AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ತಿಂಗಳ ಕಂದನಿಗೆ ಇಡೀ ವಿಶ್ವವೇ ಬೆಚ್ಚುವಂತಾ ಸಮಸ್ಯೆ! ಮಗು ಬದುಕುಳಿಯಲು 16 ಕೋಟಿ ರೂ. ಬೇಕು..

TV9 Campaign ಮಕ್ಕಳಂದ್ರೆ ಹೆತ್ತವರಿಗೆ ಖುಷಿ.. ನೋವು ಮರೆಸೋ ಚಿಲುಮೆ.. ಮಗು ಮನೆಯಲ್ಲಿ ಆಡ್ತಿದ್ರೆ ತಂದೆ-ತಾಯಿಯ ನೋವೇ ಮಾಯವಾಗಿಬಿಡುತ್ತೆ. ಆದ್ರೆ, ಈ ದಂಪತಿಯ ಬಾಳಲ್ಲಿ ಹಾಗಾಗಿಲ್ಲ. ಮಗುವಿನ ಜೊತೆ ದೇವರು ಯಾರಿಂದಲೂ ಎದುರಿಸಲಾಗದಂಥಾ ನೋವು ಕೊಟ್ಟಿದ್ದು, 16 ಕೋಟಿ ರೂಪಾಯಿಯ ಸಂಜೀವಿನಿಗಾಗಿ ಪುಟಾಣಿ ಜೀವ ಕೈಯಲ್ಲಿಡಿದು ಕಾಯುತ್ತಿದೆ.

11 ತಿಂಗಳ ಕಂದನಿಗೆ ಇಡೀ ವಿಶ್ವವೇ ಬೆಚ್ಚುವಂತಾ ಸಮಸ್ಯೆ! ಮಗು ಬದುಕುಳಿಯಲು 16 ಕೋಟಿ ರೂ. ಬೇಕು..
ಜನೀಶ್
ಆಯೇಷಾ ಬಾನು
|

Updated on: Feb 05, 2021 | 3:01 PM

Share

ಬೆಂಗಳೂರು: ಪುಟ್ಟ ಕಂದ.. ಪಿಳಿ ಪಿಳಿ ಕಣ್ಣು ಬಿಡುತ್ತಾ.. ಪಿಸು ಪಿಸು ನಗುತಾ.. ತುಂಟಾಟ ನೋಡ್ತಾ ಹೆತ್ತವರು ನೋವು ಮರೆತು ಖುಷಿಯಾಗಿರಬೇಕಿತ್ತು. ಜೀವನದುದ್ದಕ್ಕೂ ಹರುಷವಾಗಿ ಇರಬೇಕಿತ್ತು. ಆದ್ರೆ, ಈ ದಂಪತಿಗೆ ದೇವರು ಆ ಖುಷಿ ಅನುಭವಿಸೋ ಅವಕಾಶವನ್ನೇ ಕೊಟ್ಟಿಲ್ಲ. ಯಾಕಂದ್ರೆ, ದೇವರು ಮಗು ಕೊಟ್ಟ. ಆದ್ರೆ, ಮಗುವಿನ ಜೊತೆ ಈ ಜಗತ್ತಿನಲ್ಲಿ ಯಾರಿಗೂ ಕೊಡಲಾರದಂಥಾ ದೊಡ್ಡ ನೋವು ಕೊಟ್ಟು ಕಳಿಸಿದ್ದಾನೆ.

ಕಂದನಿಗೆ ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ ಕುತ್ತು! ಇಷ್ಟಕ್ಕೂ ಈ 11 ತಿಂಗಳ ಕಂದ ಜನೀಶ್.. ಸಂಜೀವಿನಿ ನಗರದ ನಿವಾಸಿಗಳಾಗಿರುವ ನವೀನ್​ಕುಮಾರ್-ಜ್ಯೋತಿ ದಂಪತಿ ಪುತ್ರ. ಕುಟುಂಬದ ಪರಿಸ್ಥಿತಿಯೂ ಅಷ್ಟೇನು ಚೆನ್ನಾಗಿಲ್ಲ. ಇಂಥಾದ್ರ ಮಧ್ಯೆ ಮಗುವಿಗೆ ಜೀನ್ ಸಮಸ್ಯೆ ಕಾಣಿಸಿಕೊಂಡಿದೆ. ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ ಸಮಸ್ಯೆ ಅಂದ್ರೆ, ಬೆನ್ನು ಮೂಳೆಯ ಸ್ನಾಯು ಕ್ಷೀಣತೆ ಅಂತಾ. ವೈದ್ಯಲೋಕದಲ್ಲೇ ಇದು ಅಪರೂಪದ ಸಮಸ್ಯೆ. ಈಗ ಜನೀಶ್ ಉಳಿಯಬೇಕಾದ್ರೆ ಬರೋಬ್ಬರಿ 16 ಕೋಟಿಯ ಮೆಡಿಸಿನ್ ಬೇಕಾಗಿದೆ. ಅದೂ ಅಮೆರಿಕದಲ್ಲಿ ಸಿಗುವ ಔಷಧಿಯೇ ಬೇಕು. ಇಷ್ಟೊಂದು ದುಡ್ಡು ಎಲ್ಲಿಂದ ತರೋದು ಅಂತಾ ತಂದೆ ನವೀನ್​ಕುಮಾರ್ ಕಣ್ಣೀರಿಡ್ತಿದ್ದಾರೆ.

ಲಕ್ಷಾಂತರ ಮಕ್ಕಳಲ್ಲಿ ಒಬ್ಬರಿಗೆ ಇಂಥಹ ರೋಗ ಕಾಣಿಸುತ್ತೆ. ಇಂಥಹ ಕಾಯಿಲೆ ಇರುವವರಿಗೆ, ದೇಹದ ಯಾವುದೇ ಅಂಗಾಂಗಗಳು ಕೆಲಸ ಮಾಡುವುದಿಲ್ಲ. ಉಸಿರಾಡಲೂ ಕಷ್ಟವಾಗುತ್ತೆ. ಕೈ ಕಾಲು ಕದಲಿಸೋಕೂ ಆಗಲ್ಲ. ಆಹಾರ ಸೇವಿಸಲೂ ಆಗಲ್ಲ. ತುಟಿ ಬಿಚ್ಚಿ ಮಾತಾಡೋದೂ ಕಷ್ಟ. ಇಂಥಾ ಸಮಸ್ಯೆಯಿಂದ ಬಳಲುತ್ತಿರೋ ಜನೀಶ್​ಗೆ ಸದ್ಯ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ತಂದೆ ಇನ್ಶುರೆನ್ಸ್ ಸರ್ವೆಯರ್ ಆಗಿ ಕೆಲಸ ಮಾಡುತ್ತಿದ್ದು, ಜೀವನ ನಡೆಸೋದೇ ಕಷ್ಟ. ದುಡಿಮೆಯಲ್ಲೇ ಮಗು ಉಳಿಸಿಕೊಳ್ಳೋದು ಅಸಾಧ್ಯವೇ ಸರಿ. ಹೀಗಾಗಿ, ಮಗುವನ್ನ ಉಳಿಸಿಕೊಡಿ ಅಂತಾ ತಾಯಿ ಜ್ಯೋತಿ, ಹೃದಯವಂತರ ಸಹಾಯಕ್ಕಾಗಿ ಅಂಗಲಾಚಿದ್ದಾರೆ.

ದೇವರೇ ನೀನೆಷ್ಟು ಕ್ರೂರಿ.. ಜಗತ್ತಿನ ಅರಿವೇ ಇಲ್ಲದ ಕಂದನಿಗೆ ಅದೆಂಥಾ ಕಷ್ಟ ಕೊಟ್ಟೆ ಅಂತಾ ಹೆತ್ತವರು ನಿತ್ಯ ಮರುಗುತ್ತಿದ್ದಾರೆ. ಇವರ ಈ ಮರುಕ, ಕಣ್ಣೀರು ಮಾಯವಾಗಿ ಖುಷಿಯಾಗಿರಬೇಕು ಅಂದ್ರೆ, ಈ ಕರುನಾಡಿನ ಪುಣ್ಯವಂತರು, ಹೃದಯವಂತರು, ಆಳುವ ಸರ್ಕಾರ ನೆರವಿಗೆ ಬರಬೇಕಿದೆ. ಈ ದಂಪತಿಯ ಕಣ್ಣೀರಿಗೆ ಆಸರೆಯಾಗಬೇಕಿದೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ