AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಷೇರು ವಿನಿಮಯ ಬೆಂಗಳೂರು ಕಚೇರಿಗೆ ಬಾಂಬ್​ ಬೆದರಿಕೆ ಕರೆ

ಬೆಂಗಳೂರಿನಲ್ಲಿ ಮೇಲಿಂದ ಮೇಲೆ ಹುಸಿ ಬಾಂಬ್​ ಬೆದರಿಕೆ ಕರೆಗಳು ಬರುತ್ತಿವೆ. ನಿನ್ನೆ (ಜ.05) ರಂದು ವಿಶ್ವೇಶ್ವರಯ್ಯ ಮುಸ್ಯಿಯಂಗೆ ಬಾಂಬ್ ಬೆದರಿಕೆ ಮೇಲ್​​ ಬಂದಿತ್ತು. ಇದಾದ ಬೆನ್ನಲ್ಲೇ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.

ರಾಷ್ಟ್ರೀಯ ಷೇರು ವಿನಿಮಯ ಬೆಂಗಳೂರು ಕಚೇರಿಗೆ ಬಾಂಬ್​ ಬೆದರಿಕೆ ಕರೆ
ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ
Jagadisha B
| Edited By: |

Updated on:Jan 06, 2024 | 11:08 AM

Share

ಬೆಂಗಳೂರು, ಜನವರಿ 06: ಬೆಂಗಳೂರಿನಲ್ಲಿ (Bengaluru) ಮೇಲಿಂದ ಮೇಲೆ ಹುಸಿ ಬಾಂಬ್​ ಬೆದರಿಕೆ ಕರೆಗಳು ಬರುತ್ತಿವೆ. ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮುಸ್ಯಿಯಂಗೆ ಬಾಂಬ್ ಬೆದರಿಕೆ ಮೇಲ್​​ ಬಂದಿತ್ತು. ಇದಾದ ಬೆನ್ನಲ್ಲೇ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ (National Stock Exchange of India) ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ (Bomb threat) ಬಂದಿದೆ. ಆರೋಪಿಗಳು ಜನವರಿ 3ರಂದು ಮುಂಬೈನ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ಕಚೇರಿಗೆ ಕರೆ ಮಾಡಿ, ಬೆಂಗಳೂರಿನ ಕಚೇರಿಯಲ್ಲಿ ಬಾಂಬ್​ ಇಡಲಾಗಿದೆ ಎಂದು ಹೇಳಿದ್ದಾರೆ.

ಕೂಡಲೇ ಮುಂಬೈನ ಎನ್​ಎಸ್​ಇ ಕಚೇರಿ ಅಧಿಕಾರಿಗಳು ಮಧ್ಯರಾತ್ರಿ ಒಂದು ಗಂಟೆಗೆ ಸುಮಾರಿಗೆ ವಿಧಾನಸೌಧ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಯಾವುದೇ ಸ್ಪೋಟಕ‌ವಸ್ತು ಪತ್ತೆಯಾಗಿಲ್ಲ. ಸದ್ಯ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶ್ವೇಶ್ವರಯ್ಯ ಮುಸ್ಯಿಯಂಗೆ ಬಾಂಬ್ ಬೆದರಿಕೆ

ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.

ಇದನ್ನೂ ಓದಿ: ಬೆಂಗಳೂರಿನ ಶಾಲೆಗಳಿಗೆ ಬಾಂಬ್​ ಬೆದರಿಕೆ ಮೇಲ್​​: ತನಿಖೆಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಮ್ಯೂಸಿಯಂ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಂದು ಪೊಲೀಸರು ಪರಿಶೀಲನೆ ನಡೆಸಿದ್ದರು. ಬಾಂಬ್​ ನಿಷ್ಕ್ರಿಯ ದಳ, ಶ್ವಾನ ದಳದಿಂದಲೂ ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ಬಳಿಕ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂಬುದು ಪತ್ತೆಯಾಗಿತ್ತು. ಇದೀಗ ಕಬ್ಬನ್​ ಪಾರ್ಕ್​ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲೆಗಳಿಗೆ ಬಾಂಬ್​ ಬೆದರಿಕೆ

ಕಳೆದ ವರ್ಷ ಡಿಸೆಂಬರ್​ನಲ್ಲಿ ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಬಂದಿತ್ತು. ಈ ಪ್ರಕರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಬಳಸಲಾದ ಇ-ಮೇಲ್​ ಐಡಿ ನಕಲು ಎಂಬುದು ಪತ್ತೆಯಾಗಿತ್ತು. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ಸೃಷ್ಟಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:50 am, Sat, 6 January 24

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ