AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ

ಇತ್ತೀಚಿಗೆ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಮತ್ತು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ ಇ-ಮೇಲ್​ ಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಪೊಲೀಸರು ಮತ್ತು ಬಾಂಬ್​ ಸ್ಕ್ವಾಡ್​ ಪರಿಶೀಲನೆ ನಡೆಸಿದರು.

ಬೆಂಗಳೂರು: ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ
ತಾಜ್ ವೆಸ್ಟ್ ಎಂಡ್ ಹೋಟೇಲ್
Shivaprasad B
| Edited By: |

Updated on:Sep 28, 2024 | 12:49 PM

Share

ಬೆಂಗಳೂರು, ಸೆಪ್ಟೆಂಬರ್​ 28: ಬೆಂಗಳೂರಿನ (Bengaluru) ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ (Taj West End Hotel) ​ಹೋಟೆಲ್​ಗೆ ಬಾಂಬ್ ಬೆದರಿಕೆ (Fake bomb threat) ಇ-ಮೇಲ್ ಬಂದಿದೆ. ಬಾಂಬ್​ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್​ ಮಾಡಿದ್ದಾರೆ. ಕೂಡಲೆ ಹೋಟೆಲ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್​​ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಸಿ ಬಾಂಬ್​ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಾಜ್​ ವೆಸ್ಟ್​ ಎಂಡ್​​ ಹೊಟೇಲನಲ್ಲಿ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೇಲ್​ನಲ್ಲಿ ರಾಜಕಾರಣಿಗಳು, ಕ್ರಿಕೆಟರ್​ಗಳು ಆಗಾಗ ವಾಸ್ತವ್ಯ ಹೂಡುತ್ತಾರೆ.

ಸೈನಿಕ ಶಾಲೆಗೆ ಬಾಂಬ್ ಬೆದರಿಕೆ

ಕಳೆದ ವಾರ ಸೆಪ್ಟೆಂಬರ್​ 18 ರಂದು ಅಶೋಕ್ ನಗರದಲ್ಲಿನ ಸೈನಿಕ ಶಾಲೆಗೂ ಕೂಡ ಬಾಂಬ್ ಬೆದರಿಕೆ ಇ-ಮೇಲ್​ ಬಂದಿತ್ತು. ಶಾಲೆಯಲ್ಲಿ ಬಾಂಬ್​ ಇಟ್ಟು ಸ್ಪೋಟಿಸುವುದಾಗಿ ಸಂದೇಶ ರವಾನಿಸಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ, ಯಾವುದೇ ಬಾಂಬ್ ಪತ್ತೆಯಾಗಿರಲಿಲ್ಲ. ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಬೆಂಗಳೂರು: ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್; ಸ್ಥಳಕ್ಕಾಗಮಿಸಿದ ಬಾಂಬ್​ ನಿಷ್ಕ್ರಿಯ ದಳ

ಇದೇನು ಮೊದಲಲ್ಲ. ಈ ಹಿಂದೆ ನಗರದ ಹಲವು ಶಾಲೆಗಳಿಗೆ ಬಾಂಬ್ ಇಟ್ಟಿರುವ ಬೆದರಿಕೆ ಇಮೇಲ್​ಗಳು ಬಂದಿರುವ ಪ್ರಕರಣ ಇವೆ. ಕೆಲವು ಬಾರಿ ಶಾಲೆಗಳು, ಹೋಟೆಲ್‌ಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಗಳು ಬರುತ್ತಿದ್ದು, ಪೊಲೀಸರು ಹೆಚ್ಚು ಅಲರ್ಟ್ ಆಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:22 pm, Sat, 28 September 24

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್