AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚದ ಅರೋಪ: ಬೆಂಗಳೂರು ನಗರದ ಮಾಜಿ ಜಿಲ್ಲಾಧಿಕಾರಿ ಮಂಜುನಾಥ್​ಗೆ ಜಾಮೀನು

ಉಪತಹಶೀಲ್ದಾರ್ ಪಿ.ಸಿ.ಮಹೇಶ್ ಮತ್ತು ನಾಗರಿಕ ಚೇತನ್ ಕುಮಾರ್ ಆರೋಪಿಗಳಾಗಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜೆ.ಮಂಜುನಾಥ್ 3ನೇ ಆರೋಪಿಯಾಗಿದ್ದಾರೆ.

ಲಂಚದ ಅರೋಪ: ಬೆಂಗಳೂರು ನಗರದ ಮಾಜಿ ಜಿಲ್ಲಾಧಿಕಾರಿ ಮಂಜುನಾಥ್​ಗೆ ಜಾಮೀನು
ಬೆಂಗಳೂರು ನಗರದ ಮಾಜಿ ಜಿಲ್ಲಾಧಿಕಾರಿ ಜೆ ಮಂಜುನಾಥ್
TV9 Web
| Edited By: |

Updated on: Sep 04, 2022 | 9:50 AM

Share

ಬೆಂಗಳೂರು: ಲಂಚದ ಆರೋಪ ಹೊತ್ತಿರುವ ಬೆಂಗಳೂರು ನಗರ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರಿಗೆ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಶನಿವಾರ ಜಾಮೀನು (ಡಿಫಾಲ್ಟ್​ ಬೇಲ್) ಮಂಜೂರು ಮಾಡಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ಜಾಲತಾಣ ವರದಿ ಮಾಡಿದೆ. ಉಪತಹಶೀಲ್ದಾರ್ ಪಿ.ಸಿ.ಮಹೇಶ್ ಮತ್ತು ನಾಗರಿಕ ಚೇತನ್ ಕುಮಾರ್ ಆರೋಪಿಗಳಾಗಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜೆ.ಮಂಜುನಾಥ್ 3ನೇ ಆರೋಪಿಯಾಗಿದ್ದಾರೆ (A3).

ನಿಯಮಗಳಿಗೆ ಅನುಗುಣವಾಗಿ 60 ದಿನಗಳ ಒಳಗೆ ತನಿಖಾ ಸಂಸ್ಥೆಯು ಅಂತಿಮ ವರದಿಯನ್ನು ಸಲ್ಲಿಸಬೇಕಿತ್ತು. ಆದರೆ ವರದಿ ಸಲ್ಲಿಸಲು ತನಿಖಾ ಸಂಸ್ಥೆಯು ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಮಾಜಿ ಜಿಲ್ಲಾಧಿಕಾರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಮೊದಲು ಮಂಜುನಾಥ್ ಅವರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ಹಾಗೂ ಹೈಕೋರ್ಟ್​ ತಿರಸ್ಕರಿಸಿತ್ತು.

ಮಹೇಶ್ ಮತ್ತು ಚೇತನ್ ಅವರನ್ನು ಅಂದಿನ ಜಿಲ್ಲಾಧಿಕಾರಿ ಮಂಜುನಾಥ್ ಅವರ ಸೂಚನೆ ಮೇರೆಗೆ ₹ 5 ಲಕ್ಷ ಲಂಚ ಪಡೆಯುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳ (Anti-Corruption Bureau – ACB) ಬಂಧಿಸಿತ್ತು. ಮಹೇಶ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ವೇಳೆ ಜಿಲ್ಲಾಧಿಕಾರಿ ಹೆಸರನ್ನು ಆರೋಪಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ಹೈಕೋರ್ಟ್​ ಎಸಿಬಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಈ ಬೆಳವಣಿಗೆಯ ನಂತರ ಮಂಜುನಾಥ್ ಅವರನ್ನು ರಾಜ್ಯ ಸರ್ಕಾರವು ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿತ್ತು. ಕೊನೆಗೆ ಅವರನ್ನು ಜುಲೈ 4ರಂದು ಬಂಧಿಸಲಾಗಿತ್ತು.

ಮಂಜುನಾಥ್‌ ವಿರುದ್ಧ ಭೂವ್ಯಾಜ್ಯ ಸಂಬಂಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಕೆಳ ಹಂತದ ಅಧಿಕಾರಿಗಳ ಮೂಲಕ ಲಂಚ ಪಡೆದಿರುವ ಪ್ರಕರಣದಲ್ಲಿ ಅವರು ಮೂರನೇ ಆರೋಪಿಯಾಗಿದ್ದರು. ಈ ಮೊದಲು ಆಗಸ್ಟ್​ 3ರಂದು ಮಂಜುನಾಥ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ