AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ತಿಂಗಳ ಕಂದನಿಗೆ ಇಡೀ ವಿಶ್ವವೇ ಬೆಚ್ಚುವಂತಾ ಸಮಸ್ಯೆ! ಮಗು ಬದುಕುಳಿಯಲು 16 ಕೋಟಿ ರೂ. ಬೇಕು..

TV9 Campaign ಮಕ್ಕಳಂದ್ರೆ ಹೆತ್ತವರಿಗೆ ಖುಷಿ.. ನೋವು ಮರೆಸೋ ಚಿಲುಮೆ.. ಮಗು ಮನೆಯಲ್ಲಿ ಆಡ್ತಿದ್ರೆ ತಂದೆ-ತಾಯಿಯ ನೋವೇ ಮಾಯವಾಗಿಬಿಡುತ್ತೆ. ಆದ್ರೆ, ಈ ದಂಪತಿಯ ಬಾಳಲ್ಲಿ ಹಾಗಾಗಿಲ್ಲ. ಮಗುವಿನ ಜೊತೆ ದೇವರು ಯಾರಿಂದಲೂ ಎದುರಿಸಲಾಗದಂಥಾ ನೋವು ಕೊಟ್ಟಿದ್ದು, 16 ಕೋಟಿ ರೂಪಾಯಿಯ ಸಂಜೀವಿನಿಗಾಗಿ ಪುಟಾಣಿ ಜೀವ ಕೈಯಲ್ಲಿಡಿದು ಕಾಯುತ್ತಿದೆ.

11 ತಿಂಗಳ ಕಂದನಿಗೆ ಇಡೀ ವಿಶ್ವವೇ ಬೆಚ್ಚುವಂತಾ ಸಮಸ್ಯೆ! ಮಗು ಬದುಕುಳಿಯಲು 16 ಕೋಟಿ ರೂ. ಬೇಕು..
ಜನೀಶ್
ಆಯೇಷಾ ಬಾನು
|

Updated on: Feb 05, 2021 | 3:01 PM

Share

ಬೆಂಗಳೂರು: ಪುಟ್ಟ ಕಂದ.. ಪಿಳಿ ಪಿಳಿ ಕಣ್ಣು ಬಿಡುತ್ತಾ.. ಪಿಸು ಪಿಸು ನಗುತಾ.. ತುಂಟಾಟ ನೋಡ್ತಾ ಹೆತ್ತವರು ನೋವು ಮರೆತು ಖುಷಿಯಾಗಿರಬೇಕಿತ್ತು. ಜೀವನದುದ್ದಕ್ಕೂ ಹರುಷವಾಗಿ ಇರಬೇಕಿತ್ತು. ಆದ್ರೆ, ಈ ದಂಪತಿಗೆ ದೇವರು ಆ ಖುಷಿ ಅನುಭವಿಸೋ ಅವಕಾಶವನ್ನೇ ಕೊಟ್ಟಿಲ್ಲ. ಯಾಕಂದ್ರೆ, ದೇವರು ಮಗು ಕೊಟ್ಟ. ಆದ್ರೆ, ಮಗುವಿನ ಜೊತೆ ಈ ಜಗತ್ತಿನಲ್ಲಿ ಯಾರಿಗೂ ಕೊಡಲಾರದಂಥಾ ದೊಡ್ಡ ನೋವು ಕೊಟ್ಟು ಕಳಿಸಿದ್ದಾನೆ.

ಕಂದನಿಗೆ ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ ಕುತ್ತು! ಇಷ್ಟಕ್ಕೂ ಈ 11 ತಿಂಗಳ ಕಂದ ಜನೀಶ್.. ಸಂಜೀವಿನಿ ನಗರದ ನಿವಾಸಿಗಳಾಗಿರುವ ನವೀನ್​ಕುಮಾರ್-ಜ್ಯೋತಿ ದಂಪತಿ ಪುತ್ರ. ಕುಟುಂಬದ ಪರಿಸ್ಥಿತಿಯೂ ಅಷ್ಟೇನು ಚೆನ್ನಾಗಿಲ್ಲ. ಇಂಥಾದ್ರ ಮಧ್ಯೆ ಮಗುವಿಗೆ ಜೀನ್ ಸಮಸ್ಯೆ ಕಾಣಿಸಿಕೊಂಡಿದೆ. ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ ಸಮಸ್ಯೆ ಅಂದ್ರೆ, ಬೆನ್ನು ಮೂಳೆಯ ಸ್ನಾಯು ಕ್ಷೀಣತೆ ಅಂತಾ. ವೈದ್ಯಲೋಕದಲ್ಲೇ ಇದು ಅಪರೂಪದ ಸಮಸ್ಯೆ. ಈಗ ಜನೀಶ್ ಉಳಿಯಬೇಕಾದ್ರೆ ಬರೋಬ್ಬರಿ 16 ಕೋಟಿಯ ಮೆಡಿಸಿನ್ ಬೇಕಾಗಿದೆ. ಅದೂ ಅಮೆರಿಕದಲ್ಲಿ ಸಿಗುವ ಔಷಧಿಯೇ ಬೇಕು. ಇಷ್ಟೊಂದು ದುಡ್ಡು ಎಲ್ಲಿಂದ ತರೋದು ಅಂತಾ ತಂದೆ ನವೀನ್​ಕುಮಾರ್ ಕಣ್ಣೀರಿಡ್ತಿದ್ದಾರೆ.

ಲಕ್ಷಾಂತರ ಮಕ್ಕಳಲ್ಲಿ ಒಬ್ಬರಿಗೆ ಇಂಥಹ ರೋಗ ಕಾಣಿಸುತ್ತೆ. ಇಂಥಹ ಕಾಯಿಲೆ ಇರುವವರಿಗೆ, ದೇಹದ ಯಾವುದೇ ಅಂಗಾಂಗಗಳು ಕೆಲಸ ಮಾಡುವುದಿಲ್ಲ. ಉಸಿರಾಡಲೂ ಕಷ್ಟವಾಗುತ್ತೆ. ಕೈ ಕಾಲು ಕದಲಿಸೋಕೂ ಆಗಲ್ಲ. ಆಹಾರ ಸೇವಿಸಲೂ ಆಗಲ್ಲ. ತುಟಿ ಬಿಚ್ಚಿ ಮಾತಾಡೋದೂ ಕಷ್ಟ. ಇಂಥಾ ಸಮಸ್ಯೆಯಿಂದ ಬಳಲುತ್ತಿರೋ ಜನೀಶ್​ಗೆ ಸದ್ಯ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ತಂದೆ ಇನ್ಶುರೆನ್ಸ್ ಸರ್ವೆಯರ್ ಆಗಿ ಕೆಲಸ ಮಾಡುತ್ತಿದ್ದು, ಜೀವನ ನಡೆಸೋದೇ ಕಷ್ಟ. ದುಡಿಮೆಯಲ್ಲೇ ಮಗು ಉಳಿಸಿಕೊಳ್ಳೋದು ಅಸಾಧ್ಯವೇ ಸರಿ. ಹೀಗಾಗಿ, ಮಗುವನ್ನ ಉಳಿಸಿಕೊಡಿ ಅಂತಾ ತಾಯಿ ಜ್ಯೋತಿ, ಹೃದಯವಂತರ ಸಹಾಯಕ್ಕಾಗಿ ಅಂಗಲಾಚಿದ್ದಾರೆ.

ದೇವರೇ ನೀನೆಷ್ಟು ಕ್ರೂರಿ.. ಜಗತ್ತಿನ ಅರಿವೇ ಇಲ್ಲದ ಕಂದನಿಗೆ ಅದೆಂಥಾ ಕಷ್ಟ ಕೊಟ್ಟೆ ಅಂತಾ ಹೆತ್ತವರು ನಿತ್ಯ ಮರುಗುತ್ತಿದ್ದಾರೆ. ಇವರ ಈ ಮರುಕ, ಕಣ್ಣೀರು ಮಾಯವಾಗಿ ಖುಷಿಯಾಗಿರಬೇಕು ಅಂದ್ರೆ, ಈ ಕರುನಾಡಿನ ಪುಣ್ಯವಂತರು, ಹೃದಯವಂತರು, ಆಳುವ ಸರ್ಕಾರ ನೆರವಿಗೆ ಬರಬೇಕಿದೆ. ಈ ದಂಪತಿಯ ಕಣ್ಣೀರಿಗೆ ಆಸರೆಯಾಗಬೇಕಿದೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್