AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದ ವೇಳೆ ಸಿಕ್ತು ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ಸುಳಿವು !

ನಕಲಿ ಆಧಾರ್​ ಕಾರ್ಡ್​, ಪ್ಯಾನ್​ ಕಾರ್ಡ್ ಸೇರಿದಂತೆ ಹಲವು ದಾಖಲೆಗಳನ್ನು​​ ಸೃಷ್ಟಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಷ್ಟಕ್ಕೂ ಈ ನಕಲಿ ಆಧಾರ್​ ಕಾರ್ಡ್​ ಜಾಲ ಪತ್ತೆಯಾಗಿದ್ದು ಹೇಗೆ? ಎಂಬ ಕುತೂಹಲಕಾರಿ ಸಂಗತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ.

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದ ವೇಳೆ ಸಿಕ್ತು ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ಸುಳಿವು !
ಸಿಸಿಬಿ
Jagadisha B
| Edited By: ವಿವೇಕ ಬಿರಾದಾರ|

Updated on: Oct 22, 2023 | 11:15 AM

Share

ಬೆಂಗಳೂರು ಅ.22: ನಕಲಿ ಆಧಾರ್​ ಕಾರ್ಡ್​, ಪ್ಯಾನ್​ ಕಾರ್ಡ್ (Pan Card) ಸೇರಿದಂತೆ ಹಲವು ದಾಖಲೆಗಳನ್ನು​​ ಸೃಷ್ಟಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಅಷ್ಟಕ್ಕೂ ಈ ನಕಲಿ ಆಧಾರ್​ ಕಾರ್ಡ್​ (Adhar Card) ಜಾಲ ಪತ್ತೆಯಾಗಿದ್ದು ಹೇಗೆ? ಎಂಬ ಕುತೂಹಲಕಾರಿ ಸಂಗತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ. ಸಿಸಿಬಿ ಪೊಲೀಸರು ವೇಶ್ಯಾವಟಿಕೆ ಅಡ್ಡೆ ಮೇಲೆ ದಾಳಿ‌ಮಾಡಿದ್ದ ವೇಳೆ, ಬಾಂಗ್ಲಾದೇಶ ಮೂಲದ ಯುವತಿಯರ ಬಳಿ ನಕಲಿ ಅಧಾರ್ ಕಾರ್ಡ್ ಪತ್ತೆಯಾಗಿತ್ತು.

ಇದನ್ನು ಆಧರಿಸಿ ಸಿಸಿಬಿ ಪೊಲೀಸರು ತನಿಖೆಗೆ ಇಳಿದಾಗ, ನಕಲಿ ಆಧಾರ್​ ಕಾರ್ಡ್​​ ಜಾಲ ಪತ್ತೆಯಾಗಿದೆ. ಈ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾ ಪ್ರಜೆಯಾ ಕಮಲ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಈತನಿಂದ ನಕಲಿ ಆಧಾರ್ ಕಾರ್ಡ್ ತಯಾರಿ ಮಾಡಿಕೊಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಭೈರತಿ ಸುರೇಶ್ ಆಪ್ತರಿಗೆ ನೋಟಿಸ್ ಕೊಟ್ಟು ಸುಮ್ಮನಾದ್ರಾ ಪೊಲೀಸ್?

ಇನ್ನೂ ಪ್ರಕರಣದ ತನಿಖೆ ನಡೆಸಿರುವ ಸಿಸಿಬಿ ಪೊಲೀಸರ ಅನುಮಾನವನ್ನು ಹುಟ್ಟು ಹಾಕಿದೆ. ನಕಲಿ ಅಧಾರ್ ಕಾರ್ಡ್ ಮಾಡಿಕೊಟ್ಟ ಆರೋಪಿಗಳು ಶಾಸಕ ಭೈರತಿ ಸುರೇಶ್​ ಮತ್ತು ಕೆಲ ಸಚಿವರ ಆಪ್ತರು ಎಂಬ ಕಾರಣಕ್ಕೆ ಪೊಲೀಸರು ದೇಶದ ಭದ್ರತೆಯನ್ನೆ ಮರೆತು ನಡೆದುಕೊಂಡರಾ? ಎಂಬ ಪ್ರಶ್ನೆ ಉದ್ಭವವಾಗಿದೆ.

ಆಧಾರ್ ಆ್ಯಕ್ಟ್ 2016ನ್ನು ಎಫ್​ಐಆರ್​ನಲ್ಲಿ ದಾಖಲಿಸದೆ ಕೇವಲ ಐಪಿಸಿ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಪ್ರಕರಣ ಸಮ್ಮರಿಯಲ್ಲಿ ಅಧಾರ್ ಕಾರ್ಡ್ ಕೂಡ ನಕಲಿ ಮಾಡಲಾಗುತ್ತಿತ್ತು ಎಂದು ಉಲ್ಲೇಖಿಸಲಾಗಿದೆ ಈ ಹಿನ್ನೆಲೆಯಲ್ಲಿ ಪೊಲೀಸರ ನಡೆ ಅನುಮಾನಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ