Crime News: ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ, ಯುವತಿಯರನ್ನು ಚುಡಾಯಿಸುತ್ತಿದ್ದ ಪುಂಡನಿಗೆ ಧರ್ಮದೇಟು, ಕಾಲುವೆಗೆ ಬಿದ್ದು ಲಾರಿ ಚಾಲಕ ಸಾವು

ಬ್ಯಾಂಕ್ ಮಿತ್ರ ನೌಕರಿ ನೀಡುವ ಏಜೆನ್ಸಿಯಿಂದ ಮೋಸವಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಾಗರ ತಾಲ್ಲೂಕಿನ ಕೆಳದಿ ಗ್ರಾಮದಲ್ಲಿ ನಡೆದಿದೆ

Crime News: ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ, ಯುವತಿಯರನ್ನು ಚುಡಾಯಿಸುತ್ತಿದ್ದ ಪುಂಡನಿಗೆ ಧರ್ಮದೇಟು, ಕಾಲುವೆಗೆ ಬಿದ್ದು ಲಾರಿ ಚಾಲಕ ಸಾವು
ಸಾಂಕೇತಿಕ ಚಿತ್ರ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 11, 2022 | 5:25 PM

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲಮಂಗಲದಲ್ಲಿ ನಡೆದಿದೆ. ಗಂಗೊಂಡಹಳ್ಳಿ ನಿವಾಸಿ ಶಶಿಧರ್ (33) ಆತ್ಮಹತ್ಯೆ ಮಾಡಿಕೊಂಡವರು. ಮನೆ ಕಟ್ಟಲು ಶಶಿಧರ್ ಬ್ಯಾಂಕ್​​ನಿಂದ ಸಾಲ ಪಡೆದಿದ್ದರು. ಪ್ರತಿ ತಿಂಗಳು ಇಎಂಐ ಕಟ್ಟುವಂತೆ ಬ್ಯಾಂಕ್​​ ಸಿಬ್ಬಂದಿ ಒತ್ತಾಯಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಪತಿ-ಪತ್ನಿ ನಡುವೆ ನಿರಂತರ ಜಗಳಗಳು ಆಗುತ್ತಿದ್ದವು. ಪತ್ನಿ ಆಕೆಯ ತಾಯಿ ಮನೆಗೆ ಹೋಗಿದ್ದಾಗ ಶಶಿಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರ್ಕಾವತಿ ನದಿಯ ಕಾಲುವೆಗೆ ಬಿದ್ದು ಲಾರಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ದೊಂಬರಹಳ್ಳಿ ಬಳಿ ನಡೆದಿದೆ. ಹರಿಯಾಣ ಮೂಲದ ರಿಂಕು ಕುಮಾರ್ (38) ಮೃತ ಚಾಲಕ. ನದಿಯ ಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ತೇಲುತ್ತಿತ್ತು. ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೋಷಕರು ಮಾದನಾಯಕನಹಳ್ಳಿ ಠಾಣೆಗೆ ದೂರು ನೀಡಿದ್ದಾರೆ.

ಬ್ಯಾಂಕ್ ಮಿತ್ರ ಏಜೆನ್ಸಿಯಿಂದ ಮೋಸ

ಬ್ಯಾಂಕ್ ಮಿತ್ರ ನೌಕರಿ ನೀಡುವ ಏಜೆನ್ಸಿಯಿಂದ ಮೋಸವಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಾಗರ ತಾಲ್ಲೂಕಿನ ಕೆಳದಿ ಗ್ರಾಮದಲ್ಲಿ ನಡೆದಿದೆ. ನೂರಾರು ಜನರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ಬ್ಯಾಂಕ್ ಮಿತ್ರ ಏಜೆನ್ಸಿಯ ವಿರುದ್ಧ ಉದ್ಯೋಗ ವಂಚಿತರು ಪ್ರತಿಭಟನೆ ನಡೆಸಿದರು. ಈ ವೇಳೆ ವಿಷ ಸೇವಿಸಿ ಅಸ್ವಸ್ಥರಾದ ಶಕುಂತಲಾ ಅವರನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ರೋಡ್ ರೋಮಿಯೋಗೆ ಥಳಿತ

ಟೈಲರಿಂಗ್​ ಕ್ಲಾಸ್​ಗೆ ಹೋಗುತ್ತಿದ್ದ ಯುವತಿಯರನ್ನು ಚುಡಾಯಿಸುತ್ತಿದ್ದ ಯುವಕನನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರದಲ್ಲಿ ನಡೆದಿದೆ. ಸ್ಥಳೀಯರು ಯುವಕನನ್ನು ಥಳಿಸುವ ವಿಡಿಯೊ ಇದೀಗ ವೈರಲ್ ಆಗಿದೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವೈದ್ಯರ ವಿರುದ್ಧ ಪ್ರಕರಣ ದಾಖಲು

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಬಲ್ಲಾಹುಣಸಿ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಈ ಪ್ರಕರಣದ ಆರೋಪಿ ಡಾ.ರಾಜೇಶ್ ನಾಯ್ಕ್‌ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಇವರು ಹಗರಿಬೊಮ್ಮನಹಳ್ಳಿಯ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಅವರ ದೂರದ ಸಂಬಂಧಿ. ಅಪಘಾತದಲ್ಲಿ ಸ್ಥಳೀಯರಾದ ಶಂಕರಪ್ಪ ಗೊಲ್ಲರ್ (40) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಸವಾರ ಬಸವರಾಜಗೆ ಗಂಭೀರ ಗಾಯವಾಗಿತ್ತು. ವೈದ್ಯ ಡಾ.ರಾಜೇಶ್ ನಾಯ್ಕ್‌ ವಿರುದ್ಧ ಐಪಿಸಿ ಸೆಕ್ಷನ್​ 279, 337, 30 (ಎ) ಕಲಂ ಅಡಿ ಎಫ್​ಐಆರ್​ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಬಿದ್ದ ಕಾರು; ಅಪಘಾತದಲ್ಲಿ ವ್ಯಕ್ತಿ ದವಡೆ ಹೊಕ್ಕಿದ ಕಟ್ಟಿಗೆಯ ತುಂಡು

ಇದನ್ನೂ ಓದಿ: Crime News: ಪೊಲೀಸ್ ಇನ್ಸ್‌ಪೆಕ್ಟರ್ ಕಾರಿನ ಗಾಜನ್ನೇ ಒಡೆದು ಬೆಲೆ ಬಾಳುವ ವಸ್ತುಗಳನ್ನು ಕದ್ದ ಖದೀಮರು

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು