AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS ​ನಿಂದ ಹೊರಟವರ ಪೈಕಿ ಹೊರಟ್ಟಿ 101ನೇಯವರು! ಆದರೂ ಪಕ್ಷ ಉಳಿದಿದೆ -ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ

Basavaraj Horatti: ಬಸವರಾಜ ಬೊಮ್ಮಾಯಿ, ಬಾಲಚಂದ್ರ ಜಾರಕಿಹೊಳಿ ಸೇರಿದಂತೆ 100ಕ್ಕೂ ಹೆಚ್ಚು ನಾಯಕರು ಜೆಡಿಎಸ್​ನಿಂದ ಹೊರಹೋಗಿದ್ದಾರೆ. ಬಸವರಾಜ ಹೊರಟ್ಟಿ 101ನೇಯವರು, ಆದರೂ ಪಕ್ಷ ಉಳಿದಿದೆ -ಮಾಜಿ ಮುಖ್ಯಮಂತ್ರಿ ಹೆಚ್.​ಡಿ ಕುಮಾರಸ್ವಾಮಿ ಪ್ರತಿಕ್ರಿಯೆ

JDS ​ನಿಂದ ಹೊರಟವರ ಪೈಕಿ ಹೊರಟ್ಟಿ 101ನೇಯವರು! ಆದರೂ ಪಕ್ಷ ಉಳಿದಿದೆ -ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ
JDS ​ನಿಂದ ಹೊರಟವರ ಪೈಕಿ ಹೊರಟ್ಟಿ 101ನೇಯವರು! ಆದರೂ ಪಕ್ಷ ಉಳಿದಿದೆ -ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ
TV9 Web
| Edited By: |

Updated on:Apr 04, 2022 | 1:44 PM

Share

ಬೆಂಗಳೂರು: ಏಳು ಬಾರಿ ಸತತವಾಗಿ ಮೇಲ್ಮನೆಗೆ ಆರಿಸಿಬಂದು ಹಿರಿಯ ಸದಸ್ಯರಾಗಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಮಾತೃ ಪಕ್ಷವಾದ ಜೆಡಿ ಎಸ್ ನಿಂದ ಒಂದು ಕಾಲು ಹೊರಗೆ ಇಟ್ಟಿದ್ದಾರೆ. ಈ ಬಾರಿ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ (Karnataka Legislative Council Elections) ಬಿಜೆಪಿ ಪಕ್ಷದಿಂದ ತಮ್ಮ ಅದೃಷ್ಟ ಪರೀಕ್ಷಿಸಲು ಸಜ್ಜಾಗಿದ್ದಾರೆ. ತಾವು ಬಿಜೆಪಿ ಸೇರುವುದಾಗಿ ಬಸವರಾಜ ಹೊರಟ್ಟಿ ಘೋಷಿಸಿಯಾಗಿದೆ. ಹೊರಟ್ಟಿ ಅವರ (JDS) ಈ ನಿರ್ಧಾರದ ವಿಚಾರವಾಗಿ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.​ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದು, ಮೊದಲಿಗೆ ಸಭಾಪತಿ ಹೊರಟ್ಟಿ ಹೇಳಿಕೆಯಿಂದ ನನಗೆ ಶಾಕ್​ ಆಗಲಿಲ್ಲ. ಹೊರಟ್ಟಿ ಹೋದರೆ ಯಾಕೆ ತಲೆಕೆಡಿಸಿಕೊಳ್ಳಬೇಕು? ಎಂದಿದ್ದಾರೆ (Legislative Council Chairman Basavaraj Horatti).

ಮುಂದಿನ ಚುನಾವಣೆಯಲ್ಲಿ ಬಿಜೆಪಿಯವರು ಖರ್ಚು ಮಾಡ್ತಾರೆ. ಅಷ್ಟೊಂದು ಖರ್ಚು ಮಾಡಲು ನನ್ನಿಂದ ಸಾಧ್ಯವಿಲ್ಲ ಅಂತಿದ್ದರು ಹೊರಟ್ಟಿ. ಅವರಿವರು ಕರೆಯುತ್ತಿದ್ದಾರೆ ಎಂದೂ ಕಳೆದ ವಾರವೇ ಹೇಳಿದ್ದರು. ನನಗಾಗಿ ನಿಮ್ಮ ಭವಿಷ್ಯ ಹಾಳುಮಾಡಿಕೊಳ್ಳಬೇಡಿ ಹೋಗಿ ಅಂದೆ ಎಂದು ಹೊರಟ್ಟಿ ಅವರಿಗೆ ತಿಳಿಸಿದ್ದಾಗಿ ಜೆಡಿಎಸ್ ನಾಯಕ ಹೆಚ್.​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ, ಬಾಲಚಂದ್ರ ಜಾರಕಿಹೊಳಿ ಸೇರಿದಂತೆ 100ಕ್ಕೂ ಹೆಚ್ಚು ನಾಯಕರು ಜೆಡಿಎಸ್​ನಿಂದ ಹೊರಹೋಗಿದ್ದಾರೆ. ಬಸವರಾಜ ಹೊರಟ್ಟಿ 101ನೇಯವರು, ಆದರೂ ಪಕ್ಷ ಉಳಿದಿದೆ. ಪಕ್ಷಕ್ಕೆ ಮತ್ತೊಬ್ಬ ಹೊರಟ್ಟಿ, ಮತ್ತೊಬ್ಬ ಕೋನರೆಡ್ಡಿ ಬರಬಹುದು. ಅವರಿದ್ದಾಗ ಏನು ಬಾಂಬೆ ಕರ್ನಾಟಕ ಉದ್ಧಾರ ಆಗಿತ್ತಾ? ಎಂದು ಪ್ರಶ್ನಿಸಿರುವ HDK ಅವರ ಭವಿಷ್ಯವನ್ನು ನಾನ್ಯಾಕೆ ಹಾಳುಮಾಡಲಿ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಅಷ್ಟಕ್ಕೂ ಅವರನ್ನು ಸಭಾಪತಿ ಮಾಡಿದ್ದು ಬಿಜೆಪಿಗೆ ಹೋಗಲಿಕ್ಕಾ? ಬಿಜೆಪಿಗೆ ಹೋಗ್ತೀವಿ ಅಂದ್ರೆ ಬೇಡ ಅಂತಾ ಗೋಗರೆಯೋಕೆ ಆಗುತ್ತಾ? ಎಂದು ಕುಮಾರಸ್ವಾಮಿ ಅವರು ಹೊರಟ್ಟಿ ನಡೆಯನ್ನು ಲೇವಡಿ ಮಾಡಿದರು.

ಜೆಡಿಎಸ್ ಗೆ ಅಸ್ಥಿರತೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ. ಆದರೆ ಅಸ್ಥಿರತೆ ಅವರಿಗೆ ಇರಬಹುದು. ಕೇಂದ್ರದಿಂದ ಮಂತ್ರಿಗಿರಿ ಕಳೆದುಕೊಂಡು ಬಂದಿದ್ದಾರಲ್ಲಾ, ಯಾಕೆ ತೆಗೆದರು? ಎಂದು ಹೆಚ್.​ಡಿ ಕುಮಾರಸ್ವಾಮಿ ತಿರುಗೇಟು ನೀಡಿದರು.

ಹನುಮನನ್ನು ನಾವೂ ಸ್ವಲ್ಪ ದಿನ ಗುತ್ತಿಗೆಗೆ ತಗೋತೀವಿ: ಕುಮಾರಸ್ವಾಮಿ ಹನುಮ ಜಯಂತಿ ಬಳಿಕ ನಾವೂ ಹೋರಾಟ ಮಾಡುತ್ತೇವೆ. ಹನುಮನನ್ನು ವಿಹಿಂಪ, ಬಜಗರಂಗದಳದವರಿಗೆ ಮಾತ್ರ ಗುತ್ತಿಗೆ ಕೊಟ್ಟಿದ್ದಾರಾ? ನಾವೂ ಸ್ವಲ್ಪ ದಿನ ಗುತ್ತಿಗೆ ತಗೋಬೇಕು ಅಂತಾ ಇದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.

2023 ರಲ್ಲಿ ರಾಜ್ಯದಲ್ಲಿ ಜನತಾ ದಳ ಸರ್ಕಾರ: 2023 ರಲ್ಲಿ ಜನತಾ ದಳ ಸರ್ಕಾರ ರಾಜ್ಯದಲ್ಲಿ ಬರಲಿದೆ. ಜಮೀರ್ ಅಹಮದ್ ಪಕ್ಷಕ್ಕೆ ಬರುವ ವಿಚಾರ ಸದ್ಯಕ್ಕೆ ನಮ್ಮ ಮುಂದೆ ಚರ್ಚೆ ಇಲ್ಲ. ಹಿಂದೂ ಸಮಾಜದ ಬಹಳ ಜನ ನನ್ನ ಸಂಪರ್ಕದಲ್ಲಿ ಇದ್ದಾರೆ. ಪಕ್ಷಕ್ಕೆ ಹಲವು ಜನ ಬರುವರು ಇದ್ದಾರೆ. ಬೇರೆ ನಾಯಕರನ್ನು ಸೃಷ್ಟಿ ಮಾಡುವ ತಾಕತ್ ಜೆಡಿಎಸ್ ಗೆ ಇದೆ ಎಂದು ಹೆಚ್.​ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಜಿಮ್​ನಲ್ಲಿ ಕುಸಿದುಬಿದ್ದು ಯುವತಿ ಸಾವು ಪ್ರಕರಣ; ಪೋಸ್ಟ್ ಮಾರ್ಟಮ್ ವರದಿಯಲ್ಲಿ ಸಾವಿನ ಕಾರಣ ಬಹಿರಂಗ

ಇದನ್ನೂ ಓದಿ: ಜೆಡಿಎಸ್ ಮಾಜಿ ಕಾರ್ಪೊರೇಟರ್ ಪತಿ ನಿಗೂಡವಾಗಿ ನಾಪತ್ತೆ; ಕಾರಿನ ಬಳಿ ಪತ್ತೆಯಾದ ರಕ್ತದ ಕಲೆ

Published On - 1:29 pm, Mon, 4 April 22

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ