AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ನಿಂದ ಬಂದ ಎಂಬಿಬಿಎಸ್ ವಿದ್ಯಾರ್ಥಿಗಳ ಭವಿಷ್ಯವೇನು? ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯ ಏನು? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್​ಗೆ ಕಳಿಸಿದ್ದರು.

ಉಕ್ರೇನ್​ನಿಂದ ಬಂದ ಎಂಬಿಬಿಎಸ್ ವಿದ್ಯಾರ್ಥಿಗಳ ಭವಿಷ್ಯವೇನು? ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Mar 07, 2022 | 11:45 AM

Share

ಬೆಂಗಳೂರು: ಉಕ್ರೇನ್​ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿಗಳು (Students) ದೇಶಕ್ಕೆ ವಾಪಸಾಗುತ್ತಿದ್ದಾರೆ. ಯುದ್ಧದ ಹಿನ್ನೆಲೆ ವಿದ್ಯಾಭ್ಯಾಸ ಅರ್ಧಕ್ಕೆ ನಿಲ್ಲಿಸಿ ಬಂದಿರುವ ವಿದ್ಯಾರ್ಥಿಗಳ ಮುಂದಿನ ಭವಿಷ್ಯವೇನು? ಎಂಬ ಪ್ರಶ್ನೆ ಸದ್ಯ ಎಲ್ಲರನ್ನು ಕಾಡುತ್ತಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಕೂಡಾ ಟ್ವೀಟ್ ಮಾಡಿದ್ದು, ಮಕ್ಕಳ ಭವಿಷ್ಯದ ಬಗ್ಗೆ ಪ್ರಶ್ನಿಸಿದ್ದಾರೆ. ‘ಆಪರೇಷನ್ ಗಂಗಾ’ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್​ನಿಂದ ವಿದ್ಯಾರ್ಥಿಗಳನ್ನು ಏರ್ ಲಿಫ್ಟ್ ಮಾಡಿದೆ. ಆದರೆ ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ ಎಂದು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯ ಏನು? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್​ಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ, ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜು ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ ಅಂತ ಹೆಚ್ಡಿಕೆ ಒತ್ತಾಯಿಸಿದ್ದಾರೆ.

2,65,720 ಕೋಟಿ ರೂ.ಗಳಷ್ಟು ಬಜೆಟ್‌ ಗಾತ್ರದ ಕರ್ನಾಟಕಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರಕಾರವೇ ನೀಡಲಿ. ನೀಟ್‌ ಮೂಲಕ ಶೇ.50 ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎಂದು ಟ್ವೀಟ್​ನಲ್ಲಿ ಕೇಳಿದ್ದಾರೆ.

ಇದನ್ನೂ ಓದಿ

ಖಾರ್ಕೀವ್​, ಕೀವ್ ಸೇರಿ ನಾಲ್ಕು ಪ್ರದೇಶಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ; ಇತರ ದೇಶಗಳ ಪ್ರಜೆಗಳ ಸ್ಥಳಾಂತರಕ್ಕಾಗಿ ನಿರ್ಧಾರ

Russia-Ukraine Crisis: 12ನೇ ದಿನಕ್ಕೆ ಕಾಲಿಟ್ಟ ರಷ್ಯಾ-ಉಕ್ರೇನ್​ ಯುದ್ಧ; ಇಂದು 3ನೇ ಸುತ್ತಿನ ಮಾತುಕತೆ ಫಲಪ್ರದವಾಗಬಹುದೇ?

Published On - 11:33 am, Mon, 7 March 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ