AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಿವೃತ್ತ ಸೈನಿಕನ ಬರ್ಬರ ಹತ್ಯೆ, ಬಳ್ಳಾರಿಯಲ್ಲಿ ಕಸದ ರಾಶಿ ಕುಸಿದು ಇಬ್ಬರು ಕಾರ್ಮಿಕರ ಸಾವು

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸುಲ್ತಾನಪುರದಲ್ಲಿ ಘಟನೆ ನಡೆದಿದೆ. ಕಬ್ಬಿಣ ಆಯುವ ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕುಡತಿನಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೆಂಗಳೂರಿನಲ್ಲಿ ನಿವೃತ್ತ ಸೈನಿಕನ ಬರ್ಬರ ಹತ್ಯೆ, ಬಳ್ಳಾರಿಯಲ್ಲಿ ಕಸದ ರಾಶಿ ಕುಸಿದು ಇಬ್ಬರು ಕಾರ್ಮಿಕರ ಸಾವು
ಬೆಂಗಳೂರಿನಲ್ಲಿ ನಿವೃತ್ತ ಸೈನಿಕನ ಬರ್ಬರ ಹತ್ಯೆ
TV9 Web
| Edited By: |

Updated on: Apr 13, 2022 | 6:35 PM

Share

ಬೆಂಗಳೂರು: ನಗರದಲ್ಲಿ ದುಷ್ಕರ್ಮಿಗಳು ನಿವೃತ್ತ ಸೈನಿಕನನ್ನು ಬರ್ಬರವಾಗಿ ಹತ್ಯೆಗೈದ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ಹಲಸೂರು ಠಾಣಾ ವ್ಯಾಪ್ತಿಯಲ್ಲಿ ನಿವೃತ್ತ ಸೈನಿಕ ಸುರೇಶ್ ಅಲಿಯಾಸ್ ಜೂಡ್ ಬರ್ಬರ ಹತ್ಯೆ ಮಾಡಲಾಗಿದೆ. ಮನೆಯಲ್ಲಿ ಒಂಟಿಯಾಗಿರುವಾಗ ಸುರೇಶ್​ ಬರ್ಬರ ಕೊಲೆ ನಡೆಸಲಾಗಿದೆ. ಇತ್ತ ಬಳ್ಳಾರಿಯ ಸುಲ್ತಾನಪುರ ಬಳಿ ಕಸದ ರಾಶಿ ಕುಸಿದು ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. JSW ಡಂಪಿಂಗ್ ಯಾರ್ಡ್​ನಲ್ಲಿ ದುರ್ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸುಲ್ತಾನಪುರದಲ್ಲಿ ಘಟನೆ ನಡೆದಿದೆ. ಕಬ್ಬಿಣ ಆಯುವ ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕುಡತಿನಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಚಾರಣಾಧೀನ ಕೈದಿ ಜತಿನ್ ಕುಮಾರ್ ಆತ್ಮಹತ್ಯೆಗೆ ಯತ್ನ

ಕೋರ್ಟ್​ನ 5ನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಚಾರಣಾಧೀನ ಕೈದಿ ಜತಿನ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 2020ರಲ್ಲಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತನ್ನ ಮಕ್ಕಳನ್ನೇ ಹತ್ಯೆಗೈದ ಆರೋಪ ಜತಿನ್ ಮೇಲಿತ್ತು. ಹುಳಿಮಾವು ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ವಿಚಾರಣೆ ಹಿನ್ನೆಲೆ ಇಂದು ಕೋರ್ಟ್​ಗೆ ಕರೆತರಲಾಗಿತ್ತು. ಪೊಲೀಸರಿಂದ ತಪ್ಪಿಸಿಕೊಂಡು ಜತಿನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಾಯಾಳು ಆರೋಪಿ ಜತಿನ್​ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ; ತನಿಖೆ ಕೈಗೆತ್ತಿಕೊಂಡ ಆ್ಯಂಟಿ ಟೆರರಿಸಂ ಸೆಲ್

ನಗರದಲ್ಲಿ ಒಟ್ಟು 15 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ತಿಳಿದುಬಂದಿದ್ದು, 10 ಕ್ಕೂ ಅಧಿಕ ಇಮೇಲ್‌ಗಳಿಂದ ಬೆದರಿಕೆ ಬಂದಿದೆ. Proxy server ಬಳಸಿ ದುಷ್ಕರ್ಮಿಗಳು ಮೇಲ್ ಮಾಡಿದ್ದಾರೆ. 8- 10 Proxy server ಬಳಸಿರುವುದರಿಂದ ಹಲವಾರು ಲೇಯರ್‌ಗಳಿವೆ. ಒಂದು ಲೇಯರ್ ಪತ್ತೆ ಮಾಡಿದ್ರೆ, ಅದು ಇನ್ನೊಂದು ಲೇಯರ್‌ಗೆ ಕನೆಕ್ಟ್ ಆಗತ್ತೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಇಮೇಲ್ ಮೂಲ ಪತ್ತೆ ಹಚ್ಚಲು ಗೂಗಲ್ ಸಂಸ್ಥೆಗೆ ಪತ್ರ ಬರೆಯಲಾಗಿದೆ. ಐಟಿ ಆ್ಯಕ್ಟ್, 66F ಅಡಿ ಪ್ರಕರಣ ದಾಖಲಾಗಿರೋದ್ರಿಂದ ಪ್ರಕರಣಕ್ಕೆ ಗಂಭೀರತೆ ಇದೆ. ತನಿಖೆ ನಡೆಸ್ತಿರುವ ಪೊಲೀಸರಿಗೆ ಎಟಿಸಿಯಿಂದಲೂ ಸಾಥ್ ನೀಡಲಾಗುತ್ತದೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಪ್ರಕರಣದ ತನಿಖೆ ಎಟಿಸಿ ಹೆಗಲಿಗೆ ನೀಡಲಾಗಿದೆ. ಆ್ಯಂಟಿ ಟೆರರಿಸಂ ಸೆಲ್ ತನಿಖೆಯನ್ನು ಕೈಗೆತ್ತಿಕೊಂಡಿದೆ.

ಯಾದಗಿರಿ: ಬಸ್​ನಲ್ಲಿದ್ದ ಖಾರದ ಪುಡಿ ಬ್ಯಾಗ್ ಒಡೆದು 15 ಪ್ರಯಾಣಿಕರ ಕಣ್ಣಲ್ಲಿ ಖಾರದಪುಡಿ ಬಿದ್ದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯಿಂದ ಗುರುಮಠಕಲ್​ ಕಡೆ ತೆರಳುತ್ತಿದ್ದ ಬಸ್​ನಲ್ಲಿ ಘಟನೆ ನಡೆದಿದೆ. ಮಕ್ಕಳು ಸೇರಿದಂತೆ 15 ಪ್ರಯಾಣಿಕರ ಕಣ್ಣಿಗೆ ಖಾರದ ಪುಡಿ ಬಿದ್ದಿದೆ.

ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ಹೋಗಿದ್ದ ಬಾಲಕ (16) ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ಸಂಭವಿಸಿದೆ. ಅಜ್ಜಿ ಪಾಲಿನ ಕೆಲಸಕ್ಕೆ ಹೋಗಿದ್ದ ಬಾಲಕ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಸಾವಿಗೆ ಅಧಿಕಾರಿಗಳೆ ಕಾರಣ‌ ಎಂದು ಆರೋಪ ಮಾಡಲಾಗಿದೆ. ಪಂಚಾಯತ್ ಅಧಿಕಾರಿಗಳ ವಿರುದ್ಧ ಬಾಲಕನ ಕುಟುಂಬಸ್ಥರ ಆರೋಪ ವ್ಯಕ್ತವಾಗಿದೆ.

ಇದನ್ನೂ ಓದಿ: Bengaluru Crime ಲೆಕ್ಚರರ್ ಮಗನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಯುವಕ ಅರೆಸ್ಟ್​

ಇದನ್ನೂ ಓದಿ: Bengaluru Crime: ವಾಕಿಂಗ್ ಮಾಡುವ ಮಹಿಳೆಯರ ಪೋಟೋ ವಿಡಿಯೋ ತೆಗೆಯುತ್ತಿದ್ದ ವ್ಯಕ್ತಿಯ ಬಂಧನ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?