AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬಕಾರಿ ಇಲಾಖೆಯ ಮತ್ತೊಂದು ಭ್ರಷ್ಟಾಚಾರ ಬಯಲು: ಲೋಕಾಯುಕ್ತಕ್ಕೆ ಸಲ್ಲಿಕೆಯಾಯ್ತು ದೂರು

ರಾಜ್ಯದಲ್ಲಿ ಅಬಕಾರಿ ಇಲಾಖೆಯ ಒಂದೊಂದೇ ಕರ್ಮಕಾಂಡಗಳು ಬಯಲಾಗುತ್ತಿದ್ದು, ಇಲಾಖೆಯ ಡೆಪ್ಯೂಟಿ ಕಮಿಷನರ್ ಹಣಕ್ಕಾಗಿ ಕಾನೂನನ್ನು ಗಾಳಿಗೆ ತೂರಿ ಅನಧಿಕೃತವಾಗಿ ಮನಸೋ ಇಚ್ಛೆ ಸಿಎಲ್-7 ಲೈಸೆನ್ಸ್ ನೀಡಿರುವುದು ಬಯಲಾಗಿದೆ. ಅಕ್ರಮವಾಗಿ ಸುಮಾರು 60 ರಷ್ಟು ಪರವಾನಗಿ ಕೊಟ್ಟಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆಲೋಕಾಯುಕ್ತಕ್ಕೆ ದೂರು ದಾಖಲಾಗಿದೆ.

ಅಬಕಾರಿ ಇಲಾಖೆಯ ಮತ್ತೊಂದು ಭ್ರಷ್ಟಾಚಾರ ಬಯಲು: ಲೋಕಾಯುಕ್ತಕ್ಕೆ ಸಲ್ಲಿಕೆಯಾಯ್ತು ದೂರು
ಅಬಕಾರಿ ಇಲಾಖೆಯ ಮತ್ತೊಂದು ಭ್ರಷ್ಟಾಚಾರ ಬಯಲುImage Credit source: tv9
ಕಿರಣ್​ ಸೂರ್ಯ
| Edited By: |

Updated on: Feb 05, 2026 | 8:06 AM

Share

ಬೆಂಗಳೂರು, ಫೆಬ್ರವರಿ 5: ಅಬಕಾರಿ ಇಲಾಖೆಯ (Excise Department) ಬಿಯುಡಿ-3 ವಿಭಾಗದ ಡೆಪ್ಯುಟಿ ಕಮಿಷನರ್ ಕೆಎಸ್ ಮುರುಳಿ ಮನಸೋ ಇಚ್ಚೆ ಸಿಎಲ್-7 ಪರವಾನಗಿ ನೀಡಿರುವ ಆರೋಪ ಕೇಳಿ ಬಂದಿದೆ. ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್​ಗೆ ನೀಡುವ ಲೈಸೆನ್ಸ್ ಸಿಎಲ್- 7. ನಿಯಮ ಪ್ರಕಾರ ಶಾಲಾ ಆವರಣದಲ್ಲಿ ಅಥವಾ ಶಾಲೆ ಎದುರಿಗೆ ಪರವಾನಗಿ ಕೊಡುವಂತಿಲ್ಲ. ಆದರೆ, ಶಾಲೆ ಎದುರು ಶಾಪ್ ತೆರೆಯಲು ಮುರುಳಿ ಸಿಎಲ್-7 ಲೈಸೆನ್ಸ್ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 30×40 ಜಾಗಕ್ಕೂ ಸಿಎಲ್- 7 ಲೈಸೆನ್ಸ್ ನೀಡಿದ್ದು, ಕಳೆದ ಎರಡು ವರ್ಷದಲ್ಲಿ ಬರೋಬ್ಬರಿ 60 ಸಿಎಲ್-7 ಪರವಾನಗಿ ನೀಡಿದ್ದಾರೆ‌. ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ (Lokayukta) ಈಗಾಗಲೇ ದೂರು ಸಲ್ಲಿಕೆಯಾಗಿದೆ.

ಇಡೀ ರಾಜ್ಯದಲ್ಲೇ 24 ತಿಂಗಳ ಅವಧಿಯಲ್ಲಿ ಅತಿಹೆಚ್ಚು ಸಿಎಲ್-7 ಲೈಸೆನ್ಸ್ ನೀಡಿರುವ ಡೆಪ್ಯುಟಿ ಕಮಿಷನರ್ ಎಂಬ ಆರೋಪವೂ ಮುರುಳಿ ಮೇಲಿದೆ. 60 ಸಿಎಲ್-7 ಗಳ ಪೈಕಿ, 3 ಸಿಎಲ್-7 ಗಳಿಗೆ ಲೈಸೆನ್ಸ್ ನೀಡಬಾರದು ಎಂಬ ದೂರುಗಳಿದ್ದರೂ ಪರಿಗಣಿಸಿಲ್ಲ. ಅಚ್ಚರಿಯೆಂದರೆ, ಈ ಹಿಂದೆ ಇದೆ ಮುರುಳಿ ಅವುಗಳನ್ನು ತಿರಸ್ಕರಿಸಿದ್ದರು ಎನ್ನಲಾಗಿದೆ.

ಇನ್ನು ಸಿಎಲ್- 7 ಲೈಸೆನ್ಸ್ ಪಡೆಯಲು ಮಾಲೀಕರು ಸರಿಯಾಗಿ ದಾಖಲೆಯನ್ನು ಕೂಡ ನೀಡಿಲ್ಲ. ಆದರೂ ಮುರಳಿ ಪರವಾನಗಿ ನೀಡಿದ್ದಾರೆ ಎಂಬ ಆರೋಪವಿದೆ. ಬೆಂಗಳೂರಿನಿಂದ ತುಮಕೂರಿಗೆ ಸದ್ಯದಲ್ಲೇ ಮುರುಳಿ ವರ್ಗಾವಣೆ ಆಗುವ ಸಾಧ್ಯತೆಯಿದ್ದು, ಎಲ್ಲಾ ಲೈಸೆಸ್​​ಗಳನ್ನು ನೀಡಯೇ ಹೋಗಲು ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿಗೂ ದೂರು ನೀಡಲಾಗಿದೆ ಎಂಬುದು ತಿಳಿದುಬಂದಿದೆ.

ಕಳೆದ ಡಿಸೆಂಬರ್ ವರೆಗೆ ಮಾತ್ರ 60 ಸಿಎಲ್-7 ಲೈಸೆನ್ಸ್ ನೀಡಿದ್ದು ಈ ವರ್ಷ ಜನವರಿಯಲ್ಲಿ 10 ಕ್ಕೂ ಹೆಚ್ಚು ಲೈಸೆನ್ಸ್ ನೀಡಿದ್ದಾರೆ ಎಂದು ದೂರುದಾರ ಬಿಎಸ್ ಗೌಡ ಆರೋಪ ಮಾಡಿದ್ದಾರೆ.

‘ಟಿವಿ9’ ಗ್ರೌಂಡ್ ರಿಪೋರ್ಟ್​​ನಲ್ಲೂ ಬಯಲಾಯ್ತು ಅಕ್ರಮ

ಡೆಪ್ಯುಟಿ ಕಮಿಷನರ್ ವಿರುದ್ಧ ಕೇಳಿ ಬಂದ ಆರೋಪದ ಬಗ್ಗೆ ‘ಟಿವಿ9’ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಈ ವೇಳೆ ಯಲಹಂಕ ವಿಧಾನಸಭಾ ಕ್ಷೇತ್ರದ ದೊಂಬರಹಳ್ಳಿಯಲ್ಲಿರುವ ಸರ್ಕಾರಿ ಶಾಲೆಯ 40 ರಿಂದ 50 ಮೀಟರ್ ದೂರದಲ್ಲಿ ಸಿಎಲ್-7 ಗೆ ಅನುಮತಿ ನೀಡಿದ್ದು ತಿಳಿದು ಬಂದಿದೆ. ನಿಯಮಗಳ ಪ್ರಕಾರ ಶಾಲಾ-ಕಾಲೇಜುಗಳ ಆವರಣದ 100 ಮೀಟರ್ ಒಳಗೆ ಮದ್ಯಮಾರಾಟ ಮಾಡಲು ಅವಕಾಶವಿಲ್ಲ. ಆದರೂ ಲೈಸೆನ್ಸ್ ನೀಡಲಾಗಿದೆ. ಈ ಸರ್ಕಾರಿ ಶಾಲೆಯಲ್ಲಿ ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಇದ್ದು, 70 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಲಂಚಕ್ಕೆ ಬೇಡಿಕೆಯಿಟ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಇಲಾಖಾ ತನಿಖೆಗೆ ಆದೇಶ: ಆರ್ ಬಿ ತಿಮ್ಮಾಪುರ, ಅಬಕಾರಿ ಸಚಿವ

ಒಟ್ಟಿನಲ್ಲಿ, ಹಣಕ್ಕಾಗಿ ಅಬಕಾರಿ ಇಲಾಖೆ ಈ ಡೆಪ್ಯುಟಿ ಕಮಿಷನರ್ ಲಂಗುಲಗಾಮಿಲ್ಲದೆ ಪರವಾನಗಿ ನೀಡಿದ್ದು, ಈ ಬಗ್ಗೆ ಸರಿಯಾಗಿ ತನಿಖೆಯಾಗಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?