AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾ ಅಕ್ರಮ; ಭೋವಿ ನಿಗಮದ ಮಾಜಿ ಎಂಡಿ, ಸಿಬ್ಬಂದಿ ಸೇರಿಕೊಂಡು 97 ಕೋಟಿ ರೂಪಾಯಿ ದುರ್ಬಳಕೆ

ಉದ್ಯೋಗ ಯೋಜನೆಯಡಿ ರಾಜ್ಯ ಸರ್ಕಾರ ನೀಡಿದ್ದ ₹ 97 ಕೋಟಿಗೂ ಅಧಿಕ ಹಣವನ್ನು 500 ಫಲಾನುಭವಿಗಳ ಹೆಸರು ಬಳಸಿ ಅವ್ಯವಹಾರ ನಡೆಸಲಾಗಿದೆ. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಮಾಜಿ ಎಂಡಿ, ಸಿಬ್ಬಂದಿ ಸೇರಿಕೊಂಡು 97 ಕೋಟಿ ರೂಪಾಯಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮಹಾ ಅಕ್ರಮ; ಭೋವಿ ನಿಗಮದ ಮಾಜಿ ಎಂಡಿ, ಸಿಬ್ಬಂದಿ ಸೇರಿಕೊಂಡು 97 ಕೋಟಿ ರೂಪಾಯಿ ದುರ್ಬಳಕೆ
ಪ್ರಾತಿನಿಧಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Nov 15, 2023 | 7:03 AM

ಬೆಂಗಳೂರು, ನ.15: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಕ್ಕೆ (ಕೆಬಿಡಿಸಿ) ಉದ್ಯೋಗ ಯೋಜನೆಯಡಿ ರಾಜ್ಯ ಸರ್ಕಾರ ನೀಡಿದ್ದ ₹ 97 ಕೋಟಿಗೂ ಅಧಿಕ ಹಣವನ್ನು 500 ಫಲಾನುಭವಿಗಳ ಹೆಸರು ಬಳಸಿ ಅವ್ಯವಹಾರ ನಡೆಸಲಾಗಿದೆ ಎಂದು ಅಪರಾಧ ತನಿಖಾ ಇಲಾಖೆ (ಸಿಐಡಿ) ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.

ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಆರ್.ಲೀಲಾವತಿ, ಪ್ರಧಾನ ವ್ಯವಸ್ಥಾಪಕ ಡಾ.ಬಿ.ಕೆ.ನಂಜಪ್ಪ, ಕಚೇರಿ ಅಧೀಕ್ಷಕ ಪಿ.ಡಿ.ಸುಬ್ಬಪ್ಪ, ಮತ್ತು ಬೆಂಗಳೂರಿನ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಇತರ ಸಿಬ್ಬಂದಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಿಐಡಿ ತಿಳಿಸಿದೆ.

ಆರೋಪಿಗಳು ಆರ್‌ಟಿಜಿಎಸ್ ಫಾರ್ಮ್‌ಗಳಲ್ಲಿ ಉದ್ಯೋಗ ಯೋಜನೆಯ ಫಲಾನುಭವಿಗಳ ಸಹಿ ತೆಗೆದುಕೊಂಡು ಅವರ ಬ್ಯಾಂಕ್ ಖಾತೆಗಳಿಗೆ ತಲಾ ರೂ.5 ಲಕ್ಷ/ರೂ.10 ಲಕ್ಷ ವರ್ಗಾಯಿಸಿದ್ದಾರೆ. ಜೊತೆಗೆ ಆರೋಪಿಗಳು ತಮ್ಮ ಒಡೆತನದ ಸೋಮನಾಥೇಶ್ವರ ಎಂಟರ್‌ಪ್ರೈಸಸ್, ಹರಿಣಿತಾ ಎಂಟರ್‌ಪ್ರೈಸಸ್, ಅಂಶಿಕಾ ಎಂಟರ್‌ಪ್ರೈಸಸ್ ಮತ್ತು ನ್ಯೂ ಡ್ರೀಮ್ಸ್ ಎಂಟರ್‌ಪ್ರೈಸಸ್‌ನಂತಹ ಕಂಪನಿಗಳಿಗೆ ಅಪಾರ ಪ್ರಮಾಣದ ಹಣವನ್ನು ವರ್ಗಾಯಿಸಿದ್ದಾರೆ.

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನಲ್ಲಿ (ಐಐಎಸ್‌ಸಿ) ಕೆಲಸ ಮಾಡುತ್ತಿರುವ ಆರ್ ಮಂಗಳಾ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗೆ ಪ್ರತಿಕ್ರಿಯೆಯಾಗಿ 51ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಯಶವಂತ್ ಕುಮಾರ್ ಅವರ ಮುಂದೆ ವರದಿ ಸಲ್ಲಿಸಲಾಯಿತು. ಈಕೆ ಪ್ರಕರಣದ ಪ್ರಮುಖ ಆರೋಪಿ ಲೀಲಾವತಿಯ ಸಹೋದರಿ.

ಇದನ್ನೂ ಓದಿ: ಐಎಂಎ ಕಂಪನಿಯಿಂದ 4 ಸಾವಿರ ಕೋಟಿ ರೂ. ವಂಚನೆ: ಕೊನೆಗೂ ಹಣ ಕಳೆದುಕೊಂಡ ಗ್ರಾಹಕರ ಖಾತೆಗೆ ಬಂತು ಹಣ

ಬೆಂಗಳೂರಿನ ಐಐಎಸ್ಸಿಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿರುವ ಮಂಗಳಾ ಅವರ ಖಾತೆಗೆ ಅನ್ಸಿಕಾ ಎಂಟರ್‌ಪ್ರೈಸಸ್, ಹರ್ನಿತಾ ಕ್ರಿಯೇಷನ್ಸ್, ನ್ಯೂ ಡ್ರೀಮ್ಸ್ ಎಂಟರ್‌ಪ್ರೈಸಸ್ ಮತ್ತು ಸೋಮನಾಥೇಶ್ವರ ಎಂಟರ್‌ಪ್ರೈಸಸ್‌ನಿಂದ 91 ಲಕ್ಷ ರೂ. ಹಣವನ್ನು ವರ್ಗಾಹಿಸಲಾಗಿದೆ.

ಮಂಗಳಾ ಅವರು KBDC ಯೊಂದಿಗೆ ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿಲ್ಲ ಮತ್ತು ಈ ಅಕ್ರಮ ವಹಿವಾಟುಗಳಲ್ಲಿ ಭಾಗಿಯಾಗಿಲ್ಲ ಎಂದು ವಾದಿಸಿದ್ದು ಸಿಐಡಿ ಸಲ್ಲಿಸಿದ ವರದಿಯನ್ನು ಪರಿಗಣಿಸಿದ ನ್ಯಾಯಾಲಯ ಮಂಗಳಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಕೊರೊನಾ ಸಾಲ

ತಿಮ್ಮಯ್ಯ ಮತ್ತು ಶಶಾಂಕ್ ವಿರುದ್ಧ ತಿಪ್ಪಣ್ಣ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಕಲಬುರಗಿ ಜಿಲ್ಲೆಯ ಕಾಳಗಿ ಪೊಲೀಸರು 2022 ರಲ್ಲಿ ಪ್ರಕರಣ ದಾಖಲಿಸಿದ್ದರು. ಫೆಬ್ರವರಿ 2022 ರಲ್ಲಿ, ತಿಮ್ಮಯ್ಯ ಅವರು ದೂರುದಾರರನ್ನು ಮತ್ತು ಇತರ 19 ಜನರನ್ನು ಭೇಟಿ ಮಾಡಿದರು ಮತ್ತು ಯಾದಗಿರಿಯಲ್ಲಿರುವ ಯೆಸ್ ಬ್ಯಾಂಕ್‌ನ ಶಾಖೆಯಿಂದ ತಲಾ 30,000 ರೂಪಾಯಿಗಳ ಕೊರೊನಾ ಸಾಲವನ್ನು ಪಡೆಯಲು ಸಹಾಯ ಮಾಡುವುದಾಗಿ ಭರವಸೆ ನೀಡಿದರು ಮತ್ತು ಅವರ ಆಧಾರ್ ಕಾರ್ಡ್‌ಗಳು, ಚುನಾವಣಾ ಐಡಿಗಳು, ಪ್ಯಾನ್ ಕಾರ್ಡ್‌ಗಳು ಮತ್ತು ಭಾವಚಿತ್ರಗಳನ್ನು ತೆಗೆದುಕೊಂಡರು.

ತಿಮ್ಮಯ್ಯ ಸಾಲದ ಪತ್ರಗಳು ಮತ್ತು ಖಾಲಿ ಕಾಗದಗಳ ಮೇಲೆ ಅವರ ಸಹಿ ಮತ್ತು ಹೆಬ್ಬೆರಳಿನ ಗುರುತುಗಳನ್ನು ಪಡೆದರು. ಸಾಲದ ಮೊತ್ತವನ್ನು ಪಡೆಯಲು ಹೊಸ ಸಿಮ್ ಕಾರ್ಡ್‌ಗಳನ್ನು ಖರೀದಿಸಬೇಕು ಎಂದು ಅವರು ಅವರಿಗೆ ತಿಳಿಸಿದರು. ಅವರು ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಅವರಿಗೆ ನೀಡಿದರು. ನಂತರ, ಯೆಸ್ ಬ್ಯಾಂಕ್‌ನಿಂದ ತಲಾ 10 ಲಕ್ಷ ರೂಪಾಯಿ ಸಾಲವನ್ನು ಮಂಜೂರು ಮಾಡಲಾಗಿದೆ ಎಂದು ಸಮುದಾಯದ ಮುಖಂಡರೊಬ್ಬರು ಮಾಹಿತಿ ನೀಡಿದರು.

ಬೆಂಗಳೂರಿನ ಕೆಬಿಡಿಸಿ ಕಚೇರಿಯನ್ನು ಸಂಪರ್ಕಿಸಿದಾಗ ಅವರ ಬ್ಯಾಂಕ್ ಖಾತೆಗೆ ಹಣ ಜಮೆಯಾಗಿದ್ದು, ನಂತರ ಸೋಮನಾಥೇಶ್ವರ ಎಂಟರ್‌ಪ್ರೈಸಸ್ ಖಾತೆಗೆ ಹಣ ವರ್ಗಾವಣೆಯಾಗಿರುವುದು ಕಂಡುಬಂದಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್
ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್