AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್, ವಿಮಾನದ ಟಾಯ್ಲೆಟ್ ನಲ್ಲಿ ಸಿಕ್ಕ ಟಿಶ್ಯೂ ಪೇಪರ್ ಮೇಲೆ ಗೀಚಿದ ಬರಹದಿಂದ ಅವಾಂತರ!

ಜೈಪುರದಿಂದ ಬೆಂಗಳೂರಿಗೆ 175 ಪ್ರಯಾಣಿಕರನ್ನ ಹೊತ್ತು ತಂದಿದ್ದ ಇಂಡಿಗೋ ವಿಮಾನದ ಟಾಯ್ಲೆಟ್ ನ ಟಿಶ್ಯೂ ಪೇಪರ್ ಮೇಲೆ ಗೀಚಿದ ಅನಾಮದೇಯ ಬರಹವೊಂದು ಸಿಕ್ಕಿತ್ತು. ಅದರಲ್ಲಿ "ಲ್ಯಾಂಡ್ ನಾ ಕರ್ನಾ, ಇಸ್ ಫ್ಲೈಟ್ ಮೇ ಬಾಂಬ್ ಹೈ" ಎಂದು ಹಿಂದಿ ಭಾಷೆಯಲ್ಲಿ ಬರೆದಿದ್ದರು.

ಬೆಂಗಳೂರು: ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್, ವಿಮಾನದ ಟಾಯ್ಲೆಟ್ ನಲ್ಲಿ ಸಿಕ್ಕ ಟಿಶ್ಯೂ ಪೇಪರ್ ಮೇಲೆ ಗೀಚಿದ ಬರಹದಿಂದ ಅವಾಂತರ!
ಬೆಂಗಳೂರು ವಿಮಾನ ನಿಲ್ದಾಣImage Credit source: Indian Express
TV9 Web
| Updated By: ಆಯೇಷಾ ಬಾನು|

Updated on:Aug 08, 2022 | 10:08 PM

Share

ಬೆಂಗಳೂರು: ಕೆಂಪೇಗೌಡ ವಿಮಾನ(Kempegowda Airport) ನಿಲ್ದಾಣದಲ್ಲಿ ಲ್ಯಾಂಡ್ ಆದ ಇಂಡಿಗೋ ಫ್ಲೈಟ್( Indigo Flight) ನಲ್ಲಿ ಹುಸಿ ಬಾಂಬ್ ಇರುವುದಾಗಿ ಬೆದರಿಕೆ ಸಂದೇಶ ಸಿಕ್ಕಿದೆ. ನಿನ್ನೆ ರಾತ್ರಿ 9:30ಕ್ಕೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜೈಪುರದಿಂದ ಬೆಂಗಳೂರಿಗೆ 175 ಪ್ರಯಾಣಿಕರನ್ನ ಹೊತ್ತು ತಂದಿದ್ದ ಇಂಡಿಗೋ ವಿಮಾನದ ಟಾಯ್ಲೆಟ್ ನ ಟಿಶ್ಯೂ ಪೇಪರ್ ಮೇಲೆ ಗೀಚಿದ ಅನಾಮದೇಯ ಬರಹವೊಂದು ಸಿಕ್ಕಿತ್ತು. ಅದರಲ್ಲಿ “ಲ್ಯಾಂಡ್ ನಾ ಕರ್ನಾ, ಇಸ್ ಫ್ಲೈಟ್ ಮೇ ಬಾಂಬ್ ಹೈ” ಎಂದು ಹಿಂದಿ ಭಾಷೆಯಲ್ಲಿ ಬರೆದಿದ್ದರು. ಇದು ವಿಮಾನದ ಪೈಲಟ್ ಗಮನಕ್ಕೆ ಬಂದ ಕೂಡಲೇ ಕೆಐಎಎಲ್ಎ ಭದ್ರತಾ ಏಜೆನ್ಸಿ ಸಂಪರ್ಕಿಸಿ, ಅನುಮತಿ ಬಳಿಕ ಫ್ಲೈಟ್ ಲ್ಯಾಂಡ್ ಮಾಡಲಾಗಿದೆ. ಕೂಡಲೇ CISF ಮತ್ತು ವಾಯು ಸಂಚಾರ ನಿಯಂತ್ರಣ ಘಟಕ ಸಿಬ್ಬಂದಿ ಸಂಪರ್ಕಿಸಿ ವಿಷಯ ತಿಳಿಸಿದ್ದು ಪ್ರತ್ಯೇಕ ಸ್ಥಳಕ್ಕೆ ಫ್ಲೈಟ್ ಸ್ಥಳಾಂತರ ಮಾಡಿ ತೀವ್ರ ತಪಾಸಣೆ ನಡೆಸಲಾಗಿದೆ.

ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, CISF ನಿಂದ ತಪಾಸಣೆ ನಡೆಸಿ ಪ್ರತಿಯೊಬ್ಬ ಪ್ರಯಾಣಿಕರ ಕೈಬರಹ ಮಾದರಿ ಸಂಗ್ರಹಿಸಲಾಗಿದೆ. ಹುಸಿ ಬಾಂಬ್ ಕರೆ ಹಿನ್ನಲೆ 3 ಗಂಟೆ ತಡವಾಗಿ ವಿಮಾನ ಜೈಪುರಕ್ಕೆ ಪ್ರಯಾಣಿಕರನ್ನು ಹೊತ್ತೊಯ್ದಿದೆ. ಘಟನೆ ಸಂಬಂಧ ಕೆಐಎಬಿ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:04 pm, Mon, 8 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ