AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಜೊತೆ ಪ್ರಿಯಕರನ ಚಲ್ಲಾಟ; ಪ್ರಿಯಕರನನ್ನು ಹತ್ಯೆಗೈದಿದ್ದ ಆರೋಪಿ ತಂದೆ ಅರೆಸ್ಟ್

ಆರೋಪಿ ನಾರಾಯಣ್, ತನ್ನ ಮಗಳನ್ನು ಪ್ರೀತಿಸುತ್ತಿದ್ದ ನಿವೇಶ್ ಕುಮಾರ್ನನ್ನು ಕೆಲ ದಿನಗಳ ಹಿಂದೆ ಕೊಲೆ ಮಾಡಿದ್ದ. ಆರೋಪಿ ನಾರಾಯಣ್ ಮನೆಯಲ್ಲಿ ಇಲ್ಲದ ಸಮಯದಲ್ಲಿ ನಿವೇಶ್ ನಾರಾಯಣ್ ಮನೆಗೆ ಬಂದಿದ್ದ. ಇದೇ ವೇಳೆ ಆಚೆ ಹೋಗಿದ್ದ ನಾರಾಯಣ ಮನೆಗೆ ಹಿಂತಿರುಗಿದ್ದ.

ಮಗಳ ಜೊತೆ ಪ್ರಿಯಕರನ ಚಲ್ಲಾಟ; ಪ್ರಿಯಕರನನ್ನು ಹತ್ಯೆಗೈದಿದ್ದ ಆರೋಪಿ ತಂದೆ ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Dec 05, 2021 | 11:08 AM

Share

ಬೆಂಗಳೂರು: ಮಗಳ ಪ್ರಿಯಕರನನ್ನು ಹತ್ಯೆಗೈದಿದ್ದ ಆರೋಪಿ ತಂದೆಯನ್ನು ಬೆಂಗಳೂರಿನ ವಿ.ವಿ.ಪುರಂ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವಿನೋಬನಗರ ನಿವಾಸಿ ನಾರಾಯಣ ಬಂಧಿತ ಆರೋಪಿ. ನಿವೇಶ್ ಕುಮಾರ್(19) ಕೊಲೆಯಾದ ಯುವಕ.

ಆರೋಪಿ ನಾರಾಯಣ್, ತನ್ನ ಮಗಳನ್ನು ಪ್ರೀತಿಸುತ್ತಿದ್ದ ನಿವೇಶ್ ಕುಮಾರ್ನನ್ನು ಕೆಲ ದಿನಗಳ ಹಿಂದೆ ಕೊಲೆ ಮಾಡಿದ್ದ. ಆರೋಪಿ ನಾರಾಯಣ್ ಮನೆಯಲ್ಲಿ ಇಲ್ಲದ ಸಮಯದಲ್ಲಿ ನಿವೇಶ್ ನಾರಾಯಣ್ ಮನೆಗೆ ಬಂದಿದ್ದ. ಇದೇ ವೇಳೆ ಆಚೆ ಹೋಗಿದ್ದ ನಾರಾಯಣ ಮನೆಗೆ ಹಿಂತಿರುಗಿದ್ದ. ಮನೆಗೆ ಬರುತ್ತಿದ್ದಂತೆ ಮಗಳು ಆತನ ಪ್ರಿಯಕರನ ಜೊತೆ ಇರುವುದನ್ನು ಕಂಡು ಕೋಪಗೊಂಡು ನಿವೇಶ್ ಹತ್ಯೆಗೈದಿದ್ದಾನೆ.

ನಾರಾಯಣ್ ಮನೆಯಲ್ಲಿದ್ದ ಕಟ್ಟಿಗೆಯಿಂದ ನಿವೇಶ್ ತಲೆಗೆ ಹೊಡೆದಿದ್ದಾನೆ. ನಂತರ ಅಪರಿಚಿತ ಎಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ ಆ ವೇಳೆಗೆ ನಿವೇಶ್ ಮೃತಪಟ್ಟಿದ್ದ. ಕಲಾಸಿಪಾಳ್ಯ ಪೊಲೀಸರು ಆಸ್ಪತ್ರೆ ಮಾಹಿತಿ ಅಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ನಡುವೆ ನಿವೇಶ್ ಕಾಣಿಸುತ್ತಿಲ್ಲ ಎಂದು ನಿವೇಶ್ ಪೋಷಕರು ವಿ.ವಿ.ಪುರಂ ಠಾಣೆಗೆ ದೂರು ನೀಡಿದ್ದರು. ಈ ವೇಳೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶವ ತೋರಿಸಿದಾಗ ನಿವೇಶ್ ಗುರುತು ಪತ್ತೆಯಾಗಿದೆ. ನಿವೇಶ್ನನ್ನು ಆಸ್ಪತ್ರೆಗೆ ದಾಖಲಿಸಿದ ನಾರಾಯಣ್ ವಿಚಾರಣೆ ನಡೆಸಿದಾಗ ಕೊಲೆ ವಿಚಾರ ಬಯಲಾಗಿದೆ. ಕಲಾಸಿಪಾಳ್ಯದಿಂದ ಪ್ರಕರಣ ವರ್ಗಾಯಿಸಿಕೊಂಡು ವಿ.ವಿ.ಪುರಂ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಇದನ್ನೂ ಓದಿ: Mohammed Siraj: ನ್ಯೂಜಿಲೆಂಡ್ 62 ರನ್​ಗೆ ಆಲೌಟ್ ಮಾಡಲು ಮಾಸ್ಟರ್ ಪ್ಲಾನ್ ರೂಪಿಸಿದ್ದ ಮೊಹಮ್ಮದ್ ಸಿರಾಜ್: ಏನಂದ್ರು ಕೇಳಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ