Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಜೊತೆ ಪ್ರಿಯಕರನ ಚಲ್ಲಾಟ; ಪ್ರಿಯಕರನನ್ನು ಹತ್ಯೆಗೈದಿದ್ದ ಆರೋಪಿ ತಂದೆ ಅರೆಸ್ಟ್

ಆರೋಪಿ ನಾರಾಯಣ್, ತನ್ನ ಮಗಳನ್ನು ಪ್ರೀತಿಸುತ್ತಿದ್ದ ನಿವೇಶ್ ಕುಮಾರ್ನನ್ನು ಕೆಲ ದಿನಗಳ ಹಿಂದೆ ಕೊಲೆ ಮಾಡಿದ್ದ. ಆರೋಪಿ ನಾರಾಯಣ್ ಮನೆಯಲ್ಲಿ ಇಲ್ಲದ ಸಮಯದಲ್ಲಿ ನಿವೇಶ್ ನಾರಾಯಣ್ ಮನೆಗೆ ಬಂದಿದ್ದ. ಇದೇ ವೇಳೆ ಆಚೆ ಹೋಗಿದ್ದ ನಾರಾಯಣ ಮನೆಗೆ ಹಿಂತಿರುಗಿದ್ದ.

ಮಗಳ ಜೊತೆ ಪ್ರಿಯಕರನ ಚಲ್ಲಾಟ; ಪ್ರಿಯಕರನನ್ನು ಹತ್ಯೆಗೈದಿದ್ದ ಆರೋಪಿ ತಂದೆ ಅರೆಸ್ಟ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Dec 05, 2021 | 11:08 AM

ಬೆಂಗಳೂರು: ಮಗಳ ಪ್ರಿಯಕರನನ್ನು ಹತ್ಯೆಗೈದಿದ್ದ ಆರೋಪಿ ತಂದೆಯನ್ನು ಬೆಂಗಳೂರಿನ ವಿ.ವಿ.ಪುರಂ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವಿನೋಬನಗರ ನಿವಾಸಿ ನಾರಾಯಣ ಬಂಧಿತ ಆರೋಪಿ. ನಿವೇಶ್ ಕುಮಾರ್(19) ಕೊಲೆಯಾದ ಯುವಕ.

ಆರೋಪಿ ನಾರಾಯಣ್, ತನ್ನ ಮಗಳನ್ನು ಪ್ರೀತಿಸುತ್ತಿದ್ದ ನಿವೇಶ್ ಕುಮಾರ್ನನ್ನು ಕೆಲ ದಿನಗಳ ಹಿಂದೆ ಕೊಲೆ ಮಾಡಿದ್ದ. ಆರೋಪಿ ನಾರಾಯಣ್ ಮನೆಯಲ್ಲಿ ಇಲ್ಲದ ಸಮಯದಲ್ಲಿ ನಿವೇಶ್ ನಾರಾಯಣ್ ಮನೆಗೆ ಬಂದಿದ್ದ. ಇದೇ ವೇಳೆ ಆಚೆ ಹೋಗಿದ್ದ ನಾರಾಯಣ ಮನೆಗೆ ಹಿಂತಿರುಗಿದ್ದ. ಮನೆಗೆ ಬರುತ್ತಿದ್ದಂತೆ ಮಗಳು ಆತನ ಪ್ರಿಯಕರನ ಜೊತೆ ಇರುವುದನ್ನು ಕಂಡು ಕೋಪಗೊಂಡು ನಿವೇಶ್ ಹತ್ಯೆಗೈದಿದ್ದಾನೆ.

ನಾರಾಯಣ್ ಮನೆಯಲ್ಲಿದ್ದ ಕಟ್ಟಿಗೆಯಿಂದ ನಿವೇಶ್ ತಲೆಗೆ ಹೊಡೆದಿದ್ದಾನೆ. ನಂತರ ಅಪರಿಚಿತ ಎಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ ಆ ವೇಳೆಗೆ ನಿವೇಶ್ ಮೃತಪಟ್ಟಿದ್ದ. ಕಲಾಸಿಪಾಳ್ಯ ಪೊಲೀಸರು ಆಸ್ಪತ್ರೆ ಮಾಹಿತಿ ಅಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ನಡುವೆ ನಿವೇಶ್ ಕಾಣಿಸುತ್ತಿಲ್ಲ ಎಂದು ನಿವೇಶ್ ಪೋಷಕರು ವಿ.ವಿ.ಪುರಂ ಠಾಣೆಗೆ ದೂರು ನೀಡಿದ್ದರು. ಈ ವೇಳೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶವ ತೋರಿಸಿದಾಗ ನಿವೇಶ್ ಗುರುತು ಪತ್ತೆಯಾಗಿದೆ. ನಿವೇಶ್ನನ್ನು ಆಸ್ಪತ್ರೆಗೆ ದಾಖಲಿಸಿದ ನಾರಾಯಣ್ ವಿಚಾರಣೆ ನಡೆಸಿದಾಗ ಕೊಲೆ ವಿಚಾರ ಬಯಲಾಗಿದೆ. ಕಲಾಸಿಪಾಳ್ಯದಿಂದ ಪ್ರಕರಣ ವರ್ಗಾಯಿಸಿಕೊಂಡು ವಿ.ವಿ.ಪುರಂ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಇದನ್ನೂ ಓದಿ: Mohammed Siraj: ನ್ಯೂಜಿಲೆಂಡ್ 62 ರನ್​ಗೆ ಆಲೌಟ್ ಮಾಡಲು ಮಾಸ್ಟರ್ ಪ್ಲಾನ್ ರೂಪಿಸಿದ್ದ ಮೊಹಮ್ಮದ್ ಸಿರಾಜ್: ಏನಂದ್ರು ಕೇಳಿ

‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ