ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಪತ್ರ; ಎಫ್​ಐಆರ್​ ದಾಖಲು

| Updated By: ವಿವೇಕ ಬಿರಾದಾರ

Updated on: Aug 16, 2023 | 11:38 AM

ಇತ್ತೀಚಿಗೆ ರಾಜ್ಯದಲ್ಲಿ ನಕಲಿ ಪತ್ರದ ವಿಚಾರ ಸಾಕಷ್ಟು ಚರ್ಚೆಯಾಗಿತ್ತಿದೆ. ಸಚಿವರ ವಿರುದ್ಧ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದಾದ ಬೆನ್ನಲ್ಲೇ ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಈ ಎರಡು ಪ್ರಕರಣಗಳು ತನಿಖೆಯಲ್ಲಿರುವಾಗಲೇ ಇದೀಗ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಸರಿನಲ್ಲಿ ಮಗದೊಂದು ನಕಲಿ ಆದೇಶ ಪತ್ರ ಬರೆದಯಲಾಗಿದೆ.

ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಪತ್ರ; ಎಫ್​ಐಆರ್​ ದಾಖಲು
ನಕಲಿ ಪತ್ರ
Follow us on

ಬೆಂಗಳೂರು: ಇತ್ತೀಚಿಗೆ ರಾಜ್ಯದಲ್ಲಿ ನಕಲಿ ಪತ್ರದ (Fake Letter) ವಿಚಾರ ಸಾಕಷ್ಟು ಚರ್ಚೆಯಾಗಿತ್ತಿದೆ. ಸಚಿವರು ನಮಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಶೀಘ್ರದಲ್ಲೇ ಶಾಸಕಾಂಗ ಸಭೆ ಕರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಬಿಆರ್ ಪಾಟೀಲ್​ (BR Patil) ಅವರು ಪತ್ರ ಬರೆದಿದ್ದಾರೆ ಎಂದು ಸುದ್ದಿಯಾಗಿತ್ತು. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿತ್ತು. ಈ ಪತ್ರ ನನ್ನದಲ್ಲ ಇದು ನಕಲಿ ಪತ್ರ ಎಂದು ಬಿಆರ್​ ಪಾಟೀಲ್​​ ಹೇಳಿದ್ದರು. ಇದಾದ ಬೆನ್ನಲ್ಲೇ ಸಚಿವ ಚಲುವರಾಯಸ್ವಾಮಿ (Chaluvarayswamy) ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದ ವಿಷಯ ಮುನ್ನಲೆಗೆ ಬಂದಿತ್ತು. ಇದು ಕೂಡ ನಕಲಿ ಎಂದು ಆಢಳಿತಾರೂಡ ಪಕ್ಷದ ಶಾಸಕರು ಮತ್ತು ಸಚಿವರು ಹೇಳತೊಡಗಿದರು. ಈ ಎರಡು ಪ್ರಕರಣಗಳು ತನಿಖೆಯಲ್ಲಿರುವಾಗಲೇ ಇದೀಗ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಆದೇಶ ಪತ್ರ ಸೃಷ್ಠಿಯಾಗಿದೆ.

ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಮ್ಮ ಅವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: ನಕಲಿ ಪೆನ್ ಡ್ರೈವ್ ನಂತರ ನಕಲಿ ಪತ್ರದ ಮೊರೆ ಹೋದ ವಿಪಕ್ಷದ ಬೃಹಸ್ಪತಿಗಳು: ಕಾಂಗ್ರೆಸ್

ಆಯುಕ್ತರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಅಂತ ನಮೂದಿಸಿ, ಶಾಲೆಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಡುವ ಬಗ್ಗೆ ದೇಶಪಾಂಡೆ ಸರ್ವೀಸಸ್​ನಿಂದ ಖರೀದಿಸುವಂತೆ ರಾಜ್ಯದ ಎಲ್ಲ ಉಪನಿರ್ದೇಶಕರುಗಳಿಗೆ ಪ್ರಧಾನಕಾರ್ಯದರ್ಶಿ ಅವರ ಹೆಸರಿನಲ್ಲಿ ಮತ್ತು ನಕಲಿ ಸಹಿ ಹೊಂದಿದ ಆದೇಶ ಪತ್ರ ಬರೆಯಲಾಗಿದೆ. ಈ ನಕಲಿ ಆದೇಶವನ್ನು ದುರ್ಬಳಕೆ ಮಾಡಿಕೊಂಡು ವಂಚಿಸುವ ಸಾಧ್ಯತೆ ಹಿನ್ನಲೆಯಲ್ಲಿ ಈ ಪತ್ರವನ್ನು ಸೃಷ್ಟಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ