Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದ ವೇಳೆ ಸಿಕ್ತು ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ಸುಳಿವು !

ನಕಲಿ ಆಧಾರ್​ ಕಾರ್ಡ್​, ಪ್ಯಾನ್​ ಕಾರ್ಡ್ ಸೇರಿದಂತೆ ಹಲವು ದಾಖಲೆಗಳನ್ನು​​ ಸೃಷ್ಟಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಷ್ಟಕ್ಕೂ ಈ ನಕಲಿ ಆಧಾರ್​ ಕಾರ್ಡ್​ ಜಾಲ ಪತ್ತೆಯಾಗಿದ್ದು ಹೇಗೆ? ಎಂಬ ಕುತೂಹಲಕಾರಿ ಸಂಗತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ.

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದ ವೇಳೆ ಸಿಕ್ತು ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ಸುಳಿವು !
ಸಿಸಿಬಿ
Follow us
Jagadisha B
| Updated By: ವಿವೇಕ ಬಿರಾದಾರ

Updated on: Oct 22, 2023 | 11:15 AM

ಬೆಂಗಳೂರು ಅ.22: ನಕಲಿ ಆಧಾರ್​ ಕಾರ್ಡ್​, ಪ್ಯಾನ್​ ಕಾರ್ಡ್ (Pan Card) ಸೇರಿದಂತೆ ಹಲವು ದಾಖಲೆಗಳನ್ನು​​ ಸೃಷ್ಟಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಅಷ್ಟಕ್ಕೂ ಈ ನಕಲಿ ಆಧಾರ್​ ಕಾರ್ಡ್​ (Adhar Card) ಜಾಲ ಪತ್ತೆಯಾಗಿದ್ದು ಹೇಗೆ? ಎಂಬ ಕುತೂಹಲಕಾರಿ ಸಂಗತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ. ಸಿಸಿಬಿ ಪೊಲೀಸರು ವೇಶ್ಯಾವಟಿಕೆ ಅಡ್ಡೆ ಮೇಲೆ ದಾಳಿ‌ಮಾಡಿದ್ದ ವೇಳೆ, ಬಾಂಗ್ಲಾದೇಶ ಮೂಲದ ಯುವತಿಯರ ಬಳಿ ನಕಲಿ ಅಧಾರ್ ಕಾರ್ಡ್ ಪತ್ತೆಯಾಗಿತ್ತು.

ಇದನ್ನು ಆಧರಿಸಿ ಸಿಸಿಬಿ ಪೊಲೀಸರು ತನಿಖೆಗೆ ಇಳಿದಾಗ, ನಕಲಿ ಆಧಾರ್​ ಕಾರ್ಡ್​​ ಜಾಲ ಪತ್ತೆಯಾಗಿದೆ. ಈ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾ ಪ್ರಜೆಯಾ ಕಮಲ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಈತನಿಂದ ನಕಲಿ ಆಧಾರ್ ಕಾರ್ಡ್ ತಯಾರಿ ಮಾಡಿಕೊಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಭೈರತಿ ಸುರೇಶ್ ಆಪ್ತರಿಗೆ ನೋಟಿಸ್ ಕೊಟ್ಟು ಸುಮ್ಮನಾದ್ರಾ ಪೊಲೀಸ್?

ಇನ್ನೂ ಪ್ರಕರಣದ ತನಿಖೆ ನಡೆಸಿರುವ ಸಿಸಿಬಿ ಪೊಲೀಸರ ಅನುಮಾನವನ್ನು ಹುಟ್ಟು ಹಾಕಿದೆ. ನಕಲಿ ಅಧಾರ್ ಕಾರ್ಡ್ ಮಾಡಿಕೊಟ್ಟ ಆರೋಪಿಗಳು ಶಾಸಕ ಭೈರತಿ ಸುರೇಶ್​ ಮತ್ತು ಕೆಲ ಸಚಿವರ ಆಪ್ತರು ಎಂಬ ಕಾರಣಕ್ಕೆ ಪೊಲೀಸರು ದೇಶದ ಭದ್ರತೆಯನ್ನೆ ಮರೆತು ನಡೆದುಕೊಂಡರಾ? ಎಂಬ ಪ್ರಶ್ನೆ ಉದ್ಭವವಾಗಿದೆ.

ಆಧಾರ್ ಆ್ಯಕ್ಟ್ 2016ನ್ನು ಎಫ್​ಐಆರ್​ನಲ್ಲಿ ದಾಖಲಿಸದೆ ಕೇವಲ ಐಪಿಸಿ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಪ್ರಕರಣ ಸಮ್ಮರಿಯಲ್ಲಿ ಅಧಾರ್ ಕಾರ್ಡ್ ಕೂಡ ನಕಲಿ ಮಾಡಲಾಗುತ್ತಿತ್ತು ಎಂದು ಉಲ್ಲೇಖಿಸಲಾಗಿದೆ ಈ ಹಿನ್ನೆಲೆಯಲ್ಲಿ ಪೊಲೀಸರ ನಡೆ ಅನುಮಾನಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು