AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಉದ್ಘಾಟಿಸಿದ ವಂದೇ ಭಾರತ್​​ನಿಂದ 2 ಗಂಟೆ ಕಡಿಮೆಯಾಗಲಿದೆ ಎರ್ನಾಕುಲಂ-ಬೆಂಗಳೂರು ಪ್ರಯಾಣದ ಸಮಯ

ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಬೆಂಗಳೂರು- ಎರ್ನಾಕುಲಂ ನಡುವಿನ ರೈಲು ಪ್ರಯಾಣದ ಸಮಯವನ್ನು 2 ಗಂಟೆಗಳಿಗೂ ಹೆಚ್ಚು ಕಡಿತಗೊಳಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದ 4 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಬೆಂಗಳೂರು-ಎರ್ನಾಕುಲಂ ಮಾರ್ಗದ ರೈಲು ಕೂಡ ಸೇರಿದೆ. ಇದು ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

ಮೋದಿ ಉದ್ಘಾಟಿಸಿದ ವಂದೇ ಭಾರತ್​​ನಿಂದ 2 ಗಂಟೆ ಕಡಿಮೆಯಾಗಲಿದೆ ಎರ್ನಾಕುಲಂ-ಬೆಂಗಳೂರು ಪ್ರಯಾಣದ ಸಮಯ
Vande Bharat Express
ಸುಷ್ಮಾ ಚಕ್ರೆ
|

Updated on: Nov 08, 2025 | 4:29 PM

Share

ಬೆಂಗಳೂರು, ನವೆಂಬರ್ 8: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ವಾರಾಣಸಿ ಕ್ಷೇತ್ರದಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲು ಸೇವೆಗೆ ಚಾಲನೆ ನೀಡಿದ್ದಾರೆ. ಇದರಲ್ಲಿ ಬೆಂಗಳೂರು-ಎರ್ನಾಕುಲಂ ಮಾರ್ಗದ ವಂದೇ ಭಾರತ್ ರೈಲು ಕೂಡ ಸೇರಿದೆ. ಇಂದು ಉದ್ಘಾಟನೆಗೊಂಡ ಈ 4 ರೈಲುಗಳು ಪ್ರಮುಖ ನಿಲ್ದಾಣಗಳ ನಡುವಿನ ಪ್ರಯಾಣದ ಸಮಯವನ್ನು ಬಹಳ ಕಡಿಮೆ ಮಾಡುತ್ತದೆ. ಬೆಂಗಳೂರು-ಎರ್ನಾಕುಲಂ ರೈಲು ಮಾರ್ಗ ಎರಡೂ ನಗರಗಳ ನಡುವಿನ ಪ್ರಯಾಣದ ಸಮಯವನ್ನು 2 ಗಂಟೆ ಕಡಿಮೆ ಮಾಡುತ್ತದೆ.

ಬೆಂಗಳೂರು- ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಕೇರಳ, ತಮಿಳುನಾಡು ಮತ್ತು ಕರ್ನಾಟಕವನ್ನು ಸಂಪರ್ಕಿಸುತ್ತದೆ. ಈ ರೈಲು ಮೊದಲ ಅಂತರ್ ರಾಜ್ಯ ಅರೆ-ಹೈ-ಸ್ಪೀಡ್ ಪ್ರೀಮಿಯಂ ರೈಲು ಸೇವೆಯಾಗಿದೆ. ಬೆಂಗಳೂರು-ಎರ್ನಾಕುಲಂ ರೈಲಿನ ಪ್ರಮುಖ ನಿಲ್ದಾಣಗಳು ತ್ರಿಶೂರ್, ಪಾಲಕ್ಕಾಡ್, ಕೊಯಮತ್ತೂರು, ತಿರುಪ್ಪೂರು, ಈರೋಡ್, ಸೇಲಂ, ಕೃಷ್ಣರಾಜಪುರಂ ಮತ್ತು ಬೆಂಗಳೂರು ರೈಲ್ವೆ ನಿಲ್ದಾಣ.

ಇದನ್ನೂ ಓದಿ: ಕರ್ನಾಟಕಕ್ಕೆ ಗುಡ್ ನ್ಯೂಸ್; ಬೆಂಗಳೂರು-ಎರ್ನಾಕುಲಂ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚಾರಕ್ಕೆ ಅನುಮೋದನೆ

ಈ ರೈಲು ಕೇರಳದಿಂದ ಚಲಿಸುವ ಮೂರನೇ ವಂದೇ ಭಾರತ್ ರೈಲು. ಇದು ಪ್ರಯಾಣದ ಸಮಯವನ್ನು 2 ಗಂಟೆ 20 ನಿಮಿಷಗಳ ಕಾಲ ಕಡಿತಗೊಳಿಸಲಿದೆ. ಇಂಟರ್‌ಸಿಟಿ ವಂದೇ ಭಾರತ್ ಎಕ್ಸ್‌ಪ್ರೆಸ್ 8 ಗಂಟೆ 40 ನಿಮಿಷಗಳಲ್ಲಿ 583 ಕಿ.ಮೀ ದೂರವನ್ನು ಕ್ರಮಿಸಲಿದೆ.

ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಬುಧವಾರ ಹೊರತುಪಡಿಸಿ ವಾರದ ದಿನಗಳಲ್ಲಿ ಚಲಿಸಲಿದೆ. ನವೆಂಬರ್ 9ರಿಂದ ಸೇವೆಯನ್ನು ಪ್ರಾರಂಭಿಸುವ ಈ ರೈಲು ಬೆಂಗಳೂರಿನಿಂದ ಬೆಳಿಗ್ಗೆ 5.10ಕ್ಕೆ ಹೊರಟು ಮಧ್ಯಾಹ್ನ 1.50ಕ್ಕೆ ಎರ್ನಾಕುಲಂಗೆ ತಲುಪಲಿದೆ. ವಾಪಾಸ್ ಈ ರೈಲು ಮಧ್ಯಾಹ್ನ 2.20ಕ್ಕೆ ಎರ್ನಾಕುಲಂನಿಂದ ಹೊರಟು ರಾತ್ರಿ 11 ಗಂಟೆಗೆ ಬೆಂಗಳೂರಿಗೆ ಆಗಮಿಸುತ್ತದೆ.

ಇದನ್ನೂ ಓದಿ: Video: ವಾರಾಣಸಿಯಲ್ಲಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಇದು ಕೇರಳದಿಂದ ಚಲಿಸುವ ಮೂರನೇ ವಂದೇ ಭಾರತ್ ರೈಲು. ಇದು ಪ್ರಯಾಣದ ಸಮಯವನ್ನು 2 ಗಂಟೆ 20 ನಿಮಿಷಗಳಿಂದ ಕಡಿತಗೊಳಿಸಲಾಗಿದ್ದು, ಇಂಟರ್‌ಸಿಟಿ ವಂದೇ ಭಾರತ್ ಎಕ್ಸ್‌ಪ್ರೆಸ್ 8 ಗಂಟೆ 40 ನಿಮಿಷಗಳಲ್ಲಿ 583 ಕಿ.ಮೀ ದೂರವನ್ನು ಕ್ರಮಿಸಲಿದೆ.

ಪ್ರಸ್ತುತ, ಎರ್ನಾಕುಲಂ ಮತ್ತು ಬೆಂಗಳೂರು ನಡುವಿನ ಇಂಟರ್‌ಸಿಟಿ ಎಕ್ಸ್‌ಪ್ರೆಸ್ 583 ಕಿ.ಮೀ ಮಾರ್ಗವನ್ನು ಕ್ರಮಿಸಲು 11 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಹೊಸ ವಂದೇ ಭಾರತ್ ರೈಲು ಈ ಪ್ರಯಾಣದ ಸಮಯವನ್ನು ಕೇವಲ 8 ಗಂಟೆ 40 ನಿಮಿಷಗಳಿಗೆ ಇಳಿಸಲಿದ್ದು, ಎರಡೂ ನಗರಗಳ ನಡುವೆ ವೇಗದ ಸಂಪರ್ಕವನ್ನು ಕಲ್ಪಿಸುತ್ತದೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್