AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್ ಬಾಗ್ ಮಾತ್ರವಲ್ಲ, ಸ್ಯಾಂಕಿ ಟ್ಯಾಂಕ್ ಕೆರೆಗೂ ಸುರಂಗ ರಸ್ತೆಯಿಂದ ಹಾನಿ ಎಂದ ತಜ್ಞರು

ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಸುರಂಗ ರಸ್ತೆ ಲಾಲ್ ಬಾಗ್ ಒಳಗೆ ಬರುವುದಕ್ಕೆ ಈಗಾಗಲೇ ದೊಡ್ಡ ಮಟ್ಟದಲ್ಲಿ ವಿರೋಧ ಹಾಗೂ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಟನಲ್ ರೋಡ್ ಎಕ್ಸಿಟ್ ರ್ಯಾಂಪ್ ಸ್ಯಾಂಕಿ ಕೆರೆಯ ಪಕ್ಕದಲ್ಲೇ ಹಾದು ಹೋಗಲಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಯೋಜನೆಯ ಕಾಮಗಾರಿಯಿಂದ ಕೆರೆಯ ಜಲಮೂಲಕ್ಕೆ ಹಾನಿ ಆಗಲಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

ಲಾಲ್ ಬಾಗ್ ಮಾತ್ರವಲ್ಲ, ಸ್ಯಾಂಕಿ ಟ್ಯಾಂಕ್ ಕೆರೆಗೂ ಸುರಂಗ ರಸ್ತೆಯಿಂದ ಹಾನಿ ಎಂದ ತಜ್ಞರು
ಸ್ಯಾಂಕಿ ಟ್ಯಾಂಕ್ ಕೆರೆ (ಸಂಗ್ರಹ ಚಿತ್ರ)
Kiran Surya
| Edited By: |

Updated on: Nov 04, 2025 | 8:05 AM

Share

ಬೆಂಗಳೂರು, ನವೆಂಬರ್ 4: ಬೆಂಗಳೂರು (Bengaluru) ಸುರಂಗ ರಸ್ತೆ (Tunnel Road) ಯೋಜನೆ ಲಾಲ್​ ಬಾಗ್​ ಅಡಿಯಲ್ಲಿ ಹಾದುಹೋಗುವ ಸಂಬಂಧ ವಿರೋಧ ವ್ಯಕ್ತವಾಗಿರುವುದರ ಮಧ್ಯೆ ಇದೀಗ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದವರಿಗೂ ಸಮಸ್ಯೆ ಎದುರಾಗಲಿದೆ ಎಂಬ ವಿಚಾರ ಬಹಿರಂಗವಾಗಿದೆ. ಮಲ್ಲೇಶ್ವರಂನ ಸ್ಯಾಂಕಿ ಕೆರೆ (Sankey Tank) ಕಡೆಯಲ್ಲಿ ಟನಲ್ ರೋಡ್ ಎಕ್ಸಿಟ್ ರ್ಯಾಂಪ್ ಪಥದ ಅಲೈನ್ಮೆಂಟ್ ಬದಲಾವಣೆ ಮಾಡಲಾಗುತ್ತಿದೆಯಂತೆ. ಆದರೆ ಡಿಪಿಆರ್​​ನಲ್ಲಿ ಸ್ಯಾಂಕಿ ಕೆರೆ ಪಕ್ಕದಲ್ಲೇ ಎಕ್ಸಿಟ್ ರ್ಯಾಂಪ್ ನಿರ್ಮಾಣ ಆಗುವ ಬಗ್ಗೆ ಮಾಹಿತಿಯೇ ಇಲ್ಲ ಎನ್ನಲಾಗಿದೆ. ಈಗ ಹೊಸದಾಗಿ ಸ್ಯಾಂಕಿ ಟ್ಯಾಂಕ್ ಪಕ್ಕದಲ್ಲೇ ಎಕ್ಸಿಟ್ ರ್ಯಾಂಪ್ ಮಾಡಲು ಸರ್ಕಾರ ಸಿದ್ದತೆ ಮಾಡಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಸಿ.ವಿ.ರಾಮನ್ ರಸ್ತೆಯಲ್ಲಿ ಎಂಟ್ರಿ ಮತ್ತು ಎಕ್ಸಿಟ್ ರ್ಯಾಂಪ್ ಯೋಜನೆ ಕೈಬಿಟ್ಟು, ಸ್ಯಾಂಕಿ ರಸ್ತೆಯಲ್ಲಿ ಹೆಚ್ಚುವರಿಯಾಗಿ ರ್ಯಾಂಪ್ 6ಎ ಸೇರಿಸಲು ತೀರ್ಮಾನಿಸಲಾಗಿದೆ. ರ್ಯಾಂಪ್ 6 ಸರಾಸರಿ 2,450 ಕಿ.ಮೀ ಉದ್ದ ಇರಲಿದೆ. ಇದರಿಂದ ಕೆರೆಯ ಪಕ್ಕದ ಬಂಡೆ ಕೆಳಗೆ ಟನಲ್ ಕೊರೆಯಬೇಕಿರುವುದರಿದ ಕೆರೆಯ ಜಲಮೂಲಕ್ಕೆ ಹಾನಿ ಆಗಬಹುದು, ಇದರಿಂದ ಕೆರೆ ಬತ್ತಿ ಹೋಗಬಹುದು ಎಂದು ಸಿಟಿಜನ್ಸ್ ಫಾರ್ ಸಿಟಿಜನ್ಸ್ ಸ್ಥಾಪಕ ರಾಜ್ ದುಗಾರ್ ಅಭಿಪ್ರಾಯಪಟ್ಟಿದ್ದಾರೆ.

ಗಾಲ್ಫ್ ಮೈದಾನದ ಕೆಳಭಾಗದಿಂದ ನಿರ್ಗಮನ ರ್ಯಾಂಪ್ ಆರಂಭವಾಗಿ, ಸ್ಯಾಂಕಿ ರಸ್ತೆಯಲ್ಲಿ ಕೆರೆಯ ದಡದಲ್ಲಿ ಮುಕ್ತಾಯವಾಗಲಿದೆ. ಸ್ಯಾಂಕಿ ರಸ್ತೆ ಪಕ್ಕದಲ್ಲಿ ಸುರಂಗ ರಸ್ತೆ ನಿರ್ಮಿಸಿದರೆ ಕೆರೆಯ ಜೀವವೈವಿಧ್ಯಕ್ಕೆ ಧಕ್ಕೆ ಉಂಟಾಗಲಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಐತಿಹಾಸಿಕ ಕಟ್ಟಡಗಳಿಗೂ ಧಕ್ಕೆ: ತಜ್ಞರ ಕಳವಳ

ಒಂದೊಂದು ರಾಂಪ್ಗೂ ಸಾಕಷ್ಟು ಜಾಗದ ಅಗತ್ಯವಿದೆ. ಸ್ಯಾಂಕಿ ಕೆರೆಯಲ್ಲಿ ರ್ಯಾಂಪ್ ನಿರ್ಮಾಣ ಮಾಡಿದ್ರೆ ಸಾಕಷ್ಟು ಹಾನಿ ಆಗುವ ಸಾಧ್ಯತೆ ಇದೆ. ಐಕಾನಿಕ್ ಕೆರೆಗೆ ಧಕ್ಕೆ ತರುವುದು ಸೂಕ್ತವಲ್ಲ. ಸ್ಯಾಂಕಿ ಕೆರೆಯ ಭಾಗದಲ್ಲಿ ರ್ಯಾಂಪ್ ಬಂದರೆ ಸುತ್ತಲಿನ ಪ್ರದೇಶಗಳಿಗೂ ಧಕ್ಕೆ ಉಂಟಾಗಲಿದ್ದು, ಗಂಧದ ಮರದ ಕೋಟೆವನ, ವುಡ್ ಇನ್ಸ್ಟಿಟ್ಯೂಟ್, ರಿಸರ್ಚ್ ಸೆಂಟರ್ ಇಂತಹ ಐತಿಹಾಸಿಕ ಕಟ್ಟಡಗಳಿಗೂ ಧಕ್ಕೆ ಉಂಟಾಗುತ್ತದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮಲ್ಲೇಶ್ವರಂ ನಿವಾಸಿ ಸುಬ್ರಹ್ಮಣ್ಯ, ಟನಲ್ ರೋಡ್ ಟ್ರಾಫಿಕ್ ಕಂಟ್ರೋಲ್ ಮಾಡುವ ದೃಷ್ಟಿಯಿಂದ ಒಳ್ಳೆಯದು. ಆದರೆ ಮರಗಳು, ಲಾಲ್ ಬಾಗ್, ಸ್ಯಾಂಕಿ ಕೆರೆಗಳಿಗೆ ಯಾವುದೇ ಹಾನಿ ಆಗದಂತೆ ಮಾಡುವುದಾದರೆ ಮಾಡಲಿ. ಇಲ್ಲವಾದರೆ ಬೇಡ ಎಂದಿದ್ದಾರೆ.

ಇದನ್ನೂ ಓದಿ: ಲಾಲ್​ಬಾಗ್ ಬಂಡೆಯಿಂದಲೇ ಬೆಂಗಳೂರು ರಕ್ಷಣೆ! ಸುರಂಗ ರಸ್ತೆ ನಿರ್ಮಾಣಕ್ಕೆ ಅಸಮಾಧಾನ, ತಜ್ಞರು ಹೇಳಿದ್ದೇನು ನೋಡಿ

ಒಟ್ಟಿನಲ್ಲಿ, ಸ್ಯಾಂಕಿ ಕೆರೆಯ ಬಳಿ ಟನಲ್ ರೋಡ್ ಎಕ್ಸಿಟ್ ರ್ಯಾಂಪ್ ನಿರ್ಮಿಸುವ ಬಗ್ಗೆ ಡಿಪಿಆರ್​ನಲ್ಲಿ ಮಾಹಿತಿಯೇ ನೀಡಿಲ್ಲ ಎನ್ನಲಾಗುತ್ತಿದೆ. ಕೆರೆಯ ಬಳಿ ಎಕ್ಸಿಟ್ ರ್ಯಾಂಪ್ ಬರಲಿದೆಯೇ? ಇಲ್ಲವೇ? ಎಂಬುದನ್ನು ಸರ್ಕಾರವೇ ಸ್ಪಷ್ಟಪಡಿಸಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್