AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ ಟು ಯಶವಂತಪುರ ರಸ್ತೆಗೆ ಲೀಲಾವತಿ ಹೆಸರಿಡಲು ಬಿಬಿಎಂಪಿಗೆ ಪತ್ರ ಬರೆದು ಮನವಿ

ಬೆಂಗಳೂರಿನ ಹಲವು ರಸ್ತೆಗಳಿಗೆ ಪುನೀತ್ ರಾಜ್ ಕುಮಾರ್, ವಿಷ್ಣುವರ್ಧನ್, ರಾಜ್ ಕುಮಾರ್ ಸೇರಿದಂತೆ ಹಲವು ಪ್ರಸಿದ್ಧ ನಟರ ಹೆಸರಿಡಲಾಗಿದೆ. ಇದೇ ರೀತಿ ನೆಲಮಂಗಲದಿಂದ ಯಶವಂತಪುರ ಸಂಪರ್ಕಿಸುವ ರಸ್ತೆಗೆ ನಟಿ ಲೀಲಾವತಿ ಹೆಸರಿಡುವಂತೆ ಬಿಬಿಎಂಪಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಪಾಲಿಕೆ ಮುಖ್ಯ ಆಯುಕ್ತರಿಗೆ ಮನವಿ ಪತ್ರ ನೀಡೋ ಮೂಲಕ ಆಗ್ರಹ ಮಾಡಿದ್ದಾರೆ.

ನೆಲಮಂಗಲ ಟು ಯಶವಂತಪುರ ರಸ್ತೆಗೆ ಲೀಲಾವತಿ ಹೆಸರಿಡಲು ಬಿಬಿಎಂಪಿಗೆ ಪತ್ರ ಬರೆದು ಮನವಿ
ಹಿರಿಯ ನಟಿ ಲೀಲಾವತಿ
ಆಯೇಷಾ ಬಾನು
|

Updated on: Dec 12, 2023 | 10:50 AM

Share

ಬೆಂಗಳೂರು, ಡಿ.12: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಮುಖ ರಸ್ತೆಗಳಿಗೆ ಎಂಟ್ರಿಯಾದ್ರೆ ಸೆಲೆಬ್ರೆಟಿಗಳೋ, ಸಾಹಿತಿಗಳೋ ಅಥವಾ ಯಾವುದಾದ್ರೂ ಕ್ಷೇತ್ರದ ಗಣ್ಯರ ಹೆಸರಿರೋ ಬೋರ್ಡ್ ಕಣ್ಣಿಗೆ ಬೀಳುತ್ತೆ. ಇದೀಗ ಬೆಂಗಳೂರಿನ ಪ್ರತಿಷ್ಠಿತ ರಸ್ತೆಯೊಂದಕ್ಕೆ ಮೊನ್ನೆಯಷ್ಟೇ ಅಗಲಿದ ಹಿರಿಯ ನಟಿ ಲೀಲಾವತಿ (Actress Leelavathi) ಹೆಸರಿಡಬೇಕೆಂಬ ಕೂಗು ಕೇಳಿಬರ್ತಿದೆ.

ಕನ್ನಡ ಚಿತ್ರರಂಗದ ಕಳಸದಂತಿದ್ದ ನಟಿ ಲೀಲಾವತಿ ಮಣ್ಣಿನಲ್ಲಿ ಲೀನರಾಗಿ ಐದಾರು ದಿನಗಳೇ ಕಳೆಯುತ್ತಾ ಬಂದ್ರೂ ಅವರ ನೆನಪುಗಳು ಅಳಿಸಿಲ್ಲ. ಬರೀ ಸಿನಿಮಾ ಮಾತ್ರವಲ್ಲ ಸಾಮಾಜಿಕ ಸೇವೆಯಲ್ಲೂ ಹತ್ತಾರು ಜನರಿಗೆ ನೆರವಾಗಿದ್ದ ಲೀಲಾವತಿಯವರಿಗೆ ರಾಜ್ಯ ಸರ್ಕಾರ ಗೌರವ ಸ್ಥಾನ ನೀಡುವಂತೆ ಕೂಗು ಕೇಳಿಬಂದಿದೆ. ಬೆಂಗಳೂರಿನ ರಸ್ತೆಗೆ ಲೀಲಾವತಿಯವರ ಹೆಸರಿಡಬೇಕು ಅನ್ನೋ ಆಗ್ರಹ ಕೂಡ ಕೇಳಿಬರ್ತಿದೆ.

ಇದನ್ನೂ ಓದಿ: Leelavathi No More: ಸಕಲ ಸರ್ಕಾರೀ ಗೌರವ ಮತ್ತು ಬಂಟ ಸಂಪ್ರದಾಯದಂತೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ

ಬೆಂಗಳೂರಿನ ಹಲವು ರಸ್ತೆಗಳಿಗೆ ಪುನೀತ್ ರಾಜ್ ಕುಮಾರ್, ವಿಷ್ಣುವರ್ಧನ್, ರಾಜ್ ಕುಮಾರ್ ಸೇರಿದಂತೆ ಹಲವು ಪ್ರಸಿದ್ಧ ನಟರ ಹೆಸರಿಡಲಾಗಿದೆ. ಇದೇ ರೀತಿ ನೆಲಮಂಗಲದಿಂದ ಯಶವಂತಪುರ ಸಂಪರ್ಕಿಸುವ ರಸ್ತೆಗೆ ನಟಿ ಲೀಲಾವತಿ ಹೆಸರಿಡುವಂತೆ ಬಿಬಿಎಂಪಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಪಾಲಿಕೆ ಮುಖ್ಯ ಆಯುಕ್ತರಿಗೆ ಮನವಿ ಪತ್ರ ನೀಡೋ ಮೂಲಕ ಆಗ್ರಹ ಮಾಡಿದ್ದಾರೆ.

ಇನ್ನು ಈಗಾಗಲೇ ಲೀಲಾವತಿಯವರ ಸಿನಿಮಾ ರಂಗದ ಸಾಧನೆ ಜೊತೆಗೆ ಸಾಮಾಜಿಕ ಕೆಲಸಗಳನ್ನ ಗುರ್ತಿಸಿರೋ ಸರ್ಕಾರ, ಅವರ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ಸಲ್ಲಿಸಿ ಗೌರವ ಸೂಚಿಸಿತ್ತು. ಇದೀಗ ಪಾಲಿಕೆಯ ಆಯುಕ್ತರ ಮೂಲಕ ನೆಲಮಂಗಲ ಟು ಯಶವಂತಪುರ ರಸ್ತೆಗೆ ಲೀಲಾವತಿಯವರ ಹೆಸರಿಡೋ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಸದ್ಯ ಸರ್ಕಾರ ಪುನೀತ್ ರಾಜ್ ಕುಮಾರ್ ಮರಣದ ಬಳಿಕ ರಸ್ತೆಗಳಿಗೆ ಅವರ ಹೆಸರು ನಾಮಕರಣ ಮಾಡಿದ ಹಾಗೇ, ಇದೀಗ ಬಂದಿರೋ ಮನವಿಗೆ ಹೇಗೆ ಸ್ಪಂದಿಸುತ್ತೆ ಅನ್ನೋದನ್ನ ಕಾದುನೋಡಬೇಕಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು