AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಪ್ರಕರಣ: ಕನ್ನಡ ಶಿಕ್ಷಕ ಜ್ಞಾನದೇವ್ ಜಾಧವ್​ ಬಂಧನ

ಸರ್ಕಾರದ ಮುಖ್ಯ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ನೇಮಕಾತಿ ಆದೇಶದ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಸಚಿವರ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಪ್ರಕರಣ: ಕನ್ನಡ ಶಿಕ್ಷಕ ಜ್ಞಾನದೇವ್ ಜಾಧವ್​ ಬಂಧನ
ಕನ್ನಡ ಶಿಕ್ಷಕ ಜ್ಞಾನದೇವ್ ಜಾಧವ್ ಬಂಧಿತ ಆರೋಪಿ
TV9 Web
| Edited By: |

Updated on:Aug 05, 2022 | 10:19 AM

Share

ಬೆಂಗಳೂರು: ಸಚಿವರ ಹೆಸರಿನಲ್ಲಿ ನಕಲಿ (Duplicate) ನೇಮಕಾತಿ ಅಧಿಸೂಚನೆ ಪ್ರಕರಣ ಸಂಬಂಧ ಸಂಜಯನಗರ ಪೊಲೀಸರು ಜ್ಞಾನದೇವ್ ಜಾಧವ್ ಎಂಬಾತನನ್ನು ಬಂಧನ ಮಾಡಿದ್ದಾರೆ. ಪಶುಸಂಗೋಪನೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ವಂಚನೆ ಮಾಡಲಾಗಿತ್ತು. ಸಚಿವರಿಗೆ ಕನ್ನಡ ಕಲಿಸುತ್ತಿದ್ದ ಆರೋಪಿ ಜ್ಞಾನದೇವ್ ಜಾಧವ್, 2019ರಲ್ಲಿ ಕನ್ನಡ ಶಿಕ್ಷಕರಾಗಿ ಪ್ರಭು ಚೌಹಾಣ್ ನೇಮಿಸಿಕೊಂಡಿದ್ದರು. ಸಚಿವರು ನನಗೆ ಆಪ್ತರೆಂದು ಹೇಳಿ ಹಲವು ಅಭ್ಯರ್ಥಿಗಳಿಗೆ ವಂಚನೆ ಮಾಡಿದ್ದು, ಇಲಾಖೆಯ FDA, SDA ಹುದ್ದೆಗಳಿಗೆ ನಕಲಿ ಆದೇಶ ಪ್ರತಿ ಸೃಷ್ಟಿ ಮಾಡಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಿದ 63 ಜನರನ್ನು ಆರೋಪಿ ಆಯ್ಕೆ ಮಾಡಿದ್ದ. 2 ರಿಂದ 4 ಲಕ್ಷ ರೂ.ಯಂತೆ 25 ಲಕ್ಷ ಹಣ ಪಡೆದು ವಂಚಿಸಿದ್ದ. ಸರ್ಕಾರಿ ನೇಮಕಾತಿ ಪ್ರಕ್ರಿಯೆ ಮಾದರಿಯಲ್ಲೇ ನಕಲಿ ನೇಮಕಾತಿ ಮಾಡಿದ್ದು, ಜುಲೈ 30ರೊಳಗೆ ಆಕ್ಷೇಪಗಳಿದ್ದರೆ ಅರ್ಜಿ ಸಲ್ಲಿಸುವಂತೆ ಇಲಾಖೆ ಹೆಸರಿನಲ್ಲಿ ಆದೇಶ ಹೊರಡಿಸಿದ್ದ. ಕೆಲ ಅಭ್ಯರ್ಥಿಗಳು ಇಲಾಖೆಗೆ ಸಂಪರ್ಕಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ; ಮಾರುಕಟ್ಟೆ, ಜನನಿಬಿಡ ಪ್ರದೇಶದಲ್ಲಿ ಪಟಾಕಿ ಮಾರಾಟ ನಿಷೇಧಿಸಿದ ಪೊಲೀಸ್​ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್

ಮಕ್ಕೆ ಕಂದಾಯ ಇಲಾಖೆಗೆ ಪ್ರಧಾನ ಕಾರ್ಯದರ್ಶಿ ಸೂಚನೆ

ಸರ್ಕಾರದ ಮುಖ್ಯ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ನೇಮಕಾತಿ ಆದೇಶದ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಅಕ್ಷಯ್ ಬಾಹುಬಲಿ ಲಕ್ಕಣ್ಣಗೌಡರು ಎಂಬುವವರನ್ನು ಉಪ ತಹಾಸಿಲ್ದಾರ್ ಹುದ್ದೆಗೆ ಆಯ್ಕೆ ಮಾಡಲಾಗಿದೆ ಎಂದು ನಕಲಿ ನೇಮಕಾತಿ ಆದೇಶ ಹೊರಡಿಸಲಾಗಿದೆ. ಉಪ ತಹಾಸಿಲ್ದಾರ್ ಹುದ್ದೆ ನೇಮಕಾತಿ ಮೂಲಕ ಭಡ್ತಿ ಮಾಡಲು ಸಾಧ್ಯವಿಲ್ಲ. ಇದು ಪೂರ್ಣ ಪ್ರಮಾಣದ ಮುಂಭಡ್ತಿ ಹುದ್ದೆ. ಆದರೆ ಪ್ರಧಾನ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಆದೇಶದ ಪ್ರತಿಯನ್ನ ಕಿಡಿಗೇಡಿಗಳು ಹೊರಡಿಸಿದ್ದು, ಮುಖ್ಯ ಕಾರ್ಯದರ್ಶಿ ಕಛೇರಿಯಿಂದಲೇ ನಕಲಿ ಆದೇಶ ಪ್ರತಿ ಹೊರಡಿಸಲಾಗಿದೆಯಾ ಎಂಬ ಅನುಮಾನ ಹುಟ್ಟಿಕೊಂಡಿದ್ದವು.

ಇದನ್ನೂ ಓದಿ: BBMP Reservation: ಬಿಬಿಎಂಪಿ ವಾರ್ಡ್​ವಾರು ಮೀಸಲಾತಿ ಪಟ್ಟಿ ಪ್ರಕಟ, ಕಾಂಗ್ರೆಸ್​ಗೆ ಆಘಾತ

ನಕಲಿ ಆದೇಶ ಹೊರಡಿಸಿದ್ದ ಹಿನ್ನಲೆ ಕಾನೂನು ಕ್ರಮ ಕೈಗೊಳ್ಳಲು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುದರ್ಶನ್​ರಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಅಕ್ಷಯ ಬಾಹುಬಲಿ ಲಕ್ಕನಗೌಡರ್ ಸೇರಿದಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಸರನ್ನ ದುರ್ಬಳಕೆ ಮಾಡಿಕೊಂಡವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

Published On - 10:18 am, Fri, 5 August 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು