AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವಾಲಯ ಸೇವೆಯ ಅಧಿಕಾರಿಗಳಿಗೆ ಜನವರಿ 30ರವೆರೆಗೆ ಶೇ. 50ರಷ್ಟು ಹಾಜರಾತಿ ಅವಕಾಶ ವಿಸ್ತರಣೆ

ಸಚಿವಾಲಯ ಸೇವೆಯ ಗ್ರೂಪ್ ಬಿ, ಸಿ, ಡಿ ವೃಂದದ ಅಧಿಕಾರಿ ಮತ್ತು ಸಿಬ್ಬಂದಿಗೆ ಜನವರಿ 30ರವರೆಗೆ ಶೇಕಡಾ 50ರಷ್ಟು ಹಾಜರಾತಿ ಅವಕಾಶ ವಿಸ್ತರಣೆ ಮಾಡಲಾಗಿದೆ.

ಸಚಿವಾಲಯ ಸೇವೆಯ ಅಧಿಕಾರಿಗಳಿಗೆ ಜನವರಿ 30ರವೆರೆಗೆ ಶೇ. 50ರಷ್ಟು ಹಾಜರಾತಿ ಅವಕಾಶ ವಿಸ್ತರಣೆ
ಕರ್ನಾಟಕ ಸರ್ಕಾರದ ಸಚಿವಾಲಯ, ವಿಧಾನ ಸೌಧ
TV9 Web
| Edited By: |

Updated on: Jan 18, 2022 | 6:21 PM

Share

ಬೆಂಗಳೂರು: ಸಚಿವಾಲಯ (Ministry) ಸೇವೆಯ ಗ್ರೂಪ್ ಬಿ, ಸಿ, ಡಿ ವೃಂದದ ಅಧಿಕಾರಿ ಮತ್ತು ಸಿಬ್ಬಂದಿಗೆ ಜನವರಿ 30ರವರೆಗೆ ಶೇಕಡಾ 50ರಷ್ಟು ಹಾಜರಾತಿ (Attendance) ಅವಕಾಶ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಕೂಡ ರಾಜ್ಯ ಸರ್ಕಾರ (Government) ಹೊಸ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿತ್ತು. ಅದರಂತೆ ಸಚಿವಾಲಯದ ಅಧಿಕಾರಿಗಳು ಮುಂಚಿತವಾಗಿ ನಿಗದಿಪಡಿಸಲಾಗಿರುವ ಭೇಟಿಗೆ ಆಗಮಿಸುವ ಇಲಾಖೆಯ ಸಿಬ್ಬಂದಿಗಳಿಗೆ ಎರಡು ಡೋಸ್​ ಲಸಿಕೆಯಾಗಿರಬೇಕು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿತ್ತು. ಇಂದು ಸಚಿವಾಲಯ ವೃಂದದ ಅಧಿಕಾರಿ ಮತ್ತು ಸಿಬ್ಬಂದಿಗೆ ಹಾಜರಾತಿ ವಿಸ್ತರಣೆಯ ಆದೇಶ ನೀಡಲಾಗಿದೆ.

ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನಿಸಿದ ಸರ್ಕಾರ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಅರ್ಜಿ ಆಹ್ವಾನಿಸಿದೆ. 2021-22ನೇ ಶೈಕ್ಷಣಿಕ ಸಾಲಿಗೆ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಮುಂದಾಗಿದ್ದು, ಅರ್ಹರು ಅರ್ಜಿಸಲ್ಲಿಸಲು ಜನವರಿ 31 ಕೊನೆಯ ದಿನಾಂಕವಾಗಿದೆ. ಸರ್ಕಾರಿ ಪ್ರಥಮ ದರ್ಜೆಯ ಕಾಲೇಜುಗಳಲ್ಲಿ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಮುಂದಾಗಿದೆ. ಈ ಕುರಿತು ಇಂದು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು:ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಳ

ಕರ್ನಾಟಕ ಸರ್ಕಾರವು ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇಡೀ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಿದ್ದು, ಯುಜಿಸಿ ನಿಯಮ ಅನುಸರಿಸಿ ಅರ್ಹತೆಯನ್ನು ನಿಗದಿಪಡಿಸಲಾಗಿದೆ. ಈವರೆಗೆ ₹ 13,000 ವೇತನ ಪಡೆಯುತ್ತಿದ್ದವರು ಮುಂದಿನ ದಿನಗಳಲ್ಲಿ ₹ 32,000 ಪಡೆಯಲಿದ್ದಾರೆ. ₹ 11,000 ವೇತನ ಪಡೆಯುತ್ತಿದ್ದವರು ₹ 28,000 ಪಡೆಯಲಿದ್ದಾರೆ. ಪ್ರತಿ ತಿಂಗಳ 10ನೇ ತಾರೀಖಿನೊಳಗೆ ವೇತನ ಪಾವತಿಗೆ ವ್ಯವಸ್ಥೆ ರೂಪಿಸಲಾಗುವುದು ಎಂದು ಸರ್ಕಾರವು ಭರವಸೆ ನೀಡಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕಳೆದ ಒಂದು ತಿಂಗಳಿನಿಂದ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದರು. ಹೋರಾಟದ ನಂತರ ಎಚ್ಚೆತ್ತ ಸರ್ಕಾರವು ಉಪನ್ಯಾಸಕರಿಗೆ ಹಲವು ಸೌಲಭ್ಯಗಳನ್ನು ಒದಗಿಸಲು ಮುಂದಾಗಿತ್ತು.

ಇದನ್ನೂ ಓದಿ:

Aparna Ramesh: ಅಪ್ಪ ನಿವೃತ್ತ ಐಆರ್​ಎಸ್ ಅಧಿಕಾರಿ, ​ತಾಯಿ ಇಂಗ್ಲೀಷ್​ ಅಧ್ಯಾಪಕಿ; ಪುತ್ರಿ 35ನೇ Rank ಪಡೆದು ಐಎಎಸ್ ಆದರು! ​

ಕೊವಿಡ್ ಪರಿಸ್ಥಿತಿಯ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದೇವೆ: ಆರೋಗ್ಯ ಸಚಿವಾಲಯ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು