AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್​ಗೆ ಚಿಕಿತ್ಸೆ ನೀಡಿದ್ದ ವೈದ್ಯರ ವಿರುದ್ಧ ಅವಹೇಳನ: ಮುಖ್ಯಮಂತ್ರಿಗೆ ಫನಾ ಪತ್ರ

ಎಲ್ಲಾ ಸಂದರ್ಭದಲ್ಲೂ ರೋಗಿಗಳ ಜೀವ ಉಳಿಸಲು ಸಾಧ್ಯವಾಗುವುದಿಲ್ಲ. ವೈದ್ಯರಿಗೆ ಅವರದ್ದೇ ಆದ ಇತಿಮಿತಿಗಳು ಇರುತ್ತವೆ ಎಂದು ಫನಾ ಹೇಳಿದೆ.

ಪುನೀತ್ ರಾಜ್​ಕುಮಾರ್​ಗೆ ಚಿಕಿತ್ಸೆ ನೀಡಿದ್ದ ವೈದ್ಯರ ವಿರುದ್ಧ ಅವಹೇಳನ: ಮುಖ್ಯಮಂತ್ರಿಗೆ ಫನಾ ಪತ್ರ
ಡಾ.ರಮಣರಾವ್ ಮತ್ತು ಪುನೀತ್ ರಾಜ್​ಕುಮಾರ್
TV9 Web
| Edited By: |

Updated on: Nov 06, 2021 | 8:20 PM

Share

ಬೆಂಗಳೂರು: ಖ್ಯಾತ ನಟ ಪುನೀತ್ ರಾಜ್​ಕುಮಾರ್ ಅವರಿಗೆ ಎದೆನೋವು ಕಾಣಿಸಿಕೊಂಡ ತಕ್ಷಣ ಚಿಕಿತ್ಸೆ ನೀಡಿದ್ದ ವೈದ್ಯ ರಮಣರಾವ್ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನ ನಡೆಯುತ್ತಿರುವ ಬಗ್ಗೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳ ಒಕ್ಕೂಟವು (ಫನಾ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಗಮನ ಸೆಳೆದಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ರಮಣರಾವ್ ಅವರ ಕ್ಲಿನಿಕ್​ಗೆ ಪುನೀತ್ ರಾಜ್​ಕುಮಾರ್ ಮೊದಲು ಭೇಟಿ ನೀಡಿದ್ದರು. ಅಲ್ಲಿ ವೈದ್ಯ ಡಾ.ರಮಣರಾವ್ ಅವರ ಸೂಚನೆ ಮೇರೆಗೆ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪುನೀತ್ ರಾಜ್​ಕುಮಾರ್ ನಿಧನರಾದರು. ಈ ವಿಚಾರದಲ್ಲಿ ವೈದ್ಯರ ಕರ್ತವ್ಯಲೋಪವಿದೆ ಎಂದು ಕೆಲ ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿ, ದೂರುತ್ತಿದ್ದಾರೆ.

ಈ ವಿಚಾರದ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದು ಗಮನ ಸೆಳೆದಿರುವ ಫನಾ ಅಧ್ಯಕ್ಷ ಡಾ.ಪ್ರಸನ್ನ, ಸಾವಿನ ಬಗ್ಗೆ ಚರ್ಚೆಯಿಂದ ವೈದ್ಯಕೀಯ ಗೌಪ್ಯತೆ ಉಲ್ಲಂಘನೆಯಾಗುತ್ತಿದೆ. ಈ ವಿಚಾರದಲ್ಲಿ ಎಫ್​ಐಆರ್ ಅಥವಾ ಪಿಸಿಆರ್ ದಾಖಲಿಸುವ ಮುನ್ನ ಸುಪ್ರೀಂಕೋರ್ಟ್​ ರೂಪಿಸಿರುವ ನಿಯಮಾವಳಿಗಳನ್ನು ಗಮನಿಸಬೇಕು ಎಂದು ಹೇಳಿದ್ದಾರೆ.

ಎಲ್ಲಾ ಸಂದರ್ಭದಲ್ಲೂ ರೋಗಿಗಳ ಜೀವ ಉಳಿಸಲು ಸಾಧ್ಯವಾಗುವುದಿಲ್ಲ. ವೈದ್ಯರಿಗೆ ಅವರದ್ದೇ ಆದ ಇತಿಮಿತಿಗಳು ಇರುತ್ತವೆ. ನಟ ಪುನೀತ್​ಗೆ ಚಿಕಿತ್ಸೆ ನೀಡಿದ್ದ ವೈದ್ಯಕೀಯ ಸಿಬ್ಬಂದಿಗೆ ರಾಜ್ಯ ಸರ್ಕಾರ ರಕ್ಷಣೆ ಒದಗಿಸಬೇಕು ಎಂದು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಡಾ.ಪ್ರಸನ್ನ ಮನವಿ ಮಾಡಿದ್ದಾರೆ. ವೈದ್ಯಕೀಯ ಚಿಕಿತ್ಸೆ, ವೈದ್ಯಕೀಯ ವೃತ್ತಿ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡಬಾರದೆಂಬ ನಿಯಮವಿದೆ. ಚರ್ಚೆಯಿಂದ ಸುಪ್ರೀಂಕೋರ್ಟ್​ ನಿಯಮಾವಳಿಗಳು ಉಲ್ಲಂಘನೆಯಾಗುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪುನೀತ್ ಎದೆನೋವಿನೊಂದಿಗೆ ಕ್ಲಿನಿಕ್​​​​​ಗೆ ಬಂದಾಗ ಸೂಕ್ತ ಚಿಕಿತ್ಸೆ ನೀಡಿ ದೊಡ್ಡ ಆಸ್ಪತ್ರೆಗೆ ಕರೆದೊಯ್ಯುವ ಸಲಹೆ ನೀಡಲಾಯಿತು: ಡಾ ರಮಣ ರಾವ್ ಇದನ್ನೂ ಓದಿ: ಅಪ್ಪುದು ಸಡನ್ ಡೆತ್ -ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ: ಕೊನೆಯ ಕ್ಷಣ ವಿವರಿಸಿದ ಡಾ. ರಮಣ, ವಿಡಿಯೋ ನೋಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!