AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್‌ಪೋರ್ಟ್‌ನ ಆರಿಗಾ ಲ್ಯಾಬ್‌ನಲ್ಲಿ ಗೋಲ್ಮಾಲ್ ಆರೋಪ; ಜಿಲ್ಲಾ ಆರೋಗ್ಯಾಧಿಕಾರಿಗಳ ತಂಡದಿಂದ ಪರಿಶೀಲನೆ

ಸಂಪೂರ್ಣ ಪರಿಶೀಲನೆ ನಡೆಸಿ ಡಿಸಿಗೆ ಅಧಿಕಾರಿಗಳು ವರದಿ ನೀಡಲಿದ್ದಾರೆ, ನಿನ್ನೆ ಯುವತಿಯೋರ್ವಳಿಗೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಲ್ಯಾಬ್​ನಲ್ಲಿ ತಪ್ಪು ವರದಿ ನೀಡಿರುವ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿತ್ತು. ವರದಿಯಿಂದ ಎಚ್ಚೇತ್ತ ಅಧಿಕಾರಿಗಳಿಂದ ಇಂದು ಪರಿಶೀಲನೆ ಕಾರ್ಯ ನಡೆಯುತ್ತಿದೆ.

ಏರ್‌ಪೋರ್ಟ್‌ನ ಆರಿಗಾ ಲ್ಯಾಬ್‌ನಲ್ಲಿ ಗೋಲ್ಮಾಲ್ ಆರೋಪ; ಜಿಲ್ಲಾ ಆರೋಗ್ಯಾಧಿಕಾರಿಗಳ ತಂಡದಿಂದ ಪರಿಶೀಲನೆ
ಲ್ಯಾಬ್‌ನಲ್ಲಿ ಪರಿಶೀಲನೆ ಬಳಿಕ ಜಿಲ್ಲಾಧಿಕಾರಿಗೆ ವರದಿ ಸಲ್ಲಿಕೆ
TV9 Web
| Updated By: preethi shettigar|

Updated on:Jan 20, 2022 | 5:17 PM

Share

ಬೆಂಗಳೂರು: ವಿಮಾನ ನಿಲ್ದಾಣದ ಆರಿಗಾ ಲ್ಯಾಬ್​ನಲ್ಲಿ(Auriga Lab) ಕೊರೊನಾ ಟೆಸ್ಟಿಂಗ್ ಗೋಲ್ಮಾಲ್ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಪಟ್ಟಂತೆ ಟಿವಿ9 ವರದಿ ಪ್ರಕಟಿಸಿತ್ತು. ಬಳಿಕ ಎಚ್ಛೆತ್ತುಕೊಂಡ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ. ಅದರಂತೆ ಇಂದು ದೇವನಹಳ್ಳಿಯ ವಿಮಾನ ನಿಲ್ದಾಣದ ಆರಿಗಾ ಲ್ಯಾಬ್​ಗೆ  ಜಿಲ್ಲಾ ಆರೋಗ್ಯಾಧಿಕಾರಿಗಳ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದೆ. ಬೆಂಗಳೂರು ಗ್ರಾಮಾಂತರ ಡಿಹೆಚ್ಒ (DHO) ತಿಪ್ಪೇಸ್ವಾಮಿ ನೇತೃತ್ವದ ತಂಡ, ಲ್ಯಾಬ್​ನಲ್ಲಿ ಎರೆಡೆರಡು ರೀತಿಯ ರಿಪೋರ್ಟ್ (Airport) ಹೇಗೆ ಬಂತು ಎಂದು ತನಿಖೆ ನಡೆಸುತ್ತಿದೆ.

ಸಂಪೂರ್ಣ ಪರಿಶೀಲನೆ ನಡೆಸಿ ಡಿಸಿಗೆ ಅಧಿಕಾರಿಗಳು ವರದಿ ನೀಡಲಿದ್ದಾರೆ, ನಿನ್ನೆ ಯುವತಿಯೋರ್ವಳಿಗೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಲ್ಯಾಬ್​ನಲ್ಲಿ ತಪ್ಪು ವರದಿ ನೀಡಿರುವ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿತ್ತು. ವರದಿಯಿಂದ ಎಚ್ಚೇತ್ತ ಅಧಿಕಾರಿಗಳಿಂದ ಇಂದು ಪರಿಶೀಲನೆ ಕಾರ್ಯ ನಡೆಯುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಂದು 54 ವಿದ್ಯಾರ್ಥಿಗಳಿಗೆ ಕೊರೊನಾ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಂದು ಒಂದೆ ದಿನ 54 ವಿದ್ಯಾರ್ಥಿಗಳಿಗೆ ಕೊರೊನಾ ಪತ್ತೆಯಾಗಿದೆ. ಜತೆಗೆ ಇದೇ ಶಾಲೆಯ 14 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 14 ಶಾಲೆಗನ್ನು 4 ದಿನಗಳ ಕಾಲ ಸೀಲ್‌ಡೌನ್ ಮಾಡಲಾಗಿದೆ.

ಒಂದೆ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ಧೃಡವಾದರೆ ಶಾಲೆ ಸಿಲ್​ಡೌನ್​ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಇದುವರೆಗೂ 142 ಜನ ಶಾಲಾ‌ ವಿದ್ಯಾರ್ಥಿಗಳಿಗೆ ಕೊರೊನಾ ದೃಡವಾಗಿದೆ. ಜಿಲ್ಲೆಯಲ್ಲಿ ಇದುವರೆಗೂ 58 ಶಾಲಾ ಶಿಕ್ಷಕರಿಗೆ  ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಟಿವಿ9 ಡಿಜಿಟಲ್​ಗೆ ಚಿಕ್ಕಬಳ್ಳಾಪುರ ಡಿಡಿಪಿಐ ಜಯರಾಮರೆಡ್ಡಿ ಮಾಹಿತಿ ನೀಡಿದ್ದಾರೆ.

ಹಾಸನ‌: ಚನ್ನರಾಯಪಟ್ಟಣ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಹಾಸನ‌ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ, ಚನ್ನರಾಯಪಟ್ಟಣ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆಯಿಂದ ಜ.26ರವರೆಗೆ ರಜೆ ನೀಡಿ ಡಿಸಿ ಗಿರೀಶ್‌ ಆದೇಶ ನೀಡಿದ್ದಾರೆ. ಮಕ್ಕಳಿಗೆ ಸೋಂಕು ಹಿನ್ನೆಲೆ 1 ರಿಂದ 9ನೇ ತರಗತಿವರೆಗೆ ರಜೆ ನೀಡಲಾಗಿದೆ. ಹಾಸನ, ಆಲೂರು ತಾಲೂಕಿನ ಶಾಲೆಗಳಿಗೂ ರಜೆ ನೀಡಿದ್ದಾರೆ.

ಇದನ್ನೂ ಓದಿ: Deltacron ಏನಿದು ಡೆಲ್ಟಾಕ್ರೋನ್: ಕೊರೊನಾವೈರಸ್​​ನ ಹೊಸ ರೂಪಾಂತರಿ ಅಥವಾ ಲ್ಯಾಬ್​​ನಲ್ಲಾದ ಪ್ರಮಾದ?

ಯಾವುದೇ ಲ್ಯಾಬ್ ತಪ್ಪು ವರದಿ ನೀಡಿದ್ದರೆ ಲೈಸನ್ಸ್ ರದ್ದು ಮಾಡಲಾಗುತ್ತದೆ: ಆರೋಗ್ಯ ಸಚಿವ ಡಾ.ಸುಧಾಕರ್

Published On - 5:02 pm, Thu, 20 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ