AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ನಕಲಿ ಬ್ರ್ಯಾಂಡ್​ನ​​ ಶರ್ಟ್​ ಗೋದಾಮಿನ ಮೇಲೆ ದಾಳಿ​

Crime News: ನಾಯಂಡಹಳ್ಳಿಯಲ್ಲಿರುವ ಗೋದಾಮಿನ ಮೇಲೆ ದಾಳಿ ಮಾಡಲಾಗಿದೆ. ರಾಹುಲ್ ಅಂಚಲಿಯಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿಭೋರ್ ಸೇಥಿ ಎಂಬವರು ನೀಡಿದ ದೂರಿನ ಮೇರೆಗೆ ದಾಳಿ ಮಾಡಲಾಗಿದೆ.

Bengaluru: ನಕಲಿ ಬ್ರ್ಯಾಂಡ್​ನ​​ ಶರ್ಟ್​ ಗೋದಾಮಿನ ಮೇಲೆ ದಾಳಿ​
ಶರ್ಟ್​ ಗೋದಾಮಿನ ಮೇಲೆ ದಾಳಿ​
TV9 Web
| Edited By: |

Updated on: Oct 23, 2021 | 8:59 PM

Share

ಬೆಂಗಳೂರು: ನಕಲಿ ಬ್ರ್ಯಾಂಡ್​ನ​​ ಶರ್ಟ್​ ಗೋದಾಮಿನ ಮೇಲೆ ದಾಳಿ​ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಪಶ್ಚಿಮ ವಿಭಾಗದ ಪೊಲೀಸರಿಂದ ನಾಯಂಡಹಳ್ಳಿಯಲ್ಲಿರುವ ಗೋದಾಮಿನ ಮೇಲೆ ದಾಳಿ ಮಾಡಲಾಗಿದೆ. ರಾಹುಲ್ ಅಂಚಲಿಯಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿಭೋರ್ ಸೇಥಿ ಎಂಬವರು ನೀಡಿದ ದೂರಿನ ಮೇರೆಗೆ ದಾಳಿ ಮಾಡಲಾಗಿದೆ.

ಇಲ್ಲಿ 6000- 7000 ರೂಪಾಯಿ ಬೆಲೆಯ ಶರ್ಟ್‌ 350 ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು. 1,210 ನಕಲಿ ಬ್ರ್ಯಾಂಡ್​ನ​ ಶರ್ಟ್‌, 1060 ಲ್ಯಾಕೋಸ್ಟ್ ಟ್ಯಾಗ್‌, 4,250 ಲ್ಯಾಕೋಸ್ಟ್ ಲೇಬಲ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಸೆಕ್ಷನ್​​​​ 212/2021, ಯು/ಎಸ್ 51(ಎ), 63 ಹಕ್ಕುಸ್ವಾಮ್ಯ ಕಾಯ್ದೆ, 420, 511 IPC ಅಡಿ‌‌ ಕೇಸ್​​ ದಾಖಲು ಮಾಡಲಾಗಿದೆ. ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ರಾಂಡ್ ಹೆಸರು, ಲೋಗೊ, ಡಿಸೈನ್ ನ ಹಕ್ಕು ದುರುಪಯೋಗದ ಆರೋಪ ಕೇಳಿಬಂದಿದೆ.

ನೆಲಮಂಗಲ: ಮಕ್ಕಳನ್ನು ಬಳಸಿ ಚಿನ್ನಾಭರಣ ದೋಚುವ ಗ್ಯಾಂಗ್ ಬಗ್ಗೆ ದೂರು ಚಲಿಸುತ್ತಿದ್ದ ಬಸ್ಸಿನಲ್ಲಿ ಮಕ್ಕಳನ್ನು ಬಳಸಿ ಚಿನ್ನಾಭರಣಗಳನ್ನು ದೋಚುವ ಗ್ಯಾಂಗ್ ಪ್ರಕರಣಕ್ಕೆ ಸಂಬಂಧಿಸಿ ಬಾಗಲಗುಂಟೆ, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಮತ್ತೆರಡು ಪ್ರಕರಣ ದಾಖಲು ಮಾಡಲಾಗಿದೆ. ತುಮಕೂರಿನಿಂದ ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ಬರುತ್ತಿದ್ದ ರಂಗನಾಥ ಮತ್ತು ಅಶ್ವಿನಿ ದಂಪತಿಗಳಿಂದ ಬಾಗಲಗುಂಟೆ ಠಾಣೆಗೆ ದೂರು ನೀಡಲಾಗಿದೆ. ಯಲಹಂಕದಿಂದ ಜಾಲಹಳ್ಳಿ ಕ್ರಾಸ್ ಗೆ ಬರುತ್ತಿದ್ದ ಬಿಎಂಟಿಸಿ ಬಸ್ಸಿನಲ್ಲಿ ಶಿಕ್ಷಕಿ ಭಾರತಿ ಶರ್ಮಾ ಅವರಿಂದ ಸೋಲದೇವನಹಳ್ಳಿ ಠಾಣೆಗೆ ಮತ್ತೊಂದು ದೂರು ನೀಡಲಾಗಿದೆ.

ಅಶ್ವಿನಿ, ರಂಗನಾಥ ದಂಪತಿಗಳಿಗೆ ಸೇರಿದ ಬ್ಯಾಗ್ ನಲ್ಲಿ 3 ಲಕ್ಷ ಬೆಲೆಬಾಳುವ 70 ಗ್ರಾಂ ಚಿನ್ನಾಭರಣಗಳು, ಶಿಕ್ಷಕಿ ಭಾರತಿ ಶರ್ಮಾ ಅವರ 4 ಲಕ್ಷ ಬೆಲೆಬಾಳುವ 91 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿದೆ. 15 ದಿನದ ಹಿಂದೆಯಷ್ಟೇ ಯಲಹಂಕದಿಂದ ಬರುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಸಾವಿತ್ರಮ್ಮ ಬಳಿ ಒಂದುವರೆ ಲಕ್ಷ ಬೆಲೆಬಾಳುವ 35 ಗ್ರಾಂ ಚಿನ್ನ ಕಳವಾಗಿತ್ತು.

ಇದನ್ನೂ ಓದಿ: ವಿಜಯಪುರ: ಯುವಕನ ಕೊಲೆ; ಭೀಮಾತೀರದಲ್ಲಿ ಕೇಳಿಬಂತು ಮರ್ಯಾದೆ ಹತ್ಯೆ ಆರೋಪ

ಇದನ್ನೂ ಓದಿ: ಕೋಲಾರ: ಪತ್ನಿಯನ್ನು ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್