AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದ ವೇಳೆ ಸಿಕ್ತು ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ಸುಳಿವು !

ನಕಲಿ ಆಧಾರ್​ ಕಾರ್ಡ್​, ಪ್ಯಾನ್​ ಕಾರ್ಡ್ ಸೇರಿದಂತೆ ಹಲವು ದಾಖಲೆಗಳನ್ನು​​ ಸೃಷ್ಟಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಷ್ಟಕ್ಕೂ ಈ ನಕಲಿ ಆಧಾರ್​ ಕಾರ್ಡ್​ ಜಾಲ ಪತ್ತೆಯಾಗಿದ್ದು ಹೇಗೆ? ಎಂಬ ಕುತೂಹಲಕಾರಿ ಸಂಗತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ.

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದ ವೇಳೆ ಸಿಕ್ತು ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ಸುಳಿವು !
ಸಿಸಿಬಿ
Jagadisha B
| Updated By: ವಿವೇಕ ಬಿರಾದಾರ|

Updated on: Oct 22, 2023 | 11:15 AM

Share

ಬೆಂಗಳೂರು ಅ.22: ನಕಲಿ ಆಧಾರ್​ ಕಾರ್ಡ್​, ಪ್ಯಾನ್​ ಕಾರ್ಡ್ (Pan Card) ಸೇರಿದಂತೆ ಹಲವು ದಾಖಲೆಗಳನ್ನು​​ ಸೃಷ್ಟಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಅಷ್ಟಕ್ಕೂ ಈ ನಕಲಿ ಆಧಾರ್​ ಕಾರ್ಡ್​ (Adhar Card) ಜಾಲ ಪತ್ತೆಯಾಗಿದ್ದು ಹೇಗೆ? ಎಂಬ ಕುತೂಹಲಕಾರಿ ಸಂಗತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ. ಸಿಸಿಬಿ ಪೊಲೀಸರು ವೇಶ್ಯಾವಟಿಕೆ ಅಡ್ಡೆ ಮೇಲೆ ದಾಳಿ‌ಮಾಡಿದ್ದ ವೇಳೆ, ಬಾಂಗ್ಲಾದೇಶ ಮೂಲದ ಯುವತಿಯರ ಬಳಿ ನಕಲಿ ಅಧಾರ್ ಕಾರ್ಡ್ ಪತ್ತೆಯಾಗಿತ್ತು.

ಇದನ್ನು ಆಧರಿಸಿ ಸಿಸಿಬಿ ಪೊಲೀಸರು ತನಿಖೆಗೆ ಇಳಿದಾಗ, ನಕಲಿ ಆಧಾರ್​ ಕಾರ್ಡ್​​ ಜಾಲ ಪತ್ತೆಯಾಗಿದೆ. ಈ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾ ಪ್ರಜೆಯಾ ಕಮಲ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಈತನಿಂದ ನಕಲಿ ಆಧಾರ್ ಕಾರ್ಡ್ ತಯಾರಿ ಮಾಡಿಕೊಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಭೈರತಿ ಸುರೇಶ್ ಆಪ್ತರಿಗೆ ನೋಟಿಸ್ ಕೊಟ್ಟು ಸುಮ್ಮನಾದ್ರಾ ಪೊಲೀಸ್?

ಇನ್ನೂ ಪ್ರಕರಣದ ತನಿಖೆ ನಡೆಸಿರುವ ಸಿಸಿಬಿ ಪೊಲೀಸರ ಅನುಮಾನವನ್ನು ಹುಟ್ಟು ಹಾಕಿದೆ. ನಕಲಿ ಅಧಾರ್ ಕಾರ್ಡ್ ಮಾಡಿಕೊಟ್ಟ ಆರೋಪಿಗಳು ಶಾಸಕ ಭೈರತಿ ಸುರೇಶ್​ ಮತ್ತು ಕೆಲ ಸಚಿವರ ಆಪ್ತರು ಎಂಬ ಕಾರಣಕ್ಕೆ ಪೊಲೀಸರು ದೇಶದ ಭದ್ರತೆಯನ್ನೆ ಮರೆತು ನಡೆದುಕೊಂಡರಾ? ಎಂಬ ಪ್ರಶ್ನೆ ಉದ್ಭವವಾಗಿದೆ.

ಆಧಾರ್ ಆ್ಯಕ್ಟ್ 2016ನ್ನು ಎಫ್​ಐಆರ್​ನಲ್ಲಿ ದಾಖಲಿಸದೆ ಕೇವಲ ಐಪಿಸಿ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಪ್ರಕರಣ ಸಮ್ಮರಿಯಲ್ಲಿ ಅಧಾರ್ ಕಾರ್ಡ್ ಕೂಡ ನಕಲಿ ಮಾಡಲಾಗುತ್ತಿತ್ತು ಎಂದು ಉಲ್ಲೇಖಿಸಲಾಗಿದೆ ಈ ಹಿನ್ನೆಲೆಯಲ್ಲಿ ಪೊಲೀಸರ ನಡೆ ಅನುಮಾನಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು