AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ 2 ರಸ್ತೆಗಳಿಗೆ ಪುನೀತ್ ರಾಜ​ಕುಮಾರ್, ವಿರಾಟ್ ಕೊಹ್ಲಿ ಹೆಸರು ನಾಮಕರಣಕ್ಕೆ ಮನವಿ

ಶಾಂತಿನಗರ ಬಸ್ ಟರ್ಮಿನಲ್ ಎದುರಿನ ಪುನೀತ್ ರಾಜಕುಮಾರ್ ಅವರ ಹೆಸರು ಹಾಗೂ ವಿಲ್ಸನ್​ ಗಾರ್ಡನ್​ನ 8ನೇ ಅಡ್ಡರಸ್ತೆಗೆ ವಿರಾಟ್ ಕೊಹ್ಲಿ ಹೆಸರು ಇಡಬೇಕು ಎಂದು ಬಿಬಿಎಂಪಿ ಆಡಳಿತಾಧಿಕಾರಿ, ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆಯಲಾಗಿದೆ.

ಬೆಂಗಳೂರಿನ 2 ರಸ್ತೆಗಳಿಗೆ ಪುನೀತ್ ರಾಜ​ಕುಮಾರ್, ವಿರಾಟ್ ಕೊಹ್ಲಿ ಹೆಸರು ನಾಮಕರಣಕ್ಕೆ ಮನವಿ
ವಿರಾಟ್ ಕೊಹ್ಲಿ (ಎಡಚಿತ್ರ) ಮತ್ತು ಪುನೀತ್ ರಾಜಕುಮಾರ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 30, 2022 | 10:23 AM

Share

ಬೆಂಗಳೂರು: ನಗರದ ಎರಡು ಪ್ರಮುಖ ರಸ್ತೆಗಳಿಗೆ ಯುವ ಸಾಧಕರ ಹೆಸರು ನಾಮಕರಣ ಮಾಡಬೇಕು ಎಂಬ ಮನವಿ ದಿನದಿಂದ ದಿನಕ್ಕೆ ಒತ್ತಾಯದ ರೂಪ ಪಡೆದುಕೊಳ್ಳುತ್ತಿದೆ. ಕನ್ನಡ ನಾಡು ಸದಾ ಸ್ಮರಿಸುವ ದಿವಂಗತ ನಟ ಪುನೀತ್ ರಾಜಕುಮಾರ್ (Puneeth Rajkumar) ಹಾಗೂ ವಿರಾಟ್ ಕೊಹ್ಲಿ (Virat Kohli) ಅವರ ಹೆಸರನ್ನು ಎರಡು ಪ್ರತ್ಯೇಕ ರಸ್ತೆಗಳಿಗೆ ಇರಿಸುವ ಮೂಲಕ ಅಭಿಮಾನಿಗಳ ಆಶಯ ಈಡೇರಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಶಾಂತಿನಗರ ಬಸ್ ಟರ್ಮಿನಲ್ ಎದುರಿನ ಪುನೀತ್ ರಾಜಕುಮಾರ್ ಅವರ ಹೆಸರು ಹಾಗೂ ವಿಲ್ಸನ್​ ಗಾರ್ಡನ್​ನ 8ನೇ ಅಡ್ಡರಸ್ತೆಗೆ ವಿರಾಟ್ ಕೊಹ್ಲಿ ಹೆಸರು ಇಡಬೇಕು ಎಂದು ಬಿಬಿಎಂಪಿ ಆಡಳಿತಾಧಿಕಾರಿ, ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತರು ಸರ್ಕಾರದ ಜೊತೆಗೆ ಚರ್ಚೆ ನಡೆಸಲು ಮುಂದಾಗಿದ್ದಾರೆ. ವಿಲ್ಸನ್ ಗಾರ್ಡನ್​ನ 8ನೇ ಅಡ್ಡರಸ್ತೆ ಹಾಗೂ ಶಾಂತಿನಗರ ಬಸ್ ನಿಲ್ದಾಣದ ಮುಂಭಾಗದ ರಸ್ತೆಗಳಿಗೆ ಈವರೆಗೆ ಯಾವುದೇ ಅಧಿಕೃತ ಹೆಸರು ಇರಿಸಿಲ್ಲ.

ಕರ್ನಾಟಕದ ವಿವಿಧೆಡೆ ಹಲವು ರಸ್ತೆಗಳಿಗೆ ಪುನೀತ್ ಹೆಸರು

ಕನ್ನಡಿಗರ ನೆಚ್ಚಿನ ನಟ ಪುನೀತ್ ರಾಜಕುಮಾರ್ ಹೆಸರನ್ನು ರಾಜ್ಯದ ವಿವಿಧ ಊರುಗಳಲ್ಲಿ ಈಗಾಗಲೇ ರಸ್ತೆ, ವೃತ್ತಗಳಿಗೆ ಇರಿಸಲಾಗಿದೆ. ಬೆಂಗಳೂರಿನ ಕೆಂಗೇರಿ ಸಮೀಪದ ಜ್ಞಾನಭಾರತಿ 1ನೇ ಬ್ಲಾಕ್​ನಲ್ಲಿ ಸಂತೋಷ್ ಎಂಬ ಅಭಿಮಾನಿ ‘ಅಪ್ಪು ಗುಡಿ’ ಹೆಸರಿನಲ್ಲಿ ಸ್ವಂತ ಖರ್ಚಿನಲ್ಲಿ ಸ್ಮಾರಕ ನಿರ್ಮಿಸಿ, ಪ್ರತಿಮೆ ಸ್ಥಾಪಿಸಿದ್ದಾರೆ. ಕೆಂಗೇರಿಯಿಂದ ಬನ್ನೇರುಘಟ್ಟ ಸಂಪರ್ಕಿಸುವ ಸಿಗ್ನಲ್ ಬಳಿಯ ರಸ್ತೆಗೆ ‘ಪುನೀತ್ ರಾಜಕುಮಾರ್ ರಸ್ತೆ’ ಎಂದು ಸರ್ಕಾರವೇ ಅಧಿಕೃತವಾಗಿ ನಾಮಕರಣ ಮಾಡಿದೆ.

ಬೆಳಗಾವಿ ತಾಲ್ಲೂಕಿನ ಮರಿಕಟ್ಟೆ ಗ್ರಾಮದಲ್ಲಿ ಪುನೀತ್ ರಾಜಕುಮಾರ್ ಹೆಸರನ್ನು ಗಲ್ಲಿಯೊಂದಕ್ಕೆ ಇರಿಸಿ ಅಭಿಮಾನ ಮೆರೆಯಲಾಗಿದೆ. ಕೊಪ್ಪಳದ ಸಂತೆ ಮೈದಾನಕ್ಕೆ ‘ಅಪ್ಪು ಸಂತೆ ಮಾರುಕಟ್ಟೆ’ ಎಂದು ನಾಮಕರಣ ಮಾಡಲಾಗಿದೆ. ಮಂಗಳೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಭದ್ರಾವತಿ ನಗರಗಳಲ್ಲಿಯೂ ಪುನೀತ್ ರಾಜಕುಮಾರ್ ಅವರಿಗೆ ಅಭಿಮಾನಿಗಳು ಗೌರವ ಸಲ್ಲಿಸಿವೆ.

Published On - 10:23 am, Sun, 30 October 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ