AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಮತ್ತು 10ನೇ ತರಗತಿ ಮಕ್ಕಳಿಗೂ ಮೊಟ್ಟೆ ವಿತರಣೆ ವಿಸ್ತರಣೆ; ಸಿಎಂ ಗೆ ಬಂತು ವಿದ್ಯಾರ್ಥಿನಿಯಿಂದ ಪತ್ರ

ಸರ್ಕಾರದ ಯೋಜನೆ ಬಗ್ಗೆ ವಿದ್ಯಾರ್ಥಿನಿಯಿಂದ ಬಂದ ಪತ್ರಕ್ಕೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದ್ದು, ‘ನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರಕಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ.

9 ಮತ್ತು 10ನೇ ತರಗತಿ ಮಕ್ಕಳಿಗೂ ಮೊಟ್ಟೆ ವಿತರಣೆ ವಿಸ್ತರಣೆ; ಸಿಎಂ ಗೆ ಬಂತು ವಿದ್ಯಾರ್ಥಿನಿಯಿಂದ ಪತ್ರ
ಸಿದ್ದರಾಮಯ್ಯ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Sep 08, 2023 | 8:29 PM

Share

ಬೆಂಗಳೂರು, ಸೆ.08: ಸರ್ಕಾರ 2021 ರಲ್ಲಿ ಕಲ್ಯಾಣ ಕರ್ನಾಟಕ (Kalyana Karnataka) ಜಿಲ್ಲೆಗಳಲ್ಲಿ ಒಂದನೇ ತರಗತಿಯಿಂದ ಎಂಟನೇ ತರಗತಿಯವರೆಗೆ ಮೊಟ್ಟೆ (Egg)ವಿತರಣೆಯನ್ನು ಮಾಡುತ್ತಿತ್ತು. ಬಳಿಕ ಸರ್ಕಾರ ಒಂದು ಸಮೀಕ್ಷೆಯನ್ನು ಮಾಡಿದ ಮೇಲೆ ಶೇಕಡಾ 70 ರಷ್ಟು ಮಕ್ಕಳು ಮೊಟ್ಟೆ ಬೇಕು ಎಂದು ತಿಳಿಸಿದರು. ಇದಾದ ಮೇಲೆ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರದ ಎರಡು ದಿನ ಮೊಟ್ಟೆ ವಿತರಣೆ ಮಾಡಲು ಸೂಚಿಸಲಾಯಿತು. ಇದಾದ ಬಳಿಕ ಪೋಷಕರು ಒಂಭತ್ತು ಮತ್ತು ಹತ್ತನೇ ತರಗತಿ ವಿದ್ಯಾರ್ಥಿಗಳಿಗೂ ಮೊಟ್ಟೆ ನೀಡುವಂತೆ ಮನವಿ ಮಾಡಲಾಗಿತ್ತು. ಅದರಂತೆ ಸರ್ಕಾರ ಒಂದರಿಂದ ಹತ್ತನೇ ತರಗತಿಯವರೆಗೂ ಮೊಟ್ಟೆ ವಿತರಣೆ ವಿಸ್ತರಿಸಿತು. ಇದೀಗ ಸರ್ಕಾರದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ವಿದ್ಯಾರ್ಥಿನಿಯೋರ್ವಳು ಸಿಎಂ ಗೆ ಅಭಿನಂದನೆ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ವಿದ್ಯಾರ್ಥಿನಿ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕುಂಕೂರು ಗ್ರಾಮದ ಸರ್ಕಾರಿ ಫ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಆಶಾ ನೆಹರು ಪಾಟೀಲ್​ ಅವರು ಸರ್ಕಾರದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ‘ನೀವು ಜಾರಿಗೆ ತಂದಂತಹ ಅನೇಕ ಯೋಜನೆಗಳು ರಾಜ್ಯದ ಅನೇಕ ಕುಟುಂಬಗಳಿಗೆ ವರದಾನವಾಗುತ್ತಿದೆ. ವಿಶೇಷವಾಗಿ ಕ್ಷೀರಭಾಗ್ಯ, ಶೋಭಾಗ್ಯ ಜೊತೆಗೆ ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸುವ ದೃಷ್ಟಿಯಿಂದ ಒಂದರಿಂದ ಹತ್ತನೆ ತರಗತಿಯವರೆಗೆ ಮೊಟ್ಟೆ ವಿತರಣೆ ಅತ್ಯುತ್ತಮ ಯೋಜನೆಯಾಗಿದೆ ಎಂದು ಸಿದ್ದರಾಮಯ್ಯನವರ ಯೋಜನೆಯನ್ನು ಶ್ಲಾಘೀಸಿದ್ದಾರೆ.

ಇದನ್ನೂ ಓದಿ:ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳೋದು ನಮಗೆ ಸಂಬಂಧಿಸದ ವಿಷಯ, ಜನ ನಮ್ಮ ಪರವಾಗಿದ್ದಾರೆ: ಸಿದ್ದರಾಮಯ್ಯ

ಇದಕ್ಕೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದ್ದು, ‘ನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರಕಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ. ನಮ್ಮ ಈ ವಿದ್ಯಾರ್ಥಿಸ್ನೇಹಿ ನಿರ್ಧಾರದ ಬಗ್ಗೆ ಆಶಾ ನೆಹರು ಪಾಟೀಲ್ ಎಂಬ ಪುಟ್ಟ ಬಾಲಕಿಯೊಬ್ಬಳು ನನಗೆ ಪತ್ರ ಬರೆದು ತನ್ನ ಸಂತಸ ಹಂಚಿಕೊಂಡಿದ್ದಾಳೆ.

ಅಷ್ಟೇ ಮಾತ್ರವಲ್ಲ, ಇಂತಹ ಕಾರ್ಯಕ್ರಮಗಳನ್ನು ನೀಡುತ್ತಿರುವ ತಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಅಕ್ಕರೆಯಿಂದ ಸಲಹೆ ನೀಡಿದ್ದಾಳೆ. ಪುಟ್ಟ ಬಾಲಕಿಯ ಪತ್ರವು ಈ ಯೋಜನೆಯನ್ನು ರೂಪಿಸಿ ಜಾರಿಗೊಳಿಸಿದ ನನ್ನ ಉದ್ದೇಶವನ್ನು ಸಾರ್ಥಕವಾಗಿಸಿತು. ಇಂಥ ಮುಗ್ಧ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಶಾಂತಿ, ಸೌಹಾರ್ದತೆಯ ಸಮೃದ್ಧ ಕರ್ನಾಟಕ ನಿರ್ಮಾಣದ ನನ್ನ ಸಂಕಲ್ಪಕ್ಕೆ ಈ ದಿನ ಇನ್ನಷ್ಟು ಬಲ ಬಂದಿದೆ ಎಂದು ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ