AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಜೊತೆ ಪ್ರಿಯಕರನ ಚಲ್ಲಾಟ; ಪ್ರಿಯಕರನನ್ನು ಹತ್ಯೆಗೈದಿದ್ದ ಆರೋಪಿ ತಂದೆ ಅರೆಸ್ಟ್

ಆರೋಪಿ ನಾರಾಯಣ್, ತನ್ನ ಮಗಳನ್ನು ಪ್ರೀತಿಸುತ್ತಿದ್ದ ನಿವೇಶ್ ಕುಮಾರ್ನನ್ನು ಕೆಲ ದಿನಗಳ ಹಿಂದೆ ಕೊಲೆ ಮಾಡಿದ್ದ. ಆರೋಪಿ ನಾರಾಯಣ್ ಮನೆಯಲ್ಲಿ ಇಲ್ಲದ ಸಮಯದಲ್ಲಿ ನಿವೇಶ್ ನಾರಾಯಣ್ ಮನೆಗೆ ಬಂದಿದ್ದ. ಇದೇ ವೇಳೆ ಆಚೆ ಹೋಗಿದ್ದ ನಾರಾಯಣ ಮನೆಗೆ ಹಿಂತಿರುಗಿದ್ದ.

ಮಗಳ ಜೊತೆ ಪ್ರಿಯಕರನ ಚಲ್ಲಾಟ; ಪ್ರಿಯಕರನನ್ನು ಹತ್ಯೆಗೈದಿದ್ದ ಆರೋಪಿ ತಂದೆ ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Dec 05, 2021 | 11:08 AM

Share

ಬೆಂಗಳೂರು: ಮಗಳ ಪ್ರಿಯಕರನನ್ನು ಹತ್ಯೆಗೈದಿದ್ದ ಆರೋಪಿ ತಂದೆಯನ್ನು ಬೆಂಗಳೂರಿನ ವಿ.ವಿ.ಪುರಂ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವಿನೋಬನಗರ ನಿವಾಸಿ ನಾರಾಯಣ ಬಂಧಿತ ಆರೋಪಿ. ನಿವೇಶ್ ಕುಮಾರ್(19) ಕೊಲೆಯಾದ ಯುವಕ.

ಆರೋಪಿ ನಾರಾಯಣ್, ತನ್ನ ಮಗಳನ್ನು ಪ್ರೀತಿಸುತ್ತಿದ್ದ ನಿವೇಶ್ ಕುಮಾರ್ನನ್ನು ಕೆಲ ದಿನಗಳ ಹಿಂದೆ ಕೊಲೆ ಮಾಡಿದ್ದ. ಆರೋಪಿ ನಾರಾಯಣ್ ಮನೆಯಲ್ಲಿ ಇಲ್ಲದ ಸಮಯದಲ್ಲಿ ನಿವೇಶ್ ನಾರಾಯಣ್ ಮನೆಗೆ ಬಂದಿದ್ದ. ಇದೇ ವೇಳೆ ಆಚೆ ಹೋಗಿದ್ದ ನಾರಾಯಣ ಮನೆಗೆ ಹಿಂತಿರುಗಿದ್ದ. ಮನೆಗೆ ಬರುತ್ತಿದ್ದಂತೆ ಮಗಳು ಆತನ ಪ್ರಿಯಕರನ ಜೊತೆ ಇರುವುದನ್ನು ಕಂಡು ಕೋಪಗೊಂಡು ನಿವೇಶ್ ಹತ್ಯೆಗೈದಿದ್ದಾನೆ.

ನಾರಾಯಣ್ ಮನೆಯಲ್ಲಿದ್ದ ಕಟ್ಟಿಗೆಯಿಂದ ನಿವೇಶ್ ತಲೆಗೆ ಹೊಡೆದಿದ್ದಾನೆ. ನಂತರ ಅಪರಿಚಿತ ಎಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ ಆ ವೇಳೆಗೆ ನಿವೇಶ್ ಮೃತಪಟ್ಟಿದ್ದ. ಕಲಾಸಿಪಾಳ್ಯ ಪೊಲೀಸರು ಆಸ್ಪತ್ರೆ ಮಾಹಿತಿ ಅಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ನಡುವೆ ನಿವೇಶ್ ಕಾಣಿಸುತ್ತಿಲ್ಲ ಎಂದು ನಿವೇಶ್ ಪೋಷಕರು ವಿ.ವಿ.ಪುರಂ ಠಾಣೆಗೆ ದೂರು ನೀಡಿದ್ದರು. ಈ ವೇಳೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶವ ತೋರಿಸಿದಾಗ ನಿವೇಶ್ ಗುರುತು ಪತ್ತೆಯಾಗಿದೆ. ನಿವೇಶ್ನನ್ನು ಆಸ್ಪತ್ರೆಗೆ ದಾಖಲಿಸಿದ ನಾರಾಯಣ್ ವಿಚಾರಣೆ ನಡೆಸಿದಾಗ ಕೊಲೆ ವಿಚಾರ ಬಯಲಾಗಿದೆ. ಕಲಾಸಿಪಾಳ್ಯದಿಂದ ಪ್ರಕರಣ ವರ್ಗಾಯಿಸಿಕೊಂಡು ವಿ.ವಿ.ಪುರಂ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಇದನ್ನೂ ಓದಿ: Mohammed Siraj: ನ್ಯೂಜಿಲೆಂಡ್ 62 ರನ್​ಗೆ ಆಲೌಟ್ ಮಾಡಲು ಮಾಸ್ಟರ್ ಪ್ಲಾನ್ ರೂಪಿಸಿದ್ದ ಮೊಹಮ್ಮದ್ ಸಿರಾಜ್: ಏನಂದ್ರು ಕೇಳಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!