AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಉದ್ಘಾಟಿಸಿದ ವಂದೇ ಭಾರತ್​​ನಿಂದ 2 ಗಂಟೆ ಕಡಿಮೆಯಾಗಲಿದೆ ಎರ್ನಾಕುಲಂ-ಬೆಂಗಳೂರು ಪ್ರಯಾಣದ ಸಮಯ

ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಬೆಂಗಳೂರು- ಎರ್ನಾಕುಲಂ ನಡುವಿನ ರೈಲು ಪ್ರಯಾಣದ ಸಮಯವನ್ನು 2 ಗಂಟೆಗಳಿಗೂ ಹೆಚ್ಚು ಕಡಿತಗೊಳಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದ 4 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಬೆಂಗಳೂರು-ಎರ್ನಾಕುಲಂ ಮಾರ್ಗದ ರೈಲು ಕೂಡ ಸೇರಿದೆ. ಇದು ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

ಮೋದಿ ಉದ್ಘಾಟಿಸಿದ ವಂದೇ ಭಾರತ್​​ನಿಂದ 2 ಗಂಟೆ ಕಡಿಮೆಯಾಗಲಿದೆ ಎರ್ನಾಕುಲಂ-ಬೆಂಗಳೂರು ಪ್ರಯಾಣದ ಸಮಯ
Vande Bharat Express
ಸುಷ್ಮಾ ಚಕ್ರೆ
|

Updated on: Nov 08, 2025 | 4:29 PM

Share

ಬೆಂಗಳೂರು, ನವೆಂಬರ್ 8: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ವಾರಾಣಸಿ ಕ್ಷೇತ್ರದಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲು ಸೇವೆಗೆ ಚಾಲನೆ ನೀಡಿದ್ದಾರೆ. ಇದರಲ್ಲಿ ಬೆಂಗಳೂರು-ಎರ್ನಾಕುಲಂ ಮಾರ್ಗದ ವಂದೇ ಭಾರತ್ ರೈಲು ಕೂಡ ಸೇರಿದೆ. ಇಂದು ಉದ್ಘಾಟನೆಗೊಂಡ ಈ 4 ರೈಲುಗಳು ಪ್ರಮುಖ ನಿಲ್ದಾಣಗಳ ನಡುವಿನ ಪ್ರಯಾಣದ ಸಮಯವನ್ನು ಬಹಳ ಕಡಿಮೆ ಮಾಡುತ್ತದೆ. ಬೆಂಗಳೂರು-ಎರ್ನಾಕುಲಂ ರೈಲು ಮಾರ್ಗ ಎರಡೂ ನಗರಗಳ ನಡುವಿನ ಪ್ರಯಾಣದ ಸಮಯವನ್ನು 2 ಗಂಟೆ ಕಡಿಮೆ ಮಾಡುತ್ತದೆ.

ಬೆಂಗಳೂರು- ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಕೇರಳ, ತಮಿಳುನಾಡು ಮತ್ತು ಕರ್ನಾಟಕವನ್ನು ಸಂಪರ್ಕಿಸುತ್ತದೆ. ಈ ರೈಲು ಮೊದಲ ಅಂತರ್ ರಾಜ್ಯ ಅರೆ-ಹೈ-ಸ್ಪೀಡ್ ಪ್ರೀಮಿಯಂ ರೈಲು ಸೇವೆಯಾಗಿದೆ. ಬೆಂಗಳೂರು-ಎರ್ನಾಕುಲಂ ರೈಲಿನ ಪ್ರಮುಖ ನಿಲ್ದಾಣಗಳು ತ್ರಿಶೂರ್, ಪಾಲಕ್ಕಾಡ್, ಕೊಯಮತ್ತೂರು, ತಿರುಪ್ಪೂರು, ಈರೋಡ್, ಸೇಲಂ, ಕೃಷ್ಣರಾಜಪುರಂ ಮತ್ತು ಬೆಂಗಳೂರು ರೈಲ್ವೆ ನಿಲ್ದಾಣ.

ಇದನ್ನೂ ಓದಿ: ಕರ್ನಾಟಕಕ್ಕೆ ಗುಡ್ ನ್ಯೂಸ್; ಬೆಂಗಳೂರು-ಎರ್ನಾಕುಲಂ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚಾರಕ್ಕೆ ಅನುಮೋದನೆ

ಈ ರೈಲು ಕೇರಳದಿಂದ ಚಲಿಸುವ ಮೂರನೇ ವಂದೇ ಭಾರತ್ ರೈಲು. ಇದು ಪ್ರಯಾಣದ ಸಮಯವನ್ನು 2 ಗಂಟೆ 20 ನಿಮಿಷಗಳ ಕಾಲ ಕಡಿತಗೊಳಿಸಲಿದೆ. ಇಂಟರ್‌ಸಿಟಿ ವಂದೇ ಭಾರತ್ ಎಕ್ಸ್‌ಪ್ರೆಸ್ 8 ಗಂಟೆ 40 ನಿಮಿಷಗಳಲ್ಲಿ 583 ಕಿ.ಮೀ ದೂರವನ್ನು ಕ್ರಮಿಸಲಿದೆ.

ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಬುಧವಾರ ಹೊರತುಪಡಿಸಿ ವಾರದ ದಿನಗಳಲ್ಲಿ ಚಲಿಸಲಿದೆ. ನವೆಂಬರ್ 9ರಿಂದ ಸೇವೆಯನ್ನು ಪ್ರಾರಂಭಿಸುವ ಈ ರೈಲು ಬೆಂಗಳೂರಿನಿಂದ ಬೆಳಿಗ್ಗೆ 5.10ಕ್ಕೆ ಹೊರಟು ಮಧ್ಯಾಹ್ನ 1.50ಕ್ಕೆ ಎರ್ನಾಕುಲಂಗೆ ತಲುಪಲಿದೆ. ವಾಪಾಸ್ ಈ ರೈಲು ಮಧ್ಯಾಹ್ನ 2.20ಕ್ಕೆ ಎರ್ನಾಕುಲಂನಿಂದ ಹೊರಟು ರಾತ್ರಿ 11 ಗಂಟೆಗೆ ಬೆಂಗಳೂರಿಗೆ ಆಗಮಿಸುತ್ತದೆ.

ಇದನ್ನೂ ಓದಿ: Video: ವಾರಾಣಸಿಯಲ್ಲಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಇದು ಕೇರಳದಿಂದ ಚಲಿಸುವ ಮೂರನೇ ವಂದೇ ಭಾರತ್ ರೈಲು. ಇದು ಪ್ರಯಾಣದ ಸಮಯವನ್ನು 2 ಗಂಟೆ 20 ನಿಮಿಷಗಳಿಂದ ಕಡಿತಗೊಳಿಸಲಾಗಿದ್ದು, ಇಂಟರ್‌ಸಿಟಿ ವಂದೇ ಭಾರತ್ ಎಕ್ಸ್‌ಪ್ರೆಸ್ 8 ಗಂಟೆ 40 ನಿಮಿಷಗಳಲ್ಲಿ 583 ಕಿ.ಮೀ ದೂರವನ್ನು ಕ್ರಮಿಸಲಿದೆ.

ಪ್ರಸ್ತುತ, ಎರ್ನಾಕುಲಂ ಮತ್ತು ಬೆಂಗಳೂರು ನಡುವಿನ ಇಂಟರ್‌ಸಿಟಿ ಎಕ್ಸ್‌ಪ್ರೆಸ್ 583 ಕಿ.ಮೀ ಮಾರ್ಗವನ್ನು ಕ್ರಮಿಸಲು 11 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಹೊಸ ವಂದೇ ಭಾರತ್ ರೈಲು ಈ ಪ್ರಯಾಣದ ಸಮಯವನ್ನು ಕೇವಲ 8 ಗಂಟೆ 40 ನಿಮಿಷಗಳಿಗೆ ಇಳಿಸಲಿದ್ದು, ಎರಡೂ ನಗರಗಳ ನಡುವೆ ವೇಗದ ಸಂಪರ್ಕವನ್ನು ಕಲ್ಪಿಸುತ್ತದೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!