AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ 2 ರಸ್ತೆಗಳಿಗೆ ಪುನೀತ್ ರಾಜ​ಕುಮಾರ್, ವಿರಾಟ್ ಕೊಹ್ಲಿ ಹೆಸರು ನಾಮಕರಣಕ್ಕೆ ಮನವಿ

ಶಾಂತಿನಗರ ಬಸ್ ಟರ್ಮಿನಲ್ ಎದುರಿನ ಪುನೀತ್ ರಾಜಕುಮಾರ್ ಅವರ ಹೆಸರು ಹಾಗೂ ವಿಲ್ಸನ್​ ಗಾರ್ಡನ್​ನ 8ನೇ ಅಡ್ಡರಸ್ತೆಗೆ ವಿರಾಟ್ ಕೊಹ್ಲಿ ಹೆಸರು ಇಡಬೇಕು ಎಂದು ಬಿಬಿಎಂಪಿ ಆಡಳಿತಾಧಿಕಾರಿ, ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆಯಲಾಗಿದೆ.

ಬೆಂಗಳೂರಿನ 2 ರಸ್ತೆಗಳಿಗೆ ಪುನೀತ್ ರಾಜ​ಕುಮಾರ್, ವಿರಾಟ್ ಕೊಹ್ಲಿ ಹೆಸರು ನಾಮಕರಣಕ್ಕೆ ಮನವಿ
ವಿರಾಟ್ ಕೊಹ್ಲಿ (ಎಡಚಿತ್ರ) ಮತ್ತು ಪುನೀತ್ ರಾಜಕುಮಾರ್ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 30, 2022 | 10:23 AM

Share

ಬೆಂಗಳೂರು: ನಗರದ ಎರಡು ಪ್ರಮುಖ ರಸ್ತೆಗಳಿಗೆ ಯುವ ಸಾಧಕರ ಹೆಸರು ನಾಮಕರಣ ಮಾಡಬೇಕು ಎಂಬ ಮನವಿ ದಿನದಿಂದ ದಿನಕ್ಕೆ ಒತ್ತಾಯದ ರೂಪ ಪಡೆದುಕೊಳ್ಳುತ್ತಿದೆ. ಕನ್ನಡ ನಾಡು ಸದಾ ಸ್ಮರಿಸುವ ದಿವಂಗತ ನಟ ಪುನೀತ್ ರಾಜಕುಮಾರ್ (Puneeth Rajkumar) ಹಾಗೂ ವಿರಾಟ್ ಕೊಹ್ಲಿ (Virat Kohli) ಅವರ ಹೆಸರನ್ನು ಎರಡು ಪ್ರತ್ಯೇಕ ರಸ್ತೆಗಳಿಗೆ ಇರಿಸುವ ಮೂಲಕ ಅಭಿಮಾನಿಗಳ ಆಶಯ ಈಡೇರಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಶಾಂತಿನಗರ ಬಸ್ ಟರ್ಮಿನಲ್ ಎದುರಿನ ಪುನೀತ್ ರಾಜಕುಮಾರ್ ಅವರ ಹೆಸರು ಹಾಗೂ ವಿಲ್ಸನ್​ ಗಾರ್ಡನ್​ನ 8ನೇ ಅಡ್ಡರಸ್ತೆಗೆ ವಿರಾಟ್ ಕೊಹ್ಲಿ ಹೆಸರು ಇಡಬೇಕು ಎಂದು ಬಿಬಿಎಂಪಿ ಆಡಳಿತಾಧಿಕಾರಿ, ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತರು ಸರ್ಕಾರದ ಜೊತೆಗೆ ಚರ್ಚೆ ನಡೆಸಲು ಮುಂದಾಗಿದ್ದಾರೆ. ವಿಲ್ಸನ್ ಗಾರ್ಡನ್​ನ 8ನೇ ಅಡ್ಡರಸ್ತೆ ಹಾಗೂ ಶಾಂತಿನಗರ ಬಸ್ ನಿಲ್ದಾಣದ ಮುಂಭಾಗದ ರಸ್ತೆಗಳಿಗೆ ಈವರೆಗೆ ಯಾವುದೇ ಅಧಿಕೃತ ಹೆಸರು ಇರಿಸಿಲ್ಲ.

ಕರ್ನಾಟಕದ ವಿವಿಧೆಡೆ ಹಲವು ರಸ್ತೆಗಳಿಗೆ ಪುನೀತ್ ಹೆಸರು

ಕನ್ನಡಿಗರ ನೆಚ್ಚಿನ ನಟ ಪುನೀತ್ ರಾಜಕುಮಾರ್ ಹೆಸರನ್ನು ರಾಜ್ಯದ ವಿವಿಧ ಊರುಗಳಲ್ಲಿ ಈಗಾಗಲೇ ರಸ್ತೆ, ವೃತ್ತಗಳಿಗೆ ಇರಿಸಲಾಗಿದೆ. ಬೆಂಗಳೂರಿನ ಕೆಂಗೇರಿ ಸಮೀಪದ ಜ್ಞಾನಭಾರತಿ 1ನೇ ಬ್ಲಾಕ್​ನಲ್ಲಿ ಸಂತೋಷ್ ಎಂಬ ಅಭಿಮಾನಿ ‘ಅಪ್ಪು ಗುಡಿ’ ಹೆಸರಿನಲ್ಲಿ ಸ್ವಂತ ಖರ್ಚಿನಲ್ಲಿ ಸ್ಮಾರಕ ನಿರ್ಮಿಸಿ, ಪ್ರತಿಮೆ ಸ್ಥಾಪಿಸಿದ್ದಾರೆ. ಕೆಂಗೇರಿಯಿಂದ ಬನ್ನೇರುಘಟ್ಟ ಸಂಪರ್ಕಿಸುವ ಸಿಗ್ನಲ್ ಬಳಿಯ ರಸ್ತೆಗೆ ‘ಪುನೀತ್ ರಾಜಕುಮಾರ್ ರಸ್ತೆ’ ಎಂದು ಸರ್ಕಾರವೇ ಅಧಿಕೃತವಾಗಿ ನಾಮಕರಣ ಮಾಡಿದೆ.

ಬೆಳಗಾವಿ ತಾಲ್ಲೂಕಿನ ಮರಿಕಟ್ಟೆ ಗ್ರಾಮದಲ್ಲಿ ಪುನೀತ್ ರಾಜಕುಮಾರ್ ಹೆಸರನ್ನು ಗಲ್ಲಿಯೊಂದಕ್ಕೆ ಇರಿಸಿ ಅಭಿಮಾನ ಮೆರೆಯಲಾಗಿದೆ. ಕೊಪ್ಪಳದ ಸಂತೆ ಮೈದಾನಕ್ಕೆ ‘ಅಪ್ಪು ಸಂತೆ ಮಾರುಕಟ್ಟೆ’ ಎಂದು ನಾಮಕರಣ ಮಾಡಲಾಗಿದೆ. ಮಂಗಳೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಭದ್ರಾವತಿ ನಗರಗಳಲ್ಲಿಯೂ ಪುನೀತ್ ರಾಜಕುಮಾರ್ ಅವರಿಗೆ ಅಭಿಮಾನಿಗಳು ಗೌರವ ಸಲ್ಲಿಸಿವೆ.

Published On - 10:23 am, Sun, 30 October 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!