AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ

ಇತ್ತೀಚಿಗೆ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಮತ್ತು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ ಇ-ಮೇಲ್​ ಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಪೊಲೀಸರು ಮತ್ತು ಬಾಂಬ್​ ಸ್ಕ್ವಾಡ್​ ಪರಿಶೀಲನೆ ನಡೆಸಿದರು.

ಬೆಂಗಳೂರು: ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ
ತಾಜ್ ವೆಸ್ಟ್ ಎಂಡ್ ಹೋಟೇಲ್
Shivaprasad B
| Edited By: |

Updated on:Sep 28, 2024 | 12:49 PM

Share

ಬೆಂಗಳೂರು, ಸೆಪ್ಟೆಂಬರ್​ 28: ಬೆಂಗಳೂರಿನ (Bengaluru) ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ (Taj West End Hotel) ​ಹೋಟೆಲ್​ಗೆ ಬಾಂಬ್ ಬೆದರಿಕೆ (Fake bomb threat) ಇ-ಮೇಲ್ ಬಂದಿದೆ. ಬಾಂಬ್​ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್​ ಮಾಡಿದ್ದಾರೆ. ಕೂಡಲೆ ಹೋಟೆಲ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್​​ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಸಿ ಬಾಂಬ್​ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಾಜ್​ ವೆಸ್ಟ್​ ಎಂಡ್​​ ಹೊಟೇಲನಲ್ಲಿ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೇಲ್​ನಲ್ಲಿ ರಾಜಕಾರಣಿಗಳು, ಕ್ರಿಕೆಟರ್​ಗಳು ಆಗಾಗ ವಾಸ್ತವ್ಯ ಹೂಡುತ್ತಾರೆ.

ಸೈನಿಕ ಶಾಲೆಗೆ ಬಾಂಬ್ ಬೆದರಿಕೆ

ಕಳೆದ ವಾರ ಸೆಪ್ಟೆಂಬರ್​ 18 ರಂದು ಅಶೋಕ್ ನಗರದಲ್ಲಿನ ಸೈನಿಕ ಶಾಲೆಗೂ ಕೂಡ ಬಾಂಬ್ ಬೆದರಿಕೆ ಇ-ಮೇಲ್​ ಬಂದಿತ್ತು. ಶಾಲೆಯಲ್ಲಿ ಬಾಂಬ್​ ಇಟ್ಟು ಸ್ಪೋಟಿಸುವುದಾಗಿ ಸಂದೇಶ ರವಾನಿಸಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ, ಯಾವುದೇ ಬಾಂಬ್ ಪತ್ತೆಯಾಗಿರಲಿಲ್ಲ. ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಬೆಂಗಳೂರು: ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್; ಸ್ಥಳಕ್ಕಾಗಮಿಸಿದ ಬಾಂಬ್​ ನಿಷ್ಕ್ರಿಯ ದಳ

ಇದೇನು ಮೊದಲಲ್ಲ. ಈ ಹಿಂದೆ ನಗರದ ಹಲವು ಶಾಲೆಗಳಿಗೆ ಬಾಂಬ್ ಇಟ್ಟಿರುವ ಬೆದರಿಕೆ ಇಮೇಲ್​ಗಳು ಬಂದಿರುವ ಪ್ರಕರಣ ಇವೆ. ಕೆಲವು ಬಾರಿ ಶಾಲೆಗಳು, ಹೋಟೆಲ್‌ಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಗಳು ಬರುತ್ತಿದ್ದು, ಪೊಲೀಸರು ಹೆಚ್ಚು ಅಲರ್ಟ್ ಆಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:22 pm, Sat, 28 September 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್