AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ರೈತರ ಪ್ರತಿಭಟನೆ ಕಾಂಗ್ರೆಸ್‌ ಪೋಷಿತ, ಟೂಲ್‌ಕಿಟ್‌ನ ಮುಂದುವರಿದ ಭಾಗ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ

R Ashoka Leader of Opposition: ಲೋಕಸಭೆ ಚುನಾವಣೆಯಲ್ಲಿ ಸೋಲುವುದು ಗ್ಯಾರಂಟಿ ಎಂದು ಕಾಂಗ್ರೆಸ್ ನಿಶ್ಚಯ ಮಾಡಿಕೊಂಡಿದೆ. ಹೇಗಿದ್ದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ರಾಹುಲ್‌ ಗಾಂಧಿ ಮತ್ತಿತರ ಕಾಂಗ್ರೆಸ್‌ ನಾಯಕರು ಬೇಕಾಬಿಟ್ಟಿ ಹೇಳಿಕೆ ನೀಡುವ ಮೂಲಕ ರೈತರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ - ಆರ್. ಅಶೋಕ ಕಿಡಿ

ದೆಹಲಿಯಲ್ಲಿ ರೈತರ ಪ್ರತಿಭಟನೆ ಕಾಂಗ್ರೆಸ್‌ ಪೋಷಿತ, ಟೂಲ್‌ಕಿಟ್‌ನ ಮುಂದುವರಿದ ಭಾಗ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ
ಸ್ವಾಮಿನಾಥನ್‌ ವರದಿ ತಿರಸ್ಕರಿಸಿದ್ದ ಕಾಂಗ್ರೆಸ್‌ ಬುರುಡೆ ಬಿಡ್ತಿದೆ - ಅಶೋಕ
ಸಾಧು ಶ್ರೀನಾಥ್​
|

Updated on: Feb 15, 2024 | 3:34 PM

Share

ಬೆಂಗಳೂರು, ಫೆಬ್ರವರಿ 15: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ (Farmers Protest) ಕಾಂಗ್ರೆಸ್‌ ಪೋಷಿತವಾಗಿದ್ದು, ಹಿಂದಿನಂತೆಯೇ ಟೂಲ್‌ಕಿಟ್‌ನ ಒಂದು ಭಾಗವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ (R Ashoka, Leader of Opposition) ಹೇಳಿದರು. ಈ ಕುರಿತು ಮಾತನಾಡಿದ ಅವರು, ಈ ಹಿಂದೆ ಕೇಂದ್ರ ಸರ್ಕಾರ ಜಾರಿ ಮಾಡಿದ್ದ ಕೃಷಿ ಮಸೂದೆಗಳ ವಿಚಾರದಲ್ಲೂ ಕಾಂಗ್ರೆಸ್‌ ಇದೇ ಟೂಲ್‌ಕಿಟ್‌ ತಂತ್ರವನ್ನು ಅನುಸರಿಸಿತ್ತು. ಹಿಂದಿನ ಯುಪಿಎ ಸರ್ಕಾರಕ್ಕಿಂತ ಹೆಚ್ಚು ನೆರವನ್ನು ರೈತರಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ರಾಜ್ಯದ ಕಾಂಗ್ರೆಸ್ (Congress) ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ತಂದಿದ್ದ ರೈತ ಪರ ಯೋಜನೆಗಳನ್ನು ಸ್ಥಗಿತಗೊಳಿಸಿದೆ. ರೈತ ವಿರೋಧಿ ಮನೋಭಾವದ ಕಾಂಗ್ರೆಸ್ ಈಗ ಪ್ರತಿಭಟನೆಯ ನಾಟಕ ಶುರು ಮಾಡಿದೆ ಎಂದು ದೂರಿದರು.

ಸ್ವಾಮಿನಾಥನ್ ವರದಿ ತಿರಸ್ಕೃತ

ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಗ್ಯಾರಂಟಿ ನೀಡುತ್ತೇವೆಂದು ಕಾಂಗ್ರೆಸ್ ಬುರುಡೆ ಬಿಟ್ಟಿದೆ. 2010 ರಲ್ಲಿ ತಮ್ಮದೇ ಯುಪಿಎ ಸರ್ಕಾರ ಇದ್ದಾಗ ಡಾ.ಎಂ.ಎಸ್.ಸ್ವಾಮಿನಾಥನ್ ಅವರು ಕನಿಷ್ಠ ಬೆಂಬಲ ಬೆಲೆ ಬಗ್ಗೆ ನೀಡಿದ್ದ ವರದಿಯನ್ನು ಸಾರಾಸಗಟಾಗಿ ತಿರಸ್ಕಾರ ಮಾಡಿತ್ತು ಎಂದು ಆರ್.ಅಶೋಕ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಸೋಲುವುದು ಗ್ಯಾರಂಟಿ ಎಂದು ಕಾಂಗ್ರೆಸ್ ನಿಶ್ಚಯ ಮಾಡಿಕೊಂಡಿದೆ. ಹೇಗಿದ್ದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ರಾಹುಲ್‌ ಗಾಂಧಿ ಮತ್ತಿತರ ಕಾಂಗ್ರೆಸ್‌ ನಾಯಕರು ಬೇಕಾಬಿಟ್ಟಿ ಹೇಳಿಕೆ ನೀಡುವ ಮೂಲಕ ರೈತರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ರೈತರ ಆದಾಯ ಹೆಚ್ಚಿಸಲು, ಅನ್ನದಾತರ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕಿಸಲು ಯಾರಾದರೂ ಪ್ರಾಮಾಣಿಕ ಪ್ರಯತ್ನ ಪಟ್ಟಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಾತ್ರ ಎಂದು ಹೇಳಿದರು.

ಎಂಎಸ್‌ಪಿ ದುಪ್ಪಟ್ಟು

2014-15 ರಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ರೈತರಿಗೆ ನೀಡುವ ಕನಿಷ್ಠ ಬೆಂಬಲ ಬೆಲೆಗೆ 1.06 ಲಕ್ಷ ಕೋಟಿ ರೂ. ಖರ್ಚು ಮಾಡಿದೆ. ಆದರೆ 2022-23 ರಲ್ಲಿ ಪ್ರಧಾನಿ ಮೋದಿ ಅವರ ಸರ್ಕಾರ 2.28 ಲಕ್ಷ ಕೋಟಿ ರೂ. ಖರ್ಚು ಮಾಡಿದೆ. ಈ ಮೂಲಕ ಬೆಂಬಲ ಬೆಲೆಯನ್ನು ದುಪ್ಪಟ್ಟು ಮಾಡಿದೆ ಎಂದು ಆರ್.ಅಶೋಕ ವಿವರಿಸಿದ್ದಾರೆ.

ಭತ್ತದ ಬೆಂಬಲ ಬೆಲೆ 67% ಹೆಚ್ಚಳವಾಗಿದೆ. 2013-14 ರಲ್ಲಿ ಭತ್ತಕ್ಕೆ ಕ್ವಿಂಟಾಲ್‌ಗೆ 1,310 ರೂ. ಇದ್ದರೆ, 2023-24 ರಲ್ಲಿ ಕ್ವಿಂಟಾಲ್‌ಗೆ 2,183 ರೂ. ಆಗಿದೆ. ರಾಗಿಯ ಬೆಂಬಲ ಬೆಲೆ 156% ಹೆಚ್ಚಳವಾಗಿದೆ. 2013-14 ರಲ್ಲಿ ರಾಗಿಗೆ ಕ್ವಿಂಟಾಲ್‌ಗೆ 1,500 ರೂ. ಇದ್ದರೆ, 2023-24 ರಲ್ಲಿ ಕ್ವಿಂಟಾಲ್‌ಗೆ 3,846 ರೂ. ಆಗಿದೆ. ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ 59% ಹೆಚ್ಚಳವಾಗಿದೆ. 2013-14 ರಲ್ಲಿ ಮೆಕ್ಕೆಜೋಳಕ್ಕೆ ಕ್ವಿಂಟಾಲ್‌ಗೆ 1,310 ರೂ. ಇದ್ದರೆ, 2023-24 ರಲ್ಲಿ ಕ್ವಿಂಟಾಲ್‌ಗೆ 2,090 ರೂ. ಆಗಿದೆ. ಈ ರೀತಿ 23 ಬೆಳೆಗಳಿಗೆ ಬೆಂಬಲ ಬೆಲೆ ನೀಡುವುದರ ಜೊತೆಗೆ, ಬೆಂಬಲ ಬೆಲೆಯಲ್ಲಿ ಅಗಾಧ ಸುಧಾರಣೆ ತಂದಿದ್ದೇ ಮೋದಿ ಸರ್ಕಾರ ಎಂದು ಅವರು ತಿಳಿಸಿದ್ದಾರೆ.

ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಈವರೆಗೆ ದೇಶದ 11.8 ಕೋಟಿ ರೈತರಿಗೆ 2.80 ಲಕ್ಷ ಕೋಟಿ ರೂ. ನೀಡಲಾಗಿದೆ. ಕಿಸಾನ್‌ ರೈಲು ಮೂಲಕ ಕೃಷಿ ಉತ್ಪನ್ನಗಳನ್ನು ಸಾಗಣೆ ಮಾಡಲು 50% ಸಾರಿಗೆ ಸಹಾಯಧನ ನೀಡಲಾಗುತ್ತಿದೆ. 7.48 ಕೋಟಿ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ವಿತರಿಸಿ 9 ಲಕ್ಷ ಕೋಟಿ ರೂ. ಸಾಲ ನೀಡಲಾಗಿದೆ. ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಯಡಿ 47.4 ಕೋಟಿ ರೈತರು ಹೆಸರು ನೋಂದಾಯಿಸಿದ್ದಾರೆ. ಪಿಎಂ ಕೃಷಿ ಸಿಂಚಾಯಿ ಯೋಜನೆಯಡಿ ರೈತರಿಗೆ 2021-2023 ರವರೆಗೆ 93,063 ಕೋಟಿ ರೂ. ನೀಡಲಾಗಿದೆ ಎಂದು ವಿವರಿಸಿದರು.

ಬಜೆಟ್‌ಗೆ 5 ಪಟ್ಟು ಅಧಿಕ

ಎನ್‌ಡಿಎ ಸರ್ಕಾರ ಕೃಷಿ ಆಯವ್ಯಯಕ್ಕಾಗಿ 5 ಪಟ್ಟು ಅಧಿಕ ಅನುದಾನ ನೀಡಿದೆ. 2013-2014 ರಲ್ಲಿ 21,933 ಕೋಟಿ ರೂ. ನೀಡಿದ್ದರೆ, 2023-24 ರಲ್ಲಿ 1,25,036 ಕೋಟಿ ರೂ. ನೀಡಲಾಗಿದೆ ಎಂದು ಆರ್.ಅಶೋಕ ತಿಳಿಸಿದ್ದಾರೆ.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್