲನೆ ಮಾಡಿ ದರ ಪರಿಷ್ಕರಣೆ ಮಾಡಲಿದೆ. ಬೆಸ್ಕಾಂ ಪ್ರಸ್ತಾವನೆಗೆ KERC ಒಪ್ಪಿಗೆ ಕೊಟ್ಟರೆ ಜನರಿಗೆ ದರ ಹೆಚ್ಚಳದ ಬಿಸಿ ತಟ್ಟಲಿದೆ.

ಯಾವ ವರ್ಷ ಎಷ್ಟೆಷ್ಟು ದರ ಪರಿಷ್ಕರಣೆಯಾಗಿತ್ತು? 2009 ರಲ್ಲಿ ಪ್ರತಿ ಯೂನಿಟ್ಗೆ 34 ಪೈಸೆ ಹೆಚ್ಚಳ 2010 ರಲ್ಲಿ ಪ್ರತಿ ಯೂನಿಟ್ಗೆ 30 ಪೈಸೆ ಹೆಚ್ಚಳ 2011 ರಲ್ಲಿ ಪ್ರತಿ ಯೂನಿಟ್ಗೆ 28 ಪೈಸೆ ಹೆಚ್ಚಳ 2012 ರಲ್ಲಿ ಪ್ರತಿ ಯೂನಿಟ್ಗೆ 13 ಪೈಸೆ ಹೆಚ್ಚಳ 2013 ರಲ್ಲಿ ಪ್ರತಿ ಯೂನಿಟ್ಗೆ 13 ಪೈಸೆ ಹೆಚ್ಚಳ 2017 ರಲ್ಲಿ ಪ್ರತಿ ಯೂನಿಟ್ಗೆ 48 ಪೈಸೆ ಹೆಚ್ಚಳ 2019 ರಲ್ಲಿ ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ 2020 ರಲ್ಲಿ ಪ್ರತಿ ಯೂನಿಟ್ಗೆ 30 ಪೈಸೆ ಹೆಚ್ಚಳ

ಇದನ್ನೂ ಓದಿ: ಮನೆಯಲ್ಲೇ ಚಿಕನ್ ರೋಲ್​ನ ಸುಲಭವಾಗಿ ಮಾಡಬಹುದು; ವಿಧಾನ ಇಲ್ಲಿದೆ

‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್