AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಕಾಡುತ್ತಿದೆ ಕಣ್ಣಿನ ಸಮಸ್ಯೆ; ಪರೀಕ್ಷೆ ಒತ್ತಡ, ನಿರಂತರ ಓದು ಕಾರಣ ಎಂದು ತಜ್ಞರು

ನಾರಾಯಣ ನೇತ್ರಾಲಯದವತಿಯಿಂದ ಪತ್ರಿಕಾಗೋಷ್ಠಿ ನಡೆಸಲಾಗಿದ್ದು ಕಣ್ಣಿನ ಚಿಕಿತ್ಸೆಗೆ ಬರುವ ಮಕ್ಕಳಲ್ಲಿ SSLC & PUC ಮಕ್ಕಳೇ ಹೆಚ್ಚು. ದಿನಕ್ಕೆ 8 ರಿಂದ 10 SSLC ಮತ್ತು PUC ಮಕ್ಕಳು ಕಣ್ಣಿನ ವಿವಿಧ ಚಿಕಿತ್ಸೆಗೆ ಬರ್ತಾರೆ ಎಂದು ವೈದ್ಯರು ಮಾಹಿತಿ ನೀಡಿದರು. ಪರೀಕ್ಷಾ ಸಮಯದಲ್ಲಿ ಮಕ್ಕಳು ಒತ್ತಡದಲ್ಲಿ ಇರುತ್ತಾರೆ. ಮಕ್ಕಳ ಕಲಿಕಾ ಒತ್ತಡದಿಂದ ಕಣ್ಣಿಗೆ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಕಾಡುತ್ತಿದೆ ಕಣ್ಣಿನ ಸಮಸ್ಯೆ; ಪರೀಕ್ಷೆ ಒತ್ತಡ, ನಿರಂತರ ಓದು ಕಾರಣ ಎಂದು ತಜ್ಞರು
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Feb 09, 2024 | 1:12 PM

Share

ಬೆಂಗಳೂರು, ಫೆ.09: ಸಾಲು ಸಾಲು ಪರೀಕ್ಷೆಗಳು (Exams) ಬರುವ ಹೊತ್ತಲ್ಲೇ ಮಕ್ಕಳಲ್ಲಿ ಕಣ್ಣಿನ ಸಮಸ್ಯೆ (Eye Issue) ಕಾಣಿಸಿಕೊಂಡಿದೆ. ಸಿಲಿಕಾನ್ ಸಿಟಿ ಬೆಂಗಳೂರಿನ ಮಕ್ಕಳಲ್ಲಿ ಇತ್ತೀಚೆಗೆ ಹೆಚ್ಚಾಗಿ ಕಣ್ಣಿನ ಸಮಸ್ಯೆಗಳು ಕಂಡು ಬರುತ್ತಿವೆ. ಇದರಿಂದ ಪೋಷಕರಲ್ಲಿ ಆತಂಕ ಉಂಟಾಗಿದೆ. ಪರೀಕ್ಷೆ ಸಮಯದಲ್ಲಿ ಮಕ್ಕಳು ಕಣ್ಣಿನ ಸಮಸ್ಯೆಗಳನ್ನು ಎದುರಿಸುತ್ತಿದ್ದು ಕಲಿಕೆ ಮೇಲೆ ಪ್ರಭಾವ ಬೀಳುತ್ತಿದೆ. ಈ ಹಿನ್ನಲೆ ಪರೀಕ್ಷೆಯ ಸಮಯದಲ್ಲಿ ಮಕ್ಕಳು ಎದುರಿಸುವ, ದೃಷ್ಟಿಗೆ ಸಂಬಂಧಿಸಿದ ಸವಾಲುಗಳ ಕುರಿತು ನಾರಾಯಣ ನೇತ್ರಾಲಯದವತಿಯಿಂದ (Narayana Nethralaya Eye Hospital) ಪತ್ರಿಕಾಗೋಷ್ಠಿ ನಡೆಸಲಾಯಿತು. ಪೋಷಕರಿಗೆ ಕೆಲವು ಮಾಹಿತಿಯನ್ನು ನೀಡಲಾಯಿತು.

ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ. ರೋಹಿತ್ ಶೆಟ್ಟಿ, ಡಾ. ನರೇನ್ ಶೆಟ್ಟಿ, ನೇತ್ರ ತಜ್ಞೆ ಮತ್ತು ಮೆಳ್ಳಗಣ್ಣಿನ ವಿಶೇಷ ತಜ್ಞೆ ಡಾ. ಜ್ಯೋತಿ, ಡಾ. ಸುಮಿತಾ ಮುತ್ತುರವರು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ, ಕಣ್ಣಿನ ಚಿಕಿತ್ಸೆಗೆ ಬರುವ ಮಕ್ಕಳಲ್ಲಿ SSLC & PUC ಮಕ್ಕಳೇ ಹೆಚ್ಚು. ದಿನಕ್ಕೆ 8 ರಿಂದ 10 SSLC ಮತ್ತು PUC ಮಕ್ಕಳು ಕಣ್ಣಿನ ವಿವಿಧ ಚಿಕಿತ್ಸೆಗೆ ಬರ್ತಾರೆ ಎಂದು ವೈದ್ಯರು ಮಾಹಿತಿ ನೀಡಿದರು.

ಇದನ್ನೂ ಓದಿ: ಗದಗ ಜೀಮ್ಸ್ ಆಸ್ಪತ್ರೆಯಲ್ಲಿ ಅರಳಿದ ಪ್ರತಿಭೆಗಳು, ಪೇಶೆಂಟ್ ಜಸ್ಟ್ ಮೋಯಾ.. ಮೋಯಾ: ವಿದ್ಯಾರ್ಥಿಗಳ ರೀಲ್ಸ್​​ ವೈರಲ್​

ಮಹಾಮಾರಿ ಕೊರೊನಾ ಬಳಿಕ ಮಕ್ಕಳಲ್ಲಿ ಕಣ್ಣಿನ ಸಮಸ್ಯೆಗಳು ಹೆಚ್ಚಾಗಿವೆ. ಪರೀಕ್ಷಾ ಸಮಯದಲ್ಲಿ ಕಣ್ಣಿನ ಸಮಸ್ಯೆ ಹೆಚ್ಚಾಗುತ್ತಿದೆ. ವರ್ಷದ ಇತರೆ ಸಮಯದಲ್ಲಿ ಕಾಣಿಸಿಕೊಳ್ಳುವ ಕಣ್ಣಿನ ಸಮಸ್ಯೆಗಳಿಗೂ ಪರೀಕ್ಷಾ ಸಮಯದಲ್ಲಿ ಕಂಡು ಬರುತ್ತಿರುವ ಸಮಸ್ಯೆಗೂ ವ್ಯತ್ಯಾಸ ಇದೆ. ಪರೀಕ್ಷಾ ಸಮಯದಲ್ಲಿ ಮಕ್ಕಳು ಒತ್ತಡದಲ್ಲಿ ಇರುತ್ತಾರೆ. ಮಕ್ಕಳ ಕಲಿಕಾ ಒತ್ತಡದಿಂದ ಕಣ್ಣಿಗೆ ಒತ್ತಡ ಹೆಚ್ಚಾಗುತ್ತಿದೆ. ಪರೀಕ್ಷಾ ಸಮಯದಲ್ಲಿನ ನಿರಂತರ ಓದು, ಕಲಿಕೆ ಕಣ್ಣಿಗೆ ಒತ್ತಡ ಹೆಚ್ಚಾಗುವಂತೆ ಮಾಡುತ್ತಿದೆ. ಪರೀಕ್ಷೆ ಒತ್ತಡ ಹಾಗೂ ಮಕ್ಕಳಿಗೆ ಪರೀಕ್ಷಾ ಡೆಡ್ ಲೈನ್ ಕಣ್ಣಿನ ಸಮಸ್ಯೆಗೆ ಕಾರಣವಾಗಿದೆ.

ಮಕ್ಕಳು ಬೌಧಿಕವಾಗಿ ಜಾಣರಾಗಿದ್ದರೂ ಕಣ್ಣಿನ ಸಮಸ್ಯೆಗಳು, ತೊಂದರೆಗಳು ಮಕ್ಕಳ ಕಲಿಕೆಯಲ್ಲಿ ಹಿಂದೆ ಬೀಳಲು ಕಾರಣವಾಗುತ್ತಿವೆ. ಕಣ್ಣಿನ ಸಮಸ್ಯೆಯಿಂದ ಮಕ್ಕಳು ಪರೀಕ್ಷೆ ಇದ್ದಾಗ ಸರಿಯಾಗಿ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿಲ್ಲ. ಪರೀಕ್ಷಾ ಸಮಯದಲ್ಲಿ ಕಣ್ಣಿನ ಮೇಲಿನ ಒತ್ತಡ ನಿಯಂತ್ರಿಸದೇ ಇದ್ದರೆ, ಲೈಫ್ ನಲ್ಲಿ ಮಕ್ಕಳಿಗೆ ಇದೇ ಮುಂದುವರೆಯಬಹುದಾಗಿದೆ. ಮಕ್ಕಳ ಭವಿಷ್ಯ ಕಲಿಕೆ ದೃಷ್ಠಿಯಿಂದ ಈ ಒತ್ತಡ ಕಂಡು ಬಂದಾಗ ಸಲಹೆ ಪಡೆಯಬೇಕಿದೆ ಎಂದು ನೇತ್ರ ತಜ್ಞ ರೋಹಿತ್ ಮಾಹಿತಿ ನೀಡಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್