AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚದ ಅರೋಪ: ಬೆಂಗಳೂರು ನಗರದ ಮಾಜಿ ಜಿಲ್ಲಾಧಿಕಾರಿ ಮಂಜುನಾಥ್​ಗೆ ಜಾಮೀನು

ಉಪತಹಶೀಲ್ದಾರ್ ಪಿ.ಸಿ.ಮಹೇಶ್ ಮತ್ತು ನಾಗರಿಕ ಚೇತನ್ ಕುಮಾರ್ ಆರೋಪಿಗಳಾಗಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜೆ.ಮಂಜುನಾಥ್ 3ನೇ ಆರೋಪಿಯಾಗಿದ್ದಾರೆ.

ಲಂಚದ ಅರೋಪ: ಬೆಂಗಳೂರು ನಗರದ ಮಾಜಿ ಜಿಲ್ಲಾಧಿಕಾರಿ ಮಂಜುನಾಥ್​ಗೆ ಜಾಮೀನು
ಬೆಂಗಳೂರು ನಗರದ ಮಾಜಿ ಜಿಲ್ಲಾಧಿಕಾರಿ ಜೆ ಮಂಜುನಾಥ್
TV9 Web
| Edited By: |

Updated on: Sep 04, 2022 | 9:50 AM

Share

ಬೆಂಗಳೂರು: ಲಂಚದ ಆರೋಪ ಹೊತ್ತಿರುವ ಬೆಂಗಳೂರು ನಗರ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರಿಗೆ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಶನಿವಾರ ಜಾಮೀನು (ಡಿಫಾಲ್ಟ್​ ಬೇಲ್) ಮಂಜೂರು ಮಾಡಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ಜಾಲತಾಣ ವರದಿ ಮಾಡಿದೆ. ಉಪತಹಶೀಲ್ದಾರ್ ಪಿ.ಸಿ.ಮಹೇಶ್ ಮತ್ತು ನಾಗರಿಕ ಚೇತನ್ ಕುಮಾರ್ ಆರೋಪಿಗಳಾಗಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜೆ.ಮಂಜುನಾಥ್ 3ನೇ ಆರೋಪಿಯಾಗಿದ್ದಾರೆ (A3).

ನಿಯಮಗಳಿಗೆ ಅನುಗುಣವಾಗಿ 60 ದಿನಗಳ ಒಳಗೆ ತನಿಖಾ ಸಂಸ್ಥೆಯು ಅಂತಿಮ ವರದಿಯನ್ನು ಸಲ್ಲಿಸಬೇಕಿತ್ತು. ಆದರೆ ವರದಿ ಸಲ್ಲಿಸಲು ತನಿಖಾ ಸಂಸ್ಥೆಯು ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಮಾಜಿ ಜಿಲ್ಲಾಧಿಕಾರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಮೊದಲು ಮಂಜುನಾಥ್ ಅವರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ಹಾಗೂ ಹೈಕೋರ್ಟ್​ ತಿರಸ್ಕರಿಸಿತ್ತು.

ಮಹೇಶ್ ಮತ್ತು ಚೇತನ್ ಅವರನ್ನು ಅಂದಿನ ಜಿಲ್ಲಾಧಿಕಾರಿ ಮಂಜುನಾಥ್ ಅವರ ಸೂಚನೆ ಮೇರೆಗೆ ₹ 5 ಲಕ್ಷ ಲಂಚ ಪಡೆಯುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳ (Anti-Corruption Bureau – ACB) ಬಂಧಿಸಿತ್ತು. ಮಹೇಶ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ವೇಳೆ ಜಿಲ್ಲಾಧಿಕಾರಿ ಹೆಸರನ್ನು ಆರೋಪಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ಹೈಕೋರ್ಟ್​ ಎಸಿಬಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಈ ಬೆಳವಣಿಗೆಯ ನಂತರ ಮಂಜುನಾಥ್ ಅವರನ್ನು ರಾಜ್ಯ ಸರ್ಕಾರವು ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿತ್ತು. ಕೊನೆಗೆ ಅವರನ್ನು ಜುಲೈ 4ರಂದು ಬಂಧಿಸಲಾಗಿತ್ತು.

ಮಂಜುನಾಥ್‌ ವಿರುದ್ಧ ಭೂವ್ಯಾಜ್ಯ ಸಂಬಂಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಕೆಳ ಹಂತದ ಅಧಿಕಾರಿಗಳ ಮೂಲಕ ಲಂಚ ಪಡೆದಿರುವ ಪ್ರಕರಣದಲ್ಲಿ ಅವರು ಮೂರನೇ ಆರೋಪಿಯಾಗಿದ್ದರು. ಈ ಮೊದಲು ಆಗಸ್ಟ್​ 3ರಂದು ಮಂಜುನಾಥ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Follow Us
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ