AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೇತರ ಸಿವಿಲ್ ಸರ್ವಿಸ್ ಅಧಿಕಾರಿಗಳಿಗೆ ಐಎಎಸ್​ ವೃಂದ ಪಡೆಯಲು ಪರೀಕ್ಷೆ ಕಡ್ಡಾಯ

ಬಡ್ತಿ ವೇಳೆ ವ್ಯಕ್ತಿಗತ ಶಿಫಾರಸು ತಡೆಗಟ್ಟಲು ಲಿಖಿತ ಪರೀಕ್ಷೆ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ರಾಜ್ಯೇತರ ಸಿವಿಲ್ ಸರ್ವಿಸ್ ಅಧಿಕಾರಿಗಳಿಗೆ ಐಎಎಸ್​ ವೃಂದ ಪಡೆಯಲು ಪರೀಕ್ಷೆ ಕಡ್ಡಾಯ
ವಿಧಾನಸೌಧ
TV9 Web
| Edited By: |

Updated on: Feb 10, 2022 | 10:44 PM

Share

ಬೆಂಗಳೂರು: ರಾಜ್ಯೇತರ ಸಿವಿಲ್ ಸರ್ವಿಸ್ ಅಧಿಕಾರಿಗಳನ್ನು ಐಎಎಸ್ ವೃಂದಕ್ಕೆ ಶಿಫಾರಸು ಮಾಡಲು ಇನ್ನು ಮುಂದೆ ಲಿಖಿತ ಪರೀಕ್ಷೆ ಕಡ್ಡಾಯ ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಲಿಖಿತ ಪರೀಕ್ಷೆಯು ಕೆಪಿಎಸ್‌ಸಿ ಮೂಲಕ ನಡೆಯಲಿದೆ. ಬಡ್ತಿ ವೇಳೆ ವ್ಯಕ್ತಿಗತ ಶಿಫಾರಸು ತಡೆಗಟ್ಟಲು ಲಿಖಿತ ಪರೀಕ್ಷೆ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ಗುಜರಾತ್, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಲಿಖಿತ ಪರೀಕ್ಷೆ ಜಾರಿಯಲ್ಲಿದೆ.

ಸರ್ವೇ ಶುಲ್ಕ ಪರಿಷ್ಕರಣೆ

ಸರ್ವೇ ಶುಲ್ಕವನ್ನು ಮತ್ತೊಮ್ಮೆ ಪರಿಷ್ಕರಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಸರ್ವೆ ಶುಲ್ಕ ಹೆಚ್ಚಿಸಿ ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಆದೇಶಿಸಿತ್ತು. ಇದೀಗ ಆದೇಶವನ್ನು ಮತ್ತೊಮ್ಮೆ ಪರಿಷ್ಕರಿಸಿದೆ. ಗ್ರಾಮೀಣ ಭಾಗದಲ್ಲಿ ಸರ್ವೇ ಮಾಡಲು ಈ ಮೊದಲು ಎಕರೆಗೆ 3500 ರೂಪಾಯಿಯಿಂದ 4000 ರೂಪಾಯಿ ಹಾಗೂ ನಗರ ಭಾಗಕ್ಕೆ 5 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿತ್ತು. ಇದೀಗ ಆದೇಶವನ್ನು ಪರಿಷ್ಕರಿಸಿರುವ ಸರ್ಕಾರವು ಗ್ರಾಮೀಣ ಭಾಗದಲ್ಲಿ ಸರ್ವೆಗೆ ಎಕರೆಗೆ 3500 ರೂಪಾಯಿ, 2 ಎಕರೆಗಿಂತ ಮೇಲ್ಪಟ್ಟಿದ್ದರೆ ಹೆಚ್ಚುವರಿಯಾಗಿ ಪ್ರತಿ ಎಕರೆಗೆ 400 ರೂಪಾಯಿ ನಿಗದಿಪಡಿಸಿದೆ. ನಗರ ಪ್ರದೇಶಗಳಲ್ಲಿ 2 ಎಕರೆವರೆಗೆ 2500 ರೂಪಾಯಿ ಇದ್ದು, ಅದಕ್ಕಿಂತ ಮೇಲ್ಪಟ್ಟಿದ್ದರೆ ಪ್ರತಿ ಎಕರೆಗೆ 1000 ರೂಪಾಯಿ ಶುಲ್ಕ ನಿಗದಿ ಪಡಿಸಲಾಗಿದೆ.

ಕೆಲ ವಿವಿಗಳಲ್ಲಿ ಆನ್​ಲೈನ್ ತರಗತಿ

ರಾಜ್ಯದಲ್ಲಿ ಕಾಲೇಜುಗಳನ್ನು ಮತ್ತೆ ಆರಂಭಿಸುವ ಕುರಿತು ಶೀಘ್ರ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕೆಲ ವಿವಿಗಳಲ್ಲಿ ಈಗಾಗಲೇ ಆನ್‌ಲೈನ್ ತರಗತಿಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿಯೇ ಶಾಲೆಗೆ ಬರಬೇಕು ಎಂದು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿದರು.

ಇದನ್ನೂ ಓದಿ: 19 ಮಂದಿ ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಬಸವರಾಜ ಬೊಮ್ಮಾಯಿ ಸರ್ಕಾರ

ಇದನ್ನೂ ಓದಿ: ಅಧಿಕಾರಿಗಳಲ್ಲಿ ಭಯ ಹುಟ್ಟಿಸಲಿದೆ ಐಎಎಸ್ ನಿಯೋಜನೆ ನಿಯಮಗಳ ಬದಲಾವಣೆ: ಪ್ರಧಾನಿ ಮೋದಿಗೆ ಪತ್ರ ಬರೆದ ಕೇರಳ ಸಿಎಂ ಪಿಣರಾಯಿ ವಿಜಯನ್

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು