AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮ ಹೊಡೆದ್ರು, ಆಟಕ್ಕೆ ಸೇರಿಸಿಕೊಳ್ತಿಲ್ಲ; ಮಕ್ಕಳಿಂದ ಬರುತ್ತಿವೆ ತುರ್ತು ಕರೆಗಳು, ಹೈರಾಣಾದ ಪೊಲೀಸರು

ತುರ್ತುಸೇವೆ 112ಗೆ ಬರುತ್ತಿರುವ ಕರೆಗಳು ಪೊಲೀಸರಿಗೆ ತಲೆ ಬಿಸಿ ಮಾಡಿವೆ. ಸಣ್ಣ-ಪುಟ್ಟ ವಿಚಾರಕ್ಕೂ ಜನ ತುರ್ತು ಸೇವೆ ನಂಬರ್​ಗೆ ಕರೆ ಮಾಡುತ್ತಿದ್ದಾರೆ. ಸದ್ಯ ಮಕ್ಕಳ ಕೆಲ ಕರೆಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿವೆ. ಮಕ್ಕಳು 112ಗೆ ಕರೆ ಮಾಡಿ ಅಮ್ಮ ಹೊಡೆದ್ರು, ಆಟಕ್ಕೆ ಸೇರಿಸಿಕೊಳ್ಳುತ್ತಿಲ್ಲ ಸಹಾಯ ಮಾಡಿ ಎಂದು ಮನವಿ ಮಾಡುತ್ತಿದ್ದಾರೆ.

ಅಮ್ಮ ಹೊಡೆದ್ರು, ಆಟಕ್ಕೆ ಸೇರಿಸಿಕೊಳ್ತಿಲ್ಲ; ಮಕ್ಕಳಿಂದ ಬರುತ್ತಿವೆ ತುರ್ತು ಕರೆಗಳು, ಹೈರಾಣಾದ ಪೊಲೀಸರು
ಆಟಕ್ಕೆ ಸೇರಿಸಿಕೊಳ್ಳುತ್ತಿಲ್ಲ ಎಂದು ಕರೆ ಮಾಡಿದ ಬಾಲಕ
Jagadisha B
| Updated By: ಆಯೇಷಾ ಬಾನು|

Updated on: Jan 21, 2024 | 7:32 AM

Share

ಬೆಂಗಳೂರು, ಜ.21: ಪೊಲೀಸ್‌, ಆಂಬ್ಯುಲೆನ್ಸ್, ಅಗ್ನಿಶಾಸಮಕ ಸೇರಿದಂತೆ ಇನ್ನಿತರ ಯಾವುದೇ ತುರ್ತು ಸೇವೆ ಪಡೆಯಲು 112 ನಂಬರ್‌ ಡಯಲ್‌ ಮಾಡಿದರೆ ಸಾಕು ಸಂಬಂಧಿತ ಸಿಬ್ಬಂದಿ ತಕ್ಷಣ ಸ್ಪಂದಿಸಿ ಸಮಸ್ಯೆ ಬಗೆಹರಿಸುತ್ತಿದ್ದರು. ಆದರೆ ಈಗ ತುರ್ತುಸೇವೆ 112ಗೆ ಬರುತ್ತಿರುವ ಕರೆಗಳು ಪೊಲೀಸರಿಗೆ (Bengaluru Police) ತಲೆ ಬಿಸಿ ಮಾಡಿವೆ. ಸಣ್ಣ-ಪುಟ್ಟ ವಿಚಾರಕ್ಕೂ ಜನ ತುರ್ತು ಸೇವೆ ನಂಬರ್​ಗೆ ಕರೆ ಮಾಡುತ್ತಿದ್ದಾರೆ. ಸದ್ಯ ಮಕ್ಕಳ ಕೆಲ ಕರೆಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿವೆ.

ಕೇಸ್-1

ಅಮ್ಮ ಮಗಳು ಜಗಳ ಮಾಡಿಕೊಂಡಿದ್ದು ಅಮ್ಮನ ವಿರುದ್ಧವೇ ಪೊಲೀಸರಿಗೆ ಕರೆ ಮಾಡಿ ಪುಟ್ಟ ಬಾಲಕಿ ದೂರು ನೀಡಿದ್ದಾಳೆ. ಮಾಹಿತಿ ಕೇಳಲು ಕರೆ ಮಾಡಿದ್ದ ಪೊಲೀಸರಿಗೆ ತಾಯಿ ಬಾಯಿಗೆ ಬಂದಂತೆ ಬೈದು ಫೋನ್ ಇಟ್ಟಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಚಿಕ್ಕ ವಿಷಯಕ್ಕೆ ತಾಯಿ ಹಾಗೂ ಪುಟ್ಟ ಮಗಳ ನಡುವೆ ಜಗಳ ಆಗಿ ತಾಯಿ ಮಗಳ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಬಾಲಕಿ 112 ಕರೆ ಮಾಡಿ ತಾಯಿ ಬಗ್ಗೆ ದೂರಿದ್ದಾಳೆ. ಮತ್ತಷ್ಟು ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು ಮತ್ತೆ ಅದೇ ನಂಬರ್​ಗೆ ಕರೆ ಮಾಡಿದ್ದು ಈ ವೇಳೆ ಫೋನ್ ಕಸಿದುಕೊಂಡ ತಾಯಿ ಪೊಲೀಸರಿಗೆ ಏಕವಚನದಲ್ಲಿ ನಿಂದಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ವೈರಲ್ ಆಗಿದೆ.

ಕೇಸ್​-2

ಕ್ರಿಕೆಟ್ ಆಡಲು ಸೇರಿಸಿಕೊಂಡಿಲ್ಲ ಎಂದು ಕರೆ ಮಾಡಲಾಗಿದೆ. ಓರ್ವ ಬಾಲಕ 112ಗೆ ಕರೆ ಮಾಡಿ ನನ್ನನ್ನು ಕ್ರಿಕೆಟ್ ಆಡಲು ಸೇರಿಸಿಕೊಳ್ಳುತ್ತಿಲ್ಲ. ಸಹಾಯ ಮಾಡಿ ಎಂದು ತುರ್ತು ಸೇವೆಗೆ ಕರೆ ಮಾಡಿದ್ದಾನೆ. ವಿಚಾರ ಸಣ್ಣದೆನಿಸಿದರೂ ಪೊಲೀಸರು ಸ್ಥಳಕ್ಕೆ ತೆರಳಿ ದೂರು ಸ್ವೀಕರಿಸಿ ಆತನ ಗೆಳೆಯರಿಗೆ ಬುದ್ದಿ ಹೇಳಿ ಆಟಕ್ಕೆ ಸೇರಿಸಿ ಬಂದರು. ಈ ಘಟನೆಯ ಆಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಚಿತ್ರದುರ್ಗ: ಮುರುಘಾ ಮಠದ ಹಣ, ಆಸ್ತಿ ದುರ್ಬಳಕೆ ಆರೋಪ: ಎಸ್​ಕೆ ಬಸವರಾಜನ್ ವಿರುದ್ಧದ‌ ಕೇಸ್​ನಲ್ಲಿ ಮುರುಘಾ ಶ್ರೀ ಸಾಕ್ಷ್ಯ

ಬೆಂಕಿ ಅವಘಡ, ಅನಾರೋಗ್ಯ, ನೀರಿಗೆ ಬಿದ್ದಿರುವುದು, ಕಾನೂನು ಸುವ್ಯವಸ್ಥೆ, ಮಹಿಳಾ, ಮಕ್ಕಳ, ಹಿರಿಯ ನಾಗರಿಕರ ಹಾಗೂ ಇನ್ನಿತರ ಯಾವುದೇ ತುರ್ತು ಸಮಸ್ಯೆಗಳಿದ್ದರೂ ತಕ್ಷಣದ ನೆರವಿಗಾಗಿ ಸರ್ಕಾರ ತುರ್ತು ಸೇವೆ 112 ನಂಬರ್ ನೀಡಿದೆ. ಆದರೆ ಪುಟ್ಟ ಪುಟ್ಟ ಮಕ್ಕಳು ತಮ್ಮ ಚಿಕ್ಕ ಚಿಕ್ಕ ಸಮಸ್ಯೆಗಳಿಗೂ ತುರ್ತು ಸೇವೆ ನಂಬರ್​ಗೆ ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಇದರಿಂದ ಪೊಲೀಸರಿಗೆ ತಲೆ ಬಿಸಿಯಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ