AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಪತ್ರ; ಎಫ್​ಐಆರ್​ ದಾಖಲು

ಇತ್ತೀಚಿಗೆ ರಾಜ್ಯದಲ್ಲಿ ನಕಲಿ ಪತ್ರದ ವಿಚಾರ ಸಾಕಷ್ಟು ಚರ್ಚೆಯಾಗಿತ್ತಿದೆ. ಸಚಿವರ ವಿರುದ್ಧ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದಾದ ಬೆನ್ನಲ್ಲೇ ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಈ ಎರಡು ಪ್ರಕರಣಗಳು ತನಿಖೆಯಲ್ಲಿರುವಾಗಲೇ ಇದೀಗ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಸರಿನಲ್ಲಿ ಮಗದೊಂದು ನಕಲಿ ಆದೇಶ ಪತ್ರ ಬರೆದಯಲಾಗಿದೆ.

ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಪತ್ರ; ಎಫ್​ಐಆರ್​ ದಾಖಲು
ನಕಲಿ ಪತ್ರ
Jagadisha B
| Edited By: |

Updated on: Aug 16, 2023 | 11:38 AM

Share

ಬೆಂಗಳೂರು: ಇತ್ತೀಚಿಗೆ ರಾಜ್ಯದಲ್ಲಿ ನಕಲಿ ಪತ್ರದ (Fake Letter) ವಿಚಾರ ಸಾಕಷ್ಟು ಚರ್ಚೆಯಾಗಿತ್ತಿದೆ. ಸಚಿವರು ನಮಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಶೀಘ್ರದಲ್ಲೇ ಶಾಸಕಾಂಗ ಸಭೆ ಕರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಬಿಆರ್ ಪಾಟೀಲ್​ (BR Patil) ಅವರು ಪತ್ರ ಬರೆದಿದ್ದಾರೆ ಎಂದು ಸುದ್ದಿಯಾಗಿತ್ತು. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿತ್ತು. ಈ ಪತ್ರ ನನ್ನದಲ್ಲ ಇದು ನಕಲಿ ಪತ್ರ ಎಂದು ಬಿಆರ್​ ಪಾಟೀಲ್​​ ಹೇಳಿದ್ದರು. ಇದಾದ ಬೆನ್ನಲ್ಲೇ ಸಚಿವ ಚಲುವರಾಯಸ್ವಾಮಿ (Chaluvarayswamy) ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದ ವಿಷಯ ಮುನ್ನಲೆಗೆ ಬಂದಿತ್ತು. ಇದು ಕೂಡ ನಕಲಿ ಎಂದು ಆಢಳಿತಾರೂಡ ಪಕ್ಷದ ಶಾಸಕರು ಮತ್ತು ಸಚಿವರು ಹೇಳತೊಡಗಿದರು. ಈ ಎರಡು ಪ್ರಕರಣಗಳು ತನಿಖೆಯಲ್ಲಿರುವಾಗಲೇ ಇದೀಗ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಆದೇಶ ಪತ್ರ ಸೃಷ್ಠಿಯಾಗಿದೆ.

ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಮ್ಮ ಅವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: ನಕಲಿ ಪೆನ್ ಡ್ರೈವ್ ನಂತರ ನಕಲಿ ಪತ್ರದ ಮೊರೆ ಹೋದ ವಿಪಕ್ಷದ ಬೃಹಸ್ಪತಿಗಳು: ಕಾಂಗ್ರೆಸ್

ಆಯುಕ್ತರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಅಂತ ನಮೂದಿಸಿ, ಶಾಲೆಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಡುವ ಬಗ್ಗೆ ದೇಶಪಾಂಡೆ ಸರ್ವೀಸಸ್​ನಿಂದ ಖರೀದಿಸುವಂತೆ ರಾಜ್ಯದ ಎಲ್ಲ ಉಪನಿರ್ದೇಶಕರುಗಳಿಗೆ ಪ್ರಧಾನಕಾರ್ಯದರ್ಶಿ ಅವರ ಹೆಸರಿನಲ್ಲಿ ಮತ್ತು ನಕಲಿ ಸಹಿ ಹೊಂದಿದ ಆದೇಶ ಪತ್ರ ಬರೆಯಲಾಗಿದೆ. ಈ ನಕಲಿ ಆದೇಶವನ್ನು ದುರ್ಬಳಕೆ ಮಾಡಿಕೊಂಡು ವಂಚಿಸುವ ಸಾಧ್ಯತೆ ಹಿನ್ನಲೆಯಲ್ಲಿ ಈ ಪತ್ರವನ್ನು ಸೃಷ್ಟಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ