AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಜೊತೆ ಪ್ರಿಯಕರನ ಚಲ್ಲಾಟ; ಪ್ರಿಯಕರನನ್ನು ಹತ್ಯೆಗೈದಿದ್ದ ಆರೋಪಿ ತಂದೆ ಅರೆಸ್ಟ್

ಆರೋಪಿ ನಾರಾಯಣ್, ತನ್ನ ಮಗಳನ್ನು ಪ್ರೀತಿಸುತ್ತಿದ್ದ ನಿವೇಶ್ ಕುಮಾರ್ನನ್ನು ಕೆಲ ದಿನಗಳ ಹಿಂದೆ ಕೊಲೆ ಮಾಡಿದ್ದ. ಆರೋಪಿ ನಾರಾಯಣ್ ಮನೆಯಲ್ಲಿ ಇಲ್ಲದ ಸಮಯದಲ್ಲಿ ನಿವೇಶ್ ನಾರಾಯಣ್ ಮನೆಗೆ ಬಂದಿದ್ದ. ಇದೇ ವೇಳೆ ಆಚೆ ಹೋಗಿದ್ದ ನಾರಾಯಣ ಮನೆಗೆ ಹಿಂತಿರುಗಿದ್ದ.

ಮಗಳ ಜೊತೆ ಪ್ರಿಯಕರನ ಚಲ್ಲಾಟ; ಪ್ರಿಯಕರನನ್ನು ಹತ್ಯೆಗೈದಿದ್ದ ಆರೋಪಿ ತಂದೆ ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Dec 05, 2021 | 11:08 AM

Share

ಬೆಂಗಳೂರು: ಮಗಳ ಪ್ರಿಯಕರನನ್ನು ಹತ್ಯೆಗೈದಿದ್ದ ಆರೋಪಿ ತಂದೆಯನ್ನು ಬೆಂಗಳೂರಿನ ವಿ.ವಿ.ಪುರಂ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವಿನೋಬನಗರ ನಿವಾಸಿ ನಾರಾಯಣ ಬಂಧಿತ ಆರೋಪಿ. ನಿವೇಶ್ ಕುಮಾರ್(19) ಕೊಲೆಯಾದ ಯುವಕ.

ಆರೋಪಿ ನಾರಾಯಣ್, ತನ್ನ ಮಗಳನ್ನು ಪ್ರೀತಿಸುತ್ತಿದ್ದ ನಿವೇಶ್ ಕುಮಾರ್ನನ್ನು ಕೆಲ ದಿನಗಳ ಹಿಂದೆ ಕೊಲೆ ಮಾಡಿದ್ದ. ಆರೋಪಿ ನಾರಾಯಣ್ ಮನೆಯಲ್ಲಿ ಇಲ್ಲದ ಸಮಯದಲ್ಲಿ ನಿವೇಶ್ ನಾರಾಯಣ್ ಮನೆಗೆ ಬಂದಿದ್ದ. ಇದೇ ವೇಳೆ ಆಚೆ ಹೋಗಿದ್ದ ನಾರಾಯಣ ಮನೆಗೆ ಹಿಂತಿರುಗಿದ್ದ. ಮನೆಗೆ ಬರುತ್ತಿದ್ದಂತೆ ಮಗಳು ಆತನ ಪ್ರಿಯಕರನ ಜೊತೆ ಇರುವುದನ್ನು ಕಂಡು ಕೋಪಗೊಂಡು ನಿವೇಶ್ ಹತ್ಯೆಗೈದಿದ್ದಾನೆ.

ನಾರಾಯಣ್ ಮನೆಯಲ್ಲಿದ್ದ ಕಟ್ಟಿಗೆಯಿಂದ ನಿವೇಶ್ ತಲೆಗೆ ಹೊಡೆದಿದ್ದಾನೆ. ನಂತರ ಅಪರಿಚಿತ ಎಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ ಆ ವೇಳೆಗೆ ನಿವೇಶ್ ಮೃತಪಟ್ಟಿದ್ದ. ಕಲಾಸಿಪಾಳ್ಯ ಪೊಲೀಸರು ಆಸ್ಪತ್ರೆ ಮಾಹಿತಿ ಅಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ನಡುವೆ ನಿವೇಶ್ ಕಾಣಿಸುತ್ತಿಲ್ಲ ಎಂದು ನಿವೇಶ್ ಪೋಷಕರು ವಿ.ವಿ.ಪುರಂ ಠಾಣೆಗೆ ದೂರು ನೀಡಿದ್ದರು. ಈ ವೇಳೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶವ ತೋರಿಸಿದಾಗ ನಿವೇಶ್ ಗುರುತು ಪತ್ತೆಯಾಗಿದೆ. ನಿವೇಶ್ನನ್ನು ಆಸ್ಪತ್ರೆಗೆ ದಾಖಲಿಸಿದ ನಾರಾಯಣ್ ವಿಚಾರಣೆ ನಡೆಸಿದಾಗ ಕೊಲೆ ವಿಚಾರ ಬಯಲಾಗಿದೆ. ಕಲಾಸಿಪಾಳ್ಯದಿಂದ ಪ್ರಕರಣ ವರ್ಗಾಯಿಸಿಕೊಂಡು ವಿ.ವಿ.ಪುರಂ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಇದನ್ನೂ ಓದಿ: Mohammed Siraj: ನ್ಯೂಜಿಲೆಂಡ್ 62 ರನ್​ಗೆ ಆಲೌಟ್ ಮಾಡಲು ಮಾಸ್ಟರ್ ಪ್ಲಾನ್ ರೂಪಿಸಿದ್ದ ಮೊಹಮ್ಮದ್ ಸಿರಾಜ್: ಏನಂದ್ರು ಕೇಳಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್