AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಲಾಸಿಪಾಳ್ಯ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ: ತನಿಖೆಗೆ ಆರು ತಂಡಗಳ ರಚನೆ

ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಆರು ತಂಡಗಳನ್ನು ರಚಿಸಲಾಗಿದೆ ಎಂದು ಕಲಾಸಿಪಾಳ್ಯ ಪೊಲೀಸರು ತಿಳಿಸಿದ್ದಾರೆ. ಎಟಿಸಿ, ಇಂಟೆಲಿಜೆನ್ಸ್, ಸಿಸಿಬಿ ಸಹ ಮಾಹಿತಿ ಕಲೆಹಾಕುತ್ತಿದೆ. ಪದೇ ಪದೇ ಹುಸಿ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿರುವ ಸಂದರ್ಭದಲ್ಲೇ ಈ ವಿದ್ಯಮಾನ ನಡೆದಿದೆ.

ಬೆಂಗಳೂರು ಕಲಾಸಿಪಾಳ್ಯ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ: ತನಿಖೆಗೆ ಆರು ತಂಡಗಳ ರಚನೆ
ಬೆಂಗಳೂರು ಕಲಾಸಿಪಾಳ್ಯ ಬಸ್​ ನಿಲ್ದಾಣದಲ್ಲಿ ಪತ್ತೆಯಾಗಿರುವ ಸ್ಫೋಟಕಗಳು
Ganapathi Sharma
|

Updated on:Jul 24, 2025 | 11:34 AM

Share

ಬೆಂಗಳೂರು, ಜುಲೈ 24: ಬೆಂಗಳೂರಿನ (Bengaluru) ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ (Kalasipalya Bus stand)ಸ್ಫೋಟಕ ಪತ್ತೆ ವಿಚಾರವಾಗಿ ತನಿಖೆಗೆ ಕಲಾಸಿಪಾಳ್ಯ ಠಾಣೆ ಪೊಲೀಸರಿಂದ ಆರು ತಂಡಗಳ ರಚನೆ ಮಾಡಲಾಗಿದೆ. ಸಿಸಿಬಿ, ಇಂಟೆಲಿಜೆನ್ಸ್, ಎಟಿಸಿ ತಂಡದಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜಿಲೆಟಿನ್ ಕಡ್ಡಿ ಜೊತೆಗೆ ಡಿಟೋನೆಟರ್​​ಗಳು​ ಕೂಡ ಪತ್ತೆ ಆಗಿದ್ದವು. ಈ ಬಗ್ಗೆ ಕಲಾಸಿಪಾಳ್ಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಕಲಾಸಿಪಾಳ್ಯ ಬಸ್​ ನಿಲ್ದಾಣದ ಶೌಚಾಲಯದ ಸಮೀಪ ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಫೋಟಕ ಪತ್ತೆಯಾಗಿತ್ತು. ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದ್ದವು. ಆ ಸಂದರ್ಭಧಲ್ಲಿ ಒಂದು ಬ್ಯಾಗ್​​ನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು. ಜಿಲೆಟಿನ್ ಕಡ್ಡಿ ಜೊತೆಗೆ ಕೆಲವು ಡಿಟೋನೆಟರ್​ಗಳು​ ಕೂಡ ಪತ್ತೆಯಾಗಿದ್ದವು.

6 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ವ್ಯಕ್ತಿಯೊಬ್ಬ ಈ ಬ್ಯಾಗ್‌ನ ಜೊತೆ ಕುಳಿತಿರುವುದು ಕಂಡುಬಂದಿದ್ದು, ಬಂಡೆ ಒಡೆಯುವ ಕೆಲಸಗಾರರು ಬಿಟ್ಟುಹೋಗಿರುವ ಶಂಕೆ ಉಂಟಾಗಿದೆ. ಉದ್ದೇಶಪೂರ್ವಕವಾಗಿ ಬಿಟ್ಟು ಹೋಗಿದ್ದಾರೆಯೇ ಅಥವಾ ಮರೆತು ಹೋಗಿದ್ದಾರೆಯೇ ಎಂಬುದನ್ನನು ಪರಿಶೀಲಿಸಲಾಗುತ್ತಿದೆ ಎಂದು ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಮಾಹಿತಿ ನೀಡಿದ್ದರು.

ಸ್ಫೋಟಕಗಳು ಪತ್ತೆಯಾಗಿದ್ಹೇಗೆ?

ಬೆಳಗ್ಗೆ 10 ಗಂಟೆ ಸುಮಾರಿಗೆ ಓರ್ವ ವ್ಯಕ್ತಿ ಶೌಚಾಲಯಕ್ಕೆಂದು ಬಂದು ಕೈಯಲ್ಲಿದ್ದ ಚೀಲವನ್ನು ಶೌಚಾಲಯದ ಮುಂಭಾಗದಲ್ಲೇ ಇಟ್ಟು ಹೋಗಿದ್ದ. ಆದರೆ ಮಧ್ಯಾಹ್ನ 2 ಗಂಟೆವರೆಗೆ ಚೀಲ ಅಲ್ಲೇ ಇದ್ದು, ಯಾರೂ ಕೂಡ ಗಮನಿಸಿರಲಿಲ್ಲ. ಬಳಿಕ ಚೀಲ ಗಮನಿಸಿದ ಶೌಚಾಲಯದ ಸಿಬ್ಬಂದಿ ಬಸ್ ನಿಲ್ದಾಣದ ಸೆಕ್ಯೂರಿಟಿಗಳಿಗೆ ಮಾಹಿತಿ ನೀಡಿದ್ದು, ಸೆಕ್ಯೂರಿಟಿ ಸಿಬ್ಬಂದಿಗಳು ಪೊಲೀಸರಿಗೆ ಸಂದೇಶ ನೀಡಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಸ್ಫೋಟಕಗಳು ಪತ್ತೆಯಾಗಿವೆ.

ಇದನ್ನೂ ಓದಿ
Image
ಮಹದಾಯಿ ವಿಚಾರದಲ್ಲಿ ಮತ್ತೆ ಗೋವಾ ಕ್ಯಾತೆ: ಸಾವಂತ್ ಹೇಳಿಕೆಗೆ ಕರ್ನಾಟಕ ಕಿಡಿ
Image
ದೆಹಲಿ ಪ್ರವಾಸಕ್ಕೆ ಮುನ್ನಾ ದಿನ ರಹಸ್ಯವಾಗಿ ಹಾಸನಕ್ಕೆ ತೆರಳಿ ಡಿಕೆಶಿ ಪೂಜೆ!
Image
ಶಾಲಾ ಮಕ್ಕಳಿಗೆ ಫ್ಲೇವರ್ಡ್ ನಂದಿನಿ ಹಾಲು ವಿತರಣೆಗೆ ಬಮೂಲ್ ಪ್ರಸ್ತಾಪ
Image
ಬೆಂಗಳೂರಿನ ಕಲಾಸಿಪಾಳ್ಯ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ

ಇದನ್ನೂ ಓದಿ: ಬೆಂಗಳೂರಿನ ಕಲಾಸಿಪಾಳ್ಯ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ, ಸ್ಥಳಕ್ಕೆ ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡು

ಬೆಂಗಳೂರಿನ ಶಾಲೆಗಳಿಗೆ ಪದೇ ಪದೇ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿರುವ ಹೊತ್ತಿನಲ್ಲೇ ಬಸ್ ನಿಲ್ದಾಣದಲ್ಲಿ ಸ್ಫೋಟಗಳು ಪತ್ತೆಯಾಗಿದ್ದು, ಕಳವಳಕ್ಕೆ ಕಾರಣವಾಗಿದೆ. ಎರಡು ದಿನಗಳ ಹಿಂದಷ್ಟೇ ವರ್ತೂರಿನ ಕ್ರಿಸಲಿಸ್ ಹೈ ಶಾಲೆಗೆ ಬಾಂಬ್​ ಬೆದರಿಕೆ ಸಂದೇಶ ಬಂದಿತ್ತು. ಆರ್​​.ಆರ್​ ನಗರ, ಕೆಂಗೇರಿಯ ಶಾಲೆಗಳೂ ಸೇರಿದಂತೆ ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಜುಲೈ 18 ರಂದು ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಈ ಎಲ್ಲ ಬೆಳವಣಿಗೆಗಳು ನಗರದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9, ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 am, Thu, 24 July 25

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!