AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಜಿನಿಯರಿಂಗ್‌ ಸೀಟು ಬಲು ದುಬಾರಿ; 10-15 % ಶುಲ್ಕ ಏರಿಕೆಗೆ ಖಾಸಗಿ ಕಾಲೇಜುಗಳ ಒಕ್ಕೂಟ ನಿರ್ಧಾರ

ರಾಜ್ಯದಲ್ಲಿ ಕಾಲೇಜುಗಳ ಆರಂಭಕ್ಕೂ ಮೊದಲೇ ಸಂಕಷ್ಟ ಎದುರಾಗಿದೆ. ಇಂಜಿನಿಯರಿಂಗ್ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೆ ವಿದ್ಯಾರ್ಥಿಗಳಿಗೆ ಡಬ್ಬಲ್ ಶಾಕ್ ಸಿಕ್ಕಿದೆ. ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲೇ ಇಂಜಿನಿಯರಿಂಗ್ ಶುಲ್ಕ ಏರಿಕೆಯ ಬಿಸಿ ಒಂದೊಡೆಯಾದ್ರೆ ಮತ್ತೊಂದೆಡೆ ಖಾಸಗಿ ಕಾಲೇಜುಗಳ ಶುಲ್ಕ ಏರಿಕೆ ಬರೆ ಪೋಷಕರಿಗೆ ಎದುರಾಗಿದೆ.

ಇಂಜಿನಿಯರಿಂಗ್‌ ಸೀಟು ಬಲು ದುಬಾರಿ; 10-15 % ಶುಲ್ಕ ಏರಿಕೆಗೆ ಖಾಸಗಿ ಕಾಲೇಜುಗಳ ಒಕ್ಕೂಟ ನಿರ್ಧಾರ
ಇಂಜಿನಿಯರಿಂಗ್‌ ಸೀಟು ಬಲು ದುಬಾರಿ
ವಿನಯ್​ ಕಾಶಪ್ಪನವರ್​
| Edited By: ಆಯೇಷಾ ಬಾನು|

Updated on: Jun 11, 2024 | 7:12 AM

Share

ಬೆಂಗಳೂರು, ಜೂನ್.11: ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಪರದಡುವ ಸ್ಥಿತಿ ಇದೆ. ಇದರ ನಡುವೆ ಈಗ ವೃತ್ತಿಪರ ಕೋರ್ಸ್ ಪ್ರವೇಶ ಶುಲ್ಕ ಏರಿಕೆಯ ಟೆನ್ಷನ್ ಪೋಷಕರಿಗೆ ಎದುರಾಗಿದೆ. ಸಿಇಟಿ (CET) ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಈ ವರ್ಷ ಖಾಸಗಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿನ (Engineering College) ಸರ್ಕಾರಿ ಕೋಟಾ ಹಾಗೂ ಕಾಮೆಡ್‌-ಕೆ ಕೋಟಾ ಸೀಟುಗಳ ಪ್ರವೇಶ ಶುಲ್ಕ 10-15 % ಏರಿಕೆಗೆ ಖಾಸಗಿ ಕಾಲೇಜುಗಳ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದೆ. ಇದರ ನಡುವೆ ಈಗ ಖಾಸಗಿ ಖಾಲೇಜುಗಳಲ್ಲಿ ಇಂಜಿನಿಯರಿಂಗ್ ಖಾಸಗಿ ಕೋಟಾ ಸೀಟ್ ಗೆ ಭರ್ಜರಿ ಡಿಮ್ಯಾಂಡ್ ಶುರುವಾಗಿದ್ದು ಶುಲ್ಕ ಸುಲಿಗೆಗೆ ಕಾಲೇಜುಗಳು ಮುಂದಾಗಿವೆ.

ಸಿಇಟಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆ. ಪರೀಕ್ಷೆ ಬರೆದು ಉತ್ತಮ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು ಸರ್ಕಾರಿ ಕೋಟಾದಲ್ಲಿ ಸೀಟು ಪಡೆಯಲು ಮುಂದಾಗಿದ್ದಾರೆ. ಅತಿ ಬೇಡಿಕೆಯ ಬ್ರ್ಯಾಂಚ್‌ ಸೇರುವ ಪ್ಲಾನ್ ಮಾಡಿಕೊಂಡಿದ್ದಾರೆ. ಆದರೆ ಉತ್ತಮ ರ‍್ಯಾಂಕ್ ಬಾರದ ವಿದ್ಯಾರ್ಥಿಗಳು ಖಾಸಗಿ ಸೀಟ್ ಕೋಟಾದಡಿ ಖಾಸಗಿ ಇಂಜನಿಯರಿಂಗ್ ಪ್ರವೇಶಾತಿಗೆ ಮುಂದಾಗಿದ್ದಾರೆ. ಈಗ ಈ ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜುಗಳು 20% ರಿಂದ 30 % ಶುಲ್ಕ ಸುಲಿಗೆ ಮಾಡಲು ಮುಂದಾಗಿವೆ. ಬೆಂಗಳೂರಿನ ಪ್ರತಿಷ್ಠಿತ ಇಂಜನಿಯರಿಂಗ್ ಕಾಲೇಜಿನಲ್ಲಿ ಸೀಟ್ ಪಡೆಯಲು 6 ರಿಂದ 10 ಲಕ್ಷ ಶುಲ್ಕ ಕಟ್ಟಬೇಕಾದ ಸ್ಥಿತಿ ಪೋಷಕರಿಗೆ ಬಂದಿದೆ. ಇದರ ನಡುವೆಯೂ ಈ ವರ್ಷ ಇಂಜಿನಿಯರಿಂಗ್ ಶುಲ್ಕ 10-15% ಏರಿಕೆಗೆ ಖಾಸಗಿ ಕಾಲೇಜುಗಳ ಸಂಘಟನೆಯಿಂದ ಸರ್ಕಾರಕ್ಕೆ ಒತ್ತಾಯ ಕೇಳಿ ಬಂದಿದೆ.

ಇದನ್ನೂ ಓದಿ: KCET Result 2024: ಕೆಸಿಇಟಿ ಫಲಿತಾಂಶ ಪ್ರಕಟ; ಸೀಟು ಹಂಚಿಕೆ, ಕೌನ್ಸಲಿಂಗ್ ಯಾವಾಗ? ಇಲ್ಲಿದೆ ವಿವರ

ಕಳೆದ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳಿಗೂ ಪ್ರವೇಶಾತಿ ಶುಲ್ಕ ಶೇ.7% ಹೆಚ್ಚಳ ಮಾಡಲಾಗಿತ್ತು. ಸರ್ಕಾರಿ ಕಾಲೇಜುಗಳಲ್ಲಿ 40 ಸಾವಿರ ರೂ ಶುಲ್ಕ ಹೆಚ್ಚಿಸಲಾಗಿತ್ತು. ಸರ್ಕಾರಿ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ 67 – 68.000 ರೂ, ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-1) ಶುಲ್ಕ 69,000 ರೂ, ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-2) ಶುಲ್ಕ 76,000 ರೂ, ಡೀಮ್ಡ್ ಮತ್ತು ಖಾಸಗಿ ವಿವಿ ಕಾಲೇಜುಗಳ ಶುಲ್ಕ 1.69.00 ಲಕ್ಷ ರೂ ಮಾಡಲಾಗಿತ್ತು. ಆದರೆ ಇದರ ಹೊರತಾಗಿ ಖಾಸಗಿ ಕೋಟ ಸೀಟ್ ಗಳಿಗೆ ಕಾಲೇಜುಗಳು ಮನಸಿಗೆ ಬಂದಷ್ಟು ಶುಲ್ಕ ಪಡೆಯುತ್ತಿದ್ದು ಪೋಷಕರ ಪರದಾಟಕ್ಕ ಕಾರಣವಾಗಿದೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಸೀಟ್ ಪಡೆಯಲು 6 ರಿಂದ 10 ಲಕ್ಷ ನೀಡಬೇಕಿದೆ.

ಆದರೆ ಈ ಬಗ್ಗೆ ಉನ್ನತ್ತ ಶಿಕ್ಷಣ ಸಚಿವರಾದ ಎಂ ಸಿ ಸುಧಾಕರ್ ಮಾತ್ರ ನಮ್ಮಲ್ಲಿ ಶುಲ್ಕ ನಿಯಂತ್ರಣ ಸಮಿತಿ ಇಲ್ಲ. ಹೀಗಾಗಿ ಈ ಸಮಸ್ಯೆ ಇದೆ. ಇನ್ನು ಈ ವರ್ಷ ಖಾಸಗಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಹಾಗೂ ಕಾಮೆಡ್‌-ಕೆ ಕೋಟಾ ಸೀಟುಗಳ ಪ್ರವೇಶ ಶುಲ್ಕ 10-15 % ಏರಿಕೆಗೆ ಖಾಸಗಿ ಕಾಲೇಜುಗಳ ಒಕ್ಕೂಟ ಒತ್ತಾಯ ಮಾಡಿದೆ. ಚರ್ಚೆ ಮಾಡ್ತೀವಿ ಎಂದು ತಿಳಿಸಿದ್ದಾರೆ.

ಸದ್ಯ ರಾಜ್ಯದಲ್ಲಿ ಪಿಯುಸಿ ಬಳಿಕ ಉನ್ನತ್ತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಈ ವರ್ಷ ಹೆಚ್ಚಾಗಿದೆ. ಇತಂಹ ಸ್ಥಿತಿಯಲ್ಲಿ ಉನ್ನತ್ತ ಶಿಕ್ಷಣ ಪಡೆಯುವ ಕೋರ್ಸ್ ಗಳಿಗೆ ಶುಲ್ಕ ಏರಿಸಿ ಗಗನ ಕುಸುಮ ಮಾಡಿದ್ರೆ ಉನ್ನತ್ತ ಶಿಕ್ಷಣ ಪಡೆಯವುದಕ್ಕೆ ಮತ್ತಷ್ಟು ಕೊಕ್ಕೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಸರ್ಕಾರ ಎಚ್ಚೆತ್ತು ಶುಲ್ಕ ಏರಿಕೆಯ ಪ್ರಸ್ತಾವನೆಯ ಕೈಬಿಡಬೇಕಿದೆ. ಖಾಸಗಿ ಕಾಲೇಜುಗಳಿಗೂ ಕಡಿವಾಣ ಹಾಕಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ